ಮುಂಡರಗಿ: ಪಂಚಮಸಾಲಿ ಸಮಾಜದ ಶಹರ ಘಟಕ ದಿಂದ ಗದಗ ಜಿಲ್ಲಾ ಬಳಗಾನೂರ ಗ್ರಾಮದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಪುತ್ಥಳಿ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಕಿತ್ತೂರು ರಾಣಿ ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಸಂಬಂಧಿಸಿದಂತೆ ಗಲಾಟೆ ಪ್ರಕರಣ ನಡೆದಿದ್ದು ಇದು ಸ್ವಾತಂತ್ರ್ಯ ಹೋರಾಟಗಾರರಿಗೆ ಅಗೌರವ ತಂದಂತಾಗಿದೆ. ಈ ಪ್ರಕರಣದಲ್ಲಿ ಕಾಣದ ಕೈಗಳ ಕೈವಾಡದಿಂದ ತಾಯಿ ಮಕ್ಕಳಂತೆ ಇರುವ ಎರಡು ಸಮಾಜದ ಮೇಲೆ ದ್ವೇಷ ಭಾವನೆಯನ್ನುಂಟು ಮಾಡುತ್ತಿರುವುದು ಕಂಡು ಬರುತ್ತಿದೆ.

ಸ್ವಾತಂತ್ರ್ಯದ ಕಿಚ್ಚನ್ನು ಹಚ್ಚಿ ಎದೆಯೊಡ್ಡಿ ಹೋರಾಡಿದ ಮಹನೀಯರ ಪುತ್ಥಳಿಗಳನ್ನು ಬಳಗಾನೂರು ಗ್ರಾಮದ ಎರಡೂ ಸಮಾಜದ ಹಿರಿಯರ ಸಮ್ಮುಖದಲ್ಲಿ ಒಂದೇ ವೃತ್ತದಲ್ಲಿ ಸ್ಥಾಪನೆ ಮಾಡಬೇಕು. ಮತ್ತು ಈ ವಿಚಾರವಾಗಿ ಕೂಡಲೇ ಜಿಲ್ಲಾಡಳಿತ ಮದ್ಯೆ ಪ್ರವೇಶಿಸಬೇಕು ಎಂದು ಒತ್ತಾಯಿಸಿದರು.

ಮಂಜುನಾಥ್ ಮುಧೋಳ, ಶಿವು ಇಟಗಿ,  ಹುಚ್ಚಪ್ಪ ಹಂದ್ರಾಳ, ಪ್ರಶಾಂತ್  ಅಂದ್ರಳ, ಅಶೋಕ್ ಹಂದ್ರಾಳ, ಎಂ.ಬಿ. ಪೊಲೀಸ್ ಪಾಟೀಲ್, ಜೆ.ಬಿ.ಉಳಾಗಡ್ಡಿ, ಸೋಮು ಹಕ್ಕಂಡಿ,  ಎಸ್.ಎಚ್.ದೇಸಾಯಿ, ಬಸವರಾಜ ಗುಡ್ಲಾನೂರ, ದೇವೀಂದ್ರಪ್ಪ ಪಾಟೀಲ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ಮಾಗಡಿಯಲ್ಲಿ ಮಿಶ್ರ ತಳಿ ಕರುಗಳ ಪ್ರದರ್ಶನ

ತಾಲೂಕಿನ ಮಾಗಡಿ ಗ್ರಾಮದ ಪ್ರೌಢಶಾಲೆಯ ಆವರಣದಲ್ಲಿ ಜಿಲ್ಲಾ ಪಂಚಾಯತ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಹಾಗೂ ಮಾಗಡಿಯ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಂಯುಕ್ತ ಆಶ್ರಯದಲ್ಲಿ ಮಿಶ್ರ ತಳಿ ಕರುಗಳ ಪ್ರದರ್ಶನ ಜರುಗಿತು.

ಉತ್ತರಪ್ರಭಕ್ಕೆ ಗ್ರಾಮ ಪಂಚಾಯತಿಗೆ ಪ್ರತಿನಿಧಿ ಬೇಕಾಗಿದ್ದಾರೆ

ಉತ್ತರಪ್ರಭ ದಿನಪತ್ರಿಕೆ, ವೆಬ್ ಪೋರ್ಟಲ್ ಹಾಗೂ ಯೂಟ್ಯೂಬ್ ಚಾನಲ್ ಈಗಾಗಲೇ ಗದಗ ಜಿಲ್ಲೆಯ ಜನರ ಮನೆ-ಮನ ತಲುಪಿದ್ದು, ಜನರಿಂದ ಸಿಗುತ್ತಿರುವ ವ್ಯಾಪಕ ಬೆಂಬಲದಿಂದ ನಮ್ಮ ತಂಡ ಇನ್ನಷ್ಟು ಕ್ರೀಯಾಶೀಲವಾಗಿದೆ.

ಕೊರೊನಾ ಸೋಂಕಿತರಿಗೆ ಈ ಔಷಧಿ ನೀಡಬಾರದಂತೆ

ರೋಗಿಗಳು ಎಷ್ಟೇ ಅನಾರೋಗ್ಯಕ್ಕೆ ತುತ್ತಾಗಿದ್ದರೂ ಅವರಿಗೆ ಗಿಲೀಡ್‌ನ ರೆಮ್ಡೆಸಿವಿರ್ ಔಷಧ ನೀಡುವುದನ್ನು ಶಿಫಾರಸು