ತಿರುಚ್ಚಿ: ತಮಿಳುನಾಡಿನ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಘೋಷಿಸಿದ್ದಾರೆ.

ಪುದುಕ್ಕೊಟ್ಟೈನಲ್ಲಿ ಇಂದು ವಿವಿಧ ಸರ್ಕಾರಿ ಕಲ್ಯಾಣ ಯೋಜನೆಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು. ಲಸಿಕೆ ಬಳಕೆಗೆ ಸಿಕ್ಕ ಬಳಿಕ, ತಮಿಳುನಾಡು ಸರ್ಕಾರವು ಸಾರ್ವಜನಿಕರಿಗೆ ಉಚಿತವಾಗಿ ಲಸಿಕೆ ನೀಡುತ್ತದೆ ಎಂದು ಹೇಳಿದ್ದಾರೆ.

ಈ ವಿಷಯವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಅವಧಿಯಲ್ಲಿ ಸರ್ಕಾರ ಕೈಗೊಂಡ ಕ್ರಮಗಳು ಮತ್ತು ಜಾಗೃತಿ ಅಭಿಯಾನದ ಕುರಿತು ಮಾಹಿತಿ ನೀಡಿದ್ದಾರೆ.

ಇತ್ತೀಚೆಗಷ್ಟೇ ಬಿಹಾರ ಉಪ ಚುನಾವಣೆ ಅಂಗವಾಗಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿರುವ ಬಿಜೆಪಿ, ತನ್ನ ಪ್ರಣಾಳಿಕೆಯಲ್ಲಿ ಉಚಿತ ಕೊರೊನಾ ಲಸಿಕೆ ನೀಡುವ ಕುರಿತು ಘೋಷಣೆ ಮಾಡಿತ್ತು. ಬಿಹಾರ ಬಿಜೆಪಿ ಬೆನ್ನಲ್ಲಿಯೇ ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷ ಕೂಡ ಅದೇ ಹಾದಿಯಲ್ಲಿಯೇ ಸಾಗಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದ 2 ಜಿಲ್ಲೆಗಳು ಸೇರಿದಂತೆ ದೇಶದ 25 ಜಿಲ್ಲೆಗಳಲ್ಲಿಯೇ ಮಹಾಮಾರಿಗೆ ಬಲಿಯಾದವರ ಪ್ರಮಾಣ ಶೇ. 48ರಷ್ಟು!

ನವದೆಹಲಿ : ದೇಶದಲ್ಲಿ ಆರಂಭದಲ್ಲಿ ಕೊರೊನಾ ಅಟ್ಟಾಹಸವನ್ನು ಕಟ್ಟಿ ಹಾಕಿದ್ದರೂ ಆ ನಂತರ ಅದು ತನ್ನ ವ್ಯಾಪ್ತಿ ಮೀರುತ್ತಿದೆ. ಹೀಗಾಗಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ.

ಯುದ್ಧಕ್ಕೆ ಸಿದ್ಧ ಎಂಬ ಸಂದೇಶವನ್ನು ಚೀನಾಕ್ಕೆ ನೀಡುತ್ತಿದೆ ಭಾರತ?

ಲಡಾಖ್‌: ಲಡಾಖ್‌ನಲ್ಲಿ ಚೀನಾ ಸೇನೆಯಿಂದ ಗಡಿ ಕ್ಯಾತೆ ಮುಂದುವರೆದ ನಡುವೆಯೇ ಭಾರತ ಯುದ್ಧಕ್ಕೆ ಸಿದ್ಧ ಎಂಬ…

ನಿರ್ಮಾಣ ಹಂತದ ಸೇತುವೆ ಕುಸಿತ: ಮೂವರು ಭಾರತೀಯ ಸಾವು

ಉತ್ತರಾಖಂಡ ಹಿಮ ಸ್ಫೋಟದಲ್ಲಿ ತಪೋವನ ಜಲವಿದ್ಯುತ್ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ೩೦ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿದ್ದು ಇದರ ಬೆನ್ನಲ್ಲೇ ಭೂತಾನ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತದಲ್ಲಿ ಮೂವರು ಭಾರತೀಯ ಕಾರ್ಮಿಕರು ದುರ್ಮರಣ ಹೊಂದಿದ್ದು ಇನ್ನು ಆರು ಮಂದಿ ನಾಪತ್ತೆಯಾಗಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಗಸ್ಟ್ 10 ರಂದು ಅದ್ದೂರಿ ಬಾಬಾ ಲಖಿ ಶಾ ಬಂಜಾರ ಜಯಂತಿ

ಉತ್ತರಪ್ರಭ ದೆಹಲಿ: ಆಗಸ್ಟ್ 10 ರಂದು ದೆಹಲಿಯಲ್ಲಿ ಅದ್ದೂರಿ ಬಾಬಾ ಲಖಿ ಶಾ ಜಯಂತಿ ಆಚರಣೆ.…