ಬೆಂಗಳೂರು : ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ನಾವು ಎಂದಿಗೂ ಸಹಿಸುವುದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿದ್ದವರಿಗೆ ಉತ್ತರ ಕರ್ನಾಟಕವೆಂದರೆ ಅಲರ್ಜಿ ಎಂಬಂತಾಗಿದೆ. ಕಚೇರಿಗಳನ್ನು ಸ್ಥಳಾಂತರಿಸುವುದಾಗಲಿ, ಉಪ ಕುಲಪತಿಗಳನ್ನು ನೇಮಕ ಮಾಡಲಿ. ಅಭಿವೃದ್ದಿ ಕೆಲಸಗಳನ್ನು ಮಾಡದೆ ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಅನ್ಯಾಯ ಮಾಡುತ್ತಿರುವುದನ್ನು ಬಹಳ ಕಾಲ ಸಹಿಸಲು ಸಾಧ್ಯವಿಲ್ಲ ಎಂದು ಆರೋಪಿಸಿದ್ದಾರೆ.

ಹೊರಟ್ಟಿ ಅವರು ಗೃಹ ಸಚಿವರಿಗೆ ದೀರ್ಘ ಪತ್ರ ಬರೆದು, ತಮ್ಮ ನೋವು ತೋಡಿಕೊಂಡು, ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ಧಾರವಾಡದ ಉಚ್ಛ ನ್ಯಾಯಾಲಯಕ್ಕೆ ನೇಮಕ ವಿಷಯವಾಗಲಿ, ಬೋರ್ಡ್, ಕಾರ್ಪೋರೇಶನ್ ವಿಚಾರದಲ್ಲಿ, ಕೆಪಿಎಸ್ಸಿ ಸದಸ್ಯರನ್ನು ನೇಮಿಸುವ ವಿಚಾರ, ಕೆಎಎಸ್ ಅಧಿಕಾರಿಗಳನ್ನು ನೇಮಕ ಮಾಡುವ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದಂತೆ ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯುತ್ತಿದ್ದಾರೆ : ಕಟೀಲ್

ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದ ರೀತಿಯಲ್ಲಿ, ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯಲು ಹೊರಟಿದ್ದಾರೆ. ಸಂಕಷ್ಟದ ಈ ಸಂದರ್ಭದಲ್ಲಿ ರಾಜಕೀಯ ಮಾಡುವ ಹೇಯ ಕೃತ್ಯ ಸಿದ್ದರಾಮಯ್ಯ ನಡೆಸಿದ್ದಾರೆ.

ವಿವಿಧ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆರ ಮನವಿ

ಮುಖ್ಯವಾಗಿ ಜಿಲ್ಲೆಯಲ್ಲಿನ ಆಯಾ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗು ಸಹಾಯಕಿಯರು ಎದುರಿಸುತ್ತಿರುವ ಸಮಸ್ಯೆಗಳ ಜೊತೆಗೆ ರಾಜ್ಯಮಟ್ಟದಲ್ಲಿನ ವಿವಿಧ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ಜಿಲ್ಲಾ ಸಮಿತಿಯಿಂದ ಸೋಮವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಡಿಸೆಂಬರ್ ಅಂತ್ಯದವರೆಗೆ ಶಾಲೆ ಆರಂಭವಿಲ್ಲ, ಮುಂದಿನ ನಡೆ ಡಿಸೆಂಬರ್ ನಂತರ ತೀರ್ಮಾನ

ಕೋವಿಡ್ 19 ಹಿನ್ನೆಲೆ ಈಗಾಗಲೇ ಶೈಕ್ಷನಿಕ ವರ್ಷದಲ್ಲಿ ಶಾಲೆಗಳಿನ್ನು ಆರಂಭವಾಗಿಲ್ಲ. ಡಿ.17ಕ್ಕೆ ಸರ್ಕಾರ ಕೆಲವು ಮಾರ್ಗಸೂಚಿಗಳನ್ವಯ ಕಾಲೇಜು ಆರಂಭಕ್ಕೆ ಅನುಮತಿ ನೀಡಿದೆ. ಆದರೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆರಂಭದ ಕುರಿತು ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿತ್ತು.