ಬೆಂಗಳೂರು: ಪತಿಯು ಅಶ್ಲೀಲ ವಿಡಿಯೋ ನೋಡುವಂತೆ ಪೀಡಿಸುತ್ತಿದ್ದಾನೆ ಎಂದು ಆರೋಪಿಸಿ ಪತ್ನಿ ದೂರು ದಾಖಲಿಸಿರುವ ಘಟನೆ ನಡೆದಿದೆ. 

ಆರೋಪಿ ಪತಿ ಲತೀರ್ ರೆಹಮಾನ್ ವಿರುದ್ಧ ವೈದ್ಯೆಯೊಬ್ಬರು ದೂರು ದಾಖಲಿಸಿದ್ದಾರೆ. ಅಲ್ಲದೇ, ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದಾನೆ ಎಂದು ವೈದ್ಯೆ ಆರೋಪಿಸಿದ್ದಾರೆ.

ಅಶ್ಲೀಲ ವಿಡಿಯೋ ನೋಡುವಂತೆ ಪತಿ ಕಿರುಕುಳ ನೀಡುತ್ತಾನೆ ಎಂದು ಕಿರುಕುಳ ತಾಳಲಾರದೆ ಸಂತ್ರಸ್ತೆ ಬಸವನಗುಡಿಯ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.  ಈ ದೂರಿನ ಆಧಾರದ ಮೇಲೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಆರೋಪಿ ಲತೀರ್ ರೆಹಮಾನ್ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದಾನೆ.

ಲತೀರ್ ಅವರು ಕಳೆದ ವರ್ಷ ವೈದ್ಯೆಯನ್ನು ವಿವಾಹವಾಗಿದ್ದರು. ಆ ನಂತರ ವರದಕ್ಷಿಣೆಗಾಗಿ ಕಿರುಕುಳ ನೀಡಲು ಪ್ರಾರಂಭಿಸಿದ್ದಾನೆ. ಹೆಚ್ಚಿನ ವರದಕ್ಷಿಣೆಗಾಗಿ ಗಂಡನ ಮನೆಯವರು ನನ್ನ ಚಿನ್ನಾಭರಣ ಕಸಿದು ಹೊರದಬ್ಬಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಅಲ್ಲದೇ, ಈತ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಲ್ಲದೆ, ಅಶ್ಲೀಲ ವಿಡಿಯೋಗಳನ್ನು ನೋಡಿ, ನನಗೂ ನೋಡುವಂತೆ ಒತ್ತಾಯಿಸುತ್ತಿದ್ದ. ನಾನು ಒಪ್ಪದಿದ್ದಾಗ ಬಾಯಿಗೆ ಬಂದಂತೆ ಬೈಯುತ್ತಿದ್ದ. ಮಾತ್ರೆಗಳನ್ನು ತೆಗೆದುಕೊಳ್ಳುವುದನ್ನು ಪ್ರಶ್ನಿಸಿದ್ದಕ್ಕೆ ಜಗಳ ಮಾಡುತ್ತಿದ್ದ. ಅಲ್ಲದೆ ಬಕ್ರೀದ್ ಹಬ್ಬದ ಸಮಯದಲ್ಲಿ ಮನೆಯಿಂದ ಚಿನ್ನದ ಒಡವೆ ಹಾಗೂ ಹಣ ತರುವಂತೆ ಕಿರುಕುಳ ನೀಡುತ್ತಿದ್ದ. ಆಸ್ಪತ್ರೆಯಲ್ಲಿ ಕೆಲಸ ಮಾಡಿ ಹಣವನ್ನು ನಮಗೆ ನೀಡಬೇಕು ಎಂದು ಪತಿ ಕುಟುಂಬಸ್ಥರು ಬೆದರಿಕೆ ಹಾಕುತ್ತಿದ್ದರು.

