ಮುಂಡರಗಿ: ಪಂಚಮಸಾಲಿ ಸಮಾಜದ ಶಹರ ಘಟಕ ದಿಂದ ಗದಗ ಜಿಲ್ಲಾ ಬಳಗಾನೂರ ಗ್ರಾಮದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಪುತ್ಥಳಿ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಕಿತ್ತೂರು ರಾಣಿ ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಸಂಬಂಧಿಸಿದಂತೆ ಗಲಾಟೆ ಪ್ರಕರಣ ನಡೆದಿದ್ದು ಇದು ಸ್ವಾತಂತ್ರ್ಯ ಹೋರಾಟಗಾರರಿಗೆ ಅಗೌರವ ತಂದಂತಾಗಿದೆ. ಈ ಪ್ರಕರಣದಲ್ಲಿ ಕಾಣದ ಕೈಗಳ ಕೈವಾಡದಿಂದ ತಾಯಿ ಮಕ್ಕಳಂತೆ ಇರುವ ಎರಡು ಸಮಾಜದ ಮೇಲೆ ದ್ವೇಷ ಭಾವನೆಯನ್ನುಂಟು ಮಾಡುತ್ತಿರುವುದು ಕಂಡು ಬರುತ್ತಿದೆ.

ಸ್ವಾತಂತ್ರ್ಯದ ಕಿಚ್ಚನ್ನು ಹಚ್ಚಿ ಎದೆಯೊಡ್ಡಿ ಹೋರಾಡಿದ ಮಹನೀಯರ ಪುತ್ಥಳಿಗಳನ್ನು ಬಳಗಾನೂರು ಗ್ರಾಮದ ಎರಡೂ ಸಮಾಜದ ಹಿರಿಯರ ಸಮ್ಮುಖದಲ್ಲಿ ಒಂದೇ ವೃತ್ತದಲ್ಲಿ ಸ್ಥಾಪನೆ ಮಾಡಬೇಕು. ಮತ್ತು ಈ ವಿಚಾರವಾಗಿ ಕೂಡಲೇ ಜಿಲ್ಲಾಡಳಿತ ಮದ್ಯೆ ಪ್ರವೇಶಿಸಬೇಕು ಎಂದು ಒತ್ತಾಯಿಸಿದರು.

ಮಂಜುನಾಥ್ ಮುಧೋಳ, ಶಿವು ಇಟಗಿ,  ಹುಚ್ಚಪ್ಪ ಹಂದ್ರಾಳ, ಪ್ರಶಾಂತ್  ಅಂದ್ರಳ, ಅಶೋಕ್ ಹಂದ್ರಾಳ, ಎಂ.ಬಿ. ಪೊಲೀಸ್ ಪಾಟೀಲ್, ಜೆ.ಬಿ.ಉಳಾಗಡ್ಡಿ, ಸೋಮು ಹಕ್ಕಂಡಿ,  ಎಸ್.ಎಚ್.ದೇಸಾಯಿ, ಬಸವರಾಜ ಗುಡ್ಲಾನೂರ, ದೇವೀಂದ್ರಪ್ಪ ಪಾಟೀಲ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ಗದಗ : ಗ್ರಾಮೀಣಾಭಿವೃದ್ಧಿ ವಿವಿ ಪರೀಕ್ಷೆ ಮುಂದೂಡಿಕೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಏಪ್ರೀಲ್ 19 ಮತ್ತು 20 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

ನಗರದ ಹೊರವಯದಲ್ಲಿರುವ ಪಶು ವೈದ್ಯಕೀಯ ಕಾಲೇಜು ಎದುರು ಚಾಲಯಕನ ನಿಯಂತ್ರನ ತಪ್ಪಿ ಟಿಪ್ಪರ ಪಲ್ಟಿಯಾಗಿದೆ.

ಪಟ್ಟಣದ ಅಭಿವೃದ್ಧಿಗೆ ಸದಾ ಸಿದ್ಧ : ಮಿಥುನ್ ಜಿ ಪಾಟೀಲ

ರೋಣ: ಪುರಸಭೆ ಅಧ್ಯಕ್ಷೆ ವಿದ್ಯಾಶ್ರೀ ದೊಡ್ಡಮನಿ ಹಾಗೂ ಉಪಾಧ್ಯಕ್ಷ ಮಿಥುನ್ ಜಿ ಪಾಟೀಲ ಒಂದು ಮತ್ತು…

ಮಾರ್ಗ ಮಧ್ಯೆ ಅಡ್ಡಗಟ್ಟಿ ಯುವಕನ ಬರ್ಬರ ಕೊಲೆ!

ಬೆಂಗಳೂರು : ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಯುವಕನನ್ನು ಮಾರ್ಗ ಮಧ್ಯೆ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.