ಬೆಂಗಳೂರು: ಪತಿಯು ಅಶ್ಲೀಲ ವಿಡಿಯೋ ನೋಡುವಂತೆ ಪೀಡಿಸುತ್ತಿದ್ದಾನೆ ಎಂದು ಆರೋಪಿಸಿ ಪತ್ನಿ ದೂರು ದಾಖಲಿಸಿರುವ ಘಟನೆ ನಡೆದಿದೆ. 

ಆರೋಪಿ ಪತಿ ಲತೀರ್ ರೆಹಮಾನ್ ವಿರುದ್ಧ ವೈದ್ಯೆಯೊಬ್ಬರು ದೂರು ದಾಖಲಿಸಿದ್ದಾರೆ. ಅಲ್ಲದೇ, ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದಾನೆ ಎಂದು ವೈದ್ಯೆ ಆರೋಪಿಸಿದ್ದಾರೆ.

ಅಶ್ಲೀಲ ವಿಡಿಯೋ ನೋಡುವಂತೆ ಪತಿ ಕಿರುಕುಳ ನೀಡುತ್ತಾನೆ ಎಂದು ಕಿರುಕುಳ ತಾಳಲಾರದೆ ಸಂತ್ರಸ್ತೆ ಬಸವನಗುಡಿಯ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.  ಈ ದೂರಿನ ಆಧಾರದ ಮೇಲೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಆರೋಪಿ ಲತೀರ್ ರೆಹಮಾನ್ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದಾನೆ.

ಲತೀರ್ ಅವರು ಕಳೆದ ವರ್ಷ ವೈದ್ಯೆಯನ್ನು ವಿವಾಹವಾಗಿದ್ದರು. ಆ ನಂತರ ವರದಕ್ಷಿಣೆಗಾಗಿ ಕಿರುಕುಳ ನೀಡಲು ಪ್ರಾರಂಭಿಸಿದ್ದಾನೆ. ಹೆಚ್ಚಿನ ವರದಕ್ಷಿಣೆಗಾಗಿ ಗಂಡನ ಮನೆಯವರು ನನ್ನ ಚಿನ್ನಾಭರಣ ಕಸಿದು ಹೊರದಬ್ಬಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಅಲ್ಲದೇ, ಈತ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಲ್ಲದೆ, ಅಶ್ಲೀಲ ವಿಡಿಯೋಗಳನ್ನು ನೋಡಿ, ನನಗೂ ನೋಡುವಂತೆ ಒತ್ತಾಯಿಸುತ್ತಿದ್ದ. ನಾನು ಒಪ್ಪದಿದ್ದಾಗ ಬಾಯಿಗೆ ಬಂದಂತೆ ಬೈಯುತ್ತಿದ್ದ. ಮಾತ್ರೆಗಳನ್ನು ತೆಗೆದುಕೊಳ್ಳುವುದನ್ನು ಪ್ರಶ್ನಿಸಿದ್ದಕ್ಕೆ ಜಗಳ ಮಾಡುತ್ತಿದ್ದ. ಅಲ್ಲದೆ ಬಕ್ರೀದ್ ಹಬ್ಬದ ಸಮಯದಲ್ಲಿ ಮನೆಯಿಂದ ಚಿನ್ನದ ಒಡವೆ ಹಾಗೂ ಹಣ ತರುವಂತೆ ಕಿರುಕುಳ ನೀಡುತ್ತಿದ್ದ. ಆಸ್ಪತ್ರೆಯಲ್ಲಿ ಕೆಲಸ ಮಾಡಿ ಹಣವನ್ನು ನಮಗೆ ನೀಡಬೇಕು ಎಂದು ಪತಿ ಕುಟುಂಬಸ್ಥರು ಬೆದರಿಕೆ ಹಾಕುತ್ತಿದ್ದರು.