ಅಲ್ಲದೇ, ಆತ ದುಬೈನಲ್ಲಿ ದುಬೈನಲ್ಲಿ ಬೆಟ್ಟಿಂಗ್ ಆಡುತ್ತಿದ್ದು, ಈ ವಿಚಾರವನ್ನು ಮನೆಯವರಿಗೆ ತಿಳಿಸಿದರೆ ಈ ಕುರಿತು ಯಾರಿಗಾದರೂ ಹೇಳಿದರೆ ನಿನ್ನ ಜೀವನವನ್ನು ಹಾಳು ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು. ಅಲ್ಲದೆ ನನ್ನ ಬಟ್ಟೆ, ದಾಖಲಾತಿಗಳ ಸಮೇತ ನನ್ನನ್ನು ರೂಮ್ ನಿಂದ  ಹೊರ ಹಾಕಿದ್ದರು. ತನ್ನ ಸ್ನೇಹಿತರಿಗೆ ನನ್ನ ಫೋಟೋ ಕಳುಹಿಸಿ ಕೆಟ್ಟ ಅಭಿಪ್ರಾಯ ಬರುವ ಹಾಗೆ ಅವಮಾನಿಸಿದ್ದಾನೆ ಎಂದು ಅವಮಾನಿಸಿದ್ದಾನೆ ಎಂದು ಆರೋಪಿಸಿದ್ದಾಳೆ.

Leave a Reply

Your email address will not be published. Required fields are marked *

You May Also Like

ಬೆಂಬಲ ಬೆಲೆಯಲ್ಲಿ ಸರ್ಕಾರ ಗೋವಿನ ಜೋಳ ಖರೀದಿಸಲು ರೈತರ ಆಗ್ರಹ

ತಾನು ಬೆಳೆದ ಬೆಳೆ ತನ್ನ ಬದುಕು ಬಂಗಾರವಾಗಿಸುತ್ತದೆ ಎಂದು ನಂಬಿದ ಅನ್ನದಾನಿಗೆ ಭಾರಿ ನಿರಾಶೆಯಾಗಿದೆ. ಬಿಳಿ ಗೋವಿನ ಜೋಳ ಬದುಕಿನಲ್ಲಿ ಬೆಳಕು ಚೆಲ್ಲುತ್ತೆ ಎಂಬ ವಿಶ್ವಾಸದಲ್ಲಿ ರೈತನಿಗೆ ಬಿಳಿ ಗೋವಿನ ಜೋಳ ಕೂಡ ಉತ್ತಮ ಧಾರಣೆ ನೀಡದ ಹಿನ್ನೆಲೆ ಬದುಕಿಗೆ ಕತ್ತಲೆ ಆವರಿಸಿದಂತಾಗಿದೆ. ಇದರಿಂದ ಉತ್ತಮ ಧಾರಣೆಯ ನಿರೀಕ್ಷೆಯಲ್ಲಿದ್ದ ರೈತರು ಅಸಹಾಯಕರಾಗಿ ಕೈಚೆಲ್ಲಿ ಕುಳಿತಿದ್ದಾರೆ.

ಸಂಸದರು ದನ ಕಾಯುತ್ತಿದ್ದಾರೆಯೇ? ಪ್ರಧಾನಿಯನ್ನು ರಾಜ್ಯಕ್ಕೆ ಕರೆಯಿಸಿ..!

ರಾಯಚೂರು : ರಾಜ್ಯ ಸರ್ಕಾರಕ್ಕೆ ಮಾನವೀಯತೆ ಇಲ್ಲ ಎಂದು ಈಶಾನ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.

ಕೊರೊನಾ ವಿಚಾರ : ಶೀಘ್ರದಲ್ಲೇ ನೂತನ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಬುಧವಾರ ಬೆಂಗಳೂರಿನಲ್ಲಿ…

ಆರೋಗ್ಯ ಇಲಾಖೆಗೆ ನೇಮಕಗೊಂಡ ವೈದ್ಯರನ್ನು ಸ್ವಾಗತ ಕೋರಿದ ಸಚಿವ ಸುಧಾಕರ್

ಬೆಂಗಳೂರು: ಹೊಸದಾಗಿ ನೇಮಕಗೊಂಡಿರುವ 715 ಹಿರಿಯ ತಜ್ಞರು ಮತ್ತು 1,048 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಬುಧವಾರ ಆರೋಗ್ಯ ಸಚಿವ ಕೆ.ಸುಧಾಕರ್ ಸ್ವಾಗತ ಕೋರಿದ್ದಾರೆ.