ಅಬುಧಾಬಿ : ಭಾರತ ತಂಡದ ನಾಯಕ ಹಾಗೂ ಆರ್ ಸಿಬಿಯ ಕಿಂಗ್ ಕೊಹ್ಲಿ ಶಾಲಾ ದಿನಗಳನ್ನು ನೆನಪು ಮಾಡಿಕೊಂಡಿದ್ದಾರೆ.

ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಆರ್ ಸಿಬಿ ಪಂದ್ಯ ಗೆಲ್ಲುವ ಫೆವರಿಟ್ ತಂಡಗಳಲ್ಲಿ ಒಂದಾಗಿದೆ. ನಾಯಕ ವಿರಾಟ್ ಕೊಹ್ಲಿ ಮತ್ತು ಎಬಿಡಿ ವಿಲಿಯರ್ಸ್ ಉತ್ತಮ ಫಾರ್ಮ್ ನಲ್ಲಿ ಇದ್ದಾರೆ. ಬೌಲರ್ ಗಳು ಕೂಡ ಮಿಂಚುತ್ತಿದ್ದಾರೆ. ಈಗಾಗಲೇ ಟೂರ್ನಿಯಲ್ಲಿ ಆಡಿರುವ 10 ಪಂದ್ಯಗಳಲ್ಲಿ ಏಳರಲ್ಲಿ ಗೆದ್ದು ಮೂರರಲ್ಲಿ ಸೋತು 14 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

ನಿನ್ನೆ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲ ಬ್ಯಾಟ್ ಮಾಡಿದ ಕೋಲ್ಕತ್ತಾ ತಂಡವು ಬೆಂಗಳೂರಿನ ಬೌಲರ್ ಗಳ ಮಾರಕ ಬೌಲಿಂಗ್ ತಬ್ಬಿಬ್ಬಾದರು. ನಿಗದಿತ 20 ಓವರ್ ಗಳಲ್ಲಿ ಎಂಟು ವಿಕೆಟ್ ಕಳೆದುಕೊಂಡು ಕೇವಲ 84 ರನ್ ಗಳಿಗೆ ಆಲ್ ಔಟ್ ಆಯಿತು. ಈ ಸುಲಭದ ಗುರಿ ಬೆನ್ನಟ್ಟಿದ ಆರ್‌ ಸಿಬಿ ತಂಡ ಇನ್ನೂ 6.3 ಓವರ್ ಬಾಕಿ ಇರುವಾಗಲೇ 8 ವಿಕೆಟ್ ಗಳ ಅಂತರದ ಜಯ ಗಳಿಸಿ 14 ಅಂಕಗಳೊಂದಿಗೆ ಎರಡನೇ ಸ್ಥಾನ ಗಳಿಸಿದೆ. 

ಪಂದ್ಯ ಗೆದ್ದಿರುವ ಖುಷಿಯಲ್ಲಿರುವ ಕೊಹ್ಲಿ ಟ್ವೀಟ್ ಮಾಡಿದ್ದು, ಈ ಫೋಟೋವನ್ನು ನೋಡುತ್ತಿದ್ದರೆ, ನನ್ನ ಶಾಲಾ ದಿನಗಳೇ ನನಗೆ ನೆನಪಿಗೆ ಬರುತ್ತಿವೆ. ನಾಲ್ಕು ಹುಡುಗರು ಒಂದೇ ತರಗತಿಯವರು ಮತ್ತು ಎಬಿ ಮನೆಯಲ್ಲಿಯೇ ಹೋಂ ವಾರ್ಕ್ ಮಾಡಿ ತಯಾರಾಗಿ ಬಂದಿದ್ದಾರೆ. ಇದರ ಜೊತೆಗೆ ಉಳಿದ ಮೂವರು ಹುಡುಗರನ್ನು ತೊಂದರೆಗೆ ಸಿಲುಕಿಸಿದ್ದಾರೆ ಎಂದು ಫನ್ನಿಯಾಗಿ ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಜಡೇಜಾಗೆ ಧೋನಿ ಕೊನೆಯ ಓವರ್ ನೀಡಿದ್ದೇಕೆ?

ಶಾರ್ಜಾ : ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ತಂಡ ನಿನ್ನೆ ನಡೆದ ಪಂದ್ಯದಲ್ಲಿ ಸೋಲು ಕಂಡಿದೆ. ರೋಚಕ ಹಂತಕ್ಕೆ ಬಂದು ತಲುಪಿದ್ದ ಪಂದ್ಯದಲ್ಲಿ ಧೋನಿ ಅವರ ಕೆಟ್ಟ ನಿರ್ಧಾರದಿಂದಾಗಿ ಸೋಲು ಕಾಣುವಂತಾಯಿತು ಎಂದು ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಎಡಗೈ ಆಟಗಾರರು ನಿಜವಾಗಿಯೂ ಪ್ರತಿಭಾವಂತರೆ?

ಭಾರತ ತಂಡದ ಪ್ರತಿಭಾವಂತೆ ಹಾಗೂ ಸ್ಟೈಲಿಷ್ಟ್ ಆಟಗಾರ್ತಿ ಸ್ಮೃತಿ ಮಂಧನಾ ಅವರು ಶನಿವಾರ ತಮ್ಮ 24ನೇ ಹುಟ್ಟು ಹಬ್ಬದ ಸಂಭ್ರಮ ಆಚರಿಸಿಕೊಂಡಿದ್ದಾರೆ. ಅವರಿಗೆ ಖ್ಯಾತ ಆಟಗಾರರು ಹಾಗೂ ಅಭಿಮಾನಿ

ಮೊದಲ 8 ಬೌಲ್ ಗೆ ತಾಳ್ಮೆ…ಆ ನಂತರ 9 ಬೌಲ್ ಗೆರೆ ದಾಟಿ ಹೋದವು!

ಅಬುಧಾಬಿ : ಭಾನುವಾರ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ತಂಡಕ್ಕೆ ಚೇತರಿಕೆ ನೀಡುವುದರ ಮೂಲಕ ಭರ್ಜರಿ ಆಟ ಪ್ರದರ್ಶಿಸಿದ್ದಾರೆ.

ಚೆನ್ನೈ ತಂಡದ ಕೆಲವರು ಸರ್ಕಾರಿ ನೌಕರಿ ಸಿಕ್ಕಂತೆ ಮಾಡುತ್ತಿದ್ದಾರೆ – ಸೆಹ್ವಾಗ್!

ಮುಂಬಯಿ : ಟೀಂ ಇಂಡಿಯಾದ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.