ಅಲ್ಲದೇ, ಆತ ದುಬೈನಲ್ಲಿ ದುಬೈನಲ್ಲಿ ಬೆಟ್ಟಿಂಗ್ ಆಡುತ್ತಿದ್ದು, ಈ ವಿಚಾರವನ್ನು ಮನೆಯವರಿಗೆ ತಿಳಿಸಿದರೆ ಈ ಕುರಿತು ಯಾರಿಗಾದರೂ ಹೇಳಿದರೆ ನಿನ್ನ ಜೀವನವನ್ನು ಹಾಳು ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು. ಅಲ್ಲದೆ ನನ್ನ ಬಟ್ಟೆ, ದಾಖಲಾತಿಗಳ ಸಮೇತ ನನ್ನನ್ನು ರೂಮ್ ನಿಂದ  ಹೊರ ಹಾಕಿದ್ದರು. ತನ್ನ ಸ್ನೇಹಿತರಿಗೆ ನನ್ನ ಫೋಟೋ ಕಳುಹಿಸಿ ಕೆಟ್ಟ ಅಭಿಪ್ರಾಯ ಬರುವ ಹಾಗೆ ಅವಮಾನಿಸಿದ್ದಾನೆ ಎಂದು ಅವಮಾನಿಸಿದ್ದಾನೆ ಎಂದು ಆರೋಪಿಸಿದ್ದಾಳೆ.

Leave a Reply

Your email address will not be published. Required fields are marked *

You May Also Like

ಮಲೆನಾಡ ಜನರ ನಿದ್ದೆಗೆಡಿಸಿದ ಪಾದರಾಯನಪುರ!

ಪಾದರಾಯನಪುರದ ಗಲಾಟೆ ಮಲೆನಾಡಿನಲ್ಲಿ ಭಯ ಹುಟ್ಟಿಸುತ್ತಿದೆ. ಕೊರೊನಾ ದೇಶ ಹಾಗೂ ರಾಜ್ಯದಲ್ಲಿ ವಕ್ಕರಿಸಿದ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ಒಂದು ಕೇಸ್ ಕೂಡ ಇರಲಿಲ್ಲ. ಆದರೆ, ಸದ್ಯ ಈ ಜಿಲ್ಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಕೊರೊನಾದ ಭಯಕ್ಕೆ ಇಡೀ ಹಳ್ಳಿಯೇ ಸ್ತಬ್ಧ!

ವಿಜಯಪುರ: ಕೊರೊನಾದ ಭಯಕ್ಕೆ ಜಿಲ್ಲೆಯ ಸಿಂಧಗಿ ತಾಲೂಕಿನ ಗಣಿಹಾರ ಗ್ರಾಮ ಸಂಪೂರ್ಣವಾಗಿ ಬೆಚ್ಚಿ ಬಿದ್ದಿದೆ. ಗಂಟಲು…

ಮಸ್ಕಿ: ಚನ್ನಬಸವ ಕುಟುಂಬಕ್ಕೆ ಸಹಾಯಧನ ವಿತರಣೆ

ಹಳ್ಳದ ಪ್ರವಾಹದಲ್ಲಿ ಕೊಚ್ಚಿ ಹೋದ ಚನ್ನಬಸವ ಮಡಿವಾಳ ಅವರ ಮನೆಗೆ ತುಂಗಾಭದ್ರ ಕಾಡಾ ಅಧ್ಯಕ್ಷ ಆರ್ ಬಸನಗೌಡ ತುರವಿಹಾಳ ಅವರ ಭೇಟಿ ನೀಡಿ ಅವರ ಕುಟುಂಬಕ್ಕೆ 50 ಸಾವಿರ ಸಹಾಯಧನ ನೀಡಿದರು. ಬಳಿಕ‌ ಆರ್ ಬಸನಗೌಡ ತುರವಿಹಾಳ ಅವರು ಮಾತನಾಡಿ, ಚನ್ನಬಸವನನ್ನು ಹುಡಕಲು ತಾಲೂಕ ಆಡಳಿತ ಸಾಕಷ್ಟು ಪ್ರಯತ್ನ ಪಟ್ಟಿದೆ. ಆದರೂ ಅವರ ದೇಹ ಸಿಗಲಿಲ್ಲ. ಈ ಕುರಿತು ರಾಜ್ಯ ಸರಕಾರ ಗಮನಕ್ಕೆ ತಂದು ಸೂಕ್ತ ಪರಿಹಾರ ನೀಡಲು ಒತ್ತಾಯ ಮಾಡುತ್ತೇನೆ ಎಂದರು.

ರೈತರಿಂದ ರಾಜ್ಯ ಬಂದ್ ಗೆ ಕರೆ – ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಮುಂದೂಡಿಕೆ!

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಲ್ಲಿ ಬದಲಾವಣೆ ತರುವಂತೆ ಆಗ್ರಹಿಸಿ ರೈತ ಸಂಘಟನೆಗಳು ಕರೆ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸೆ. 28ರಂದು ನಡೆಯಬೇಕಿದ್ದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯನ್ನು ಮುಂದೂಡಲಾಗಿದೆ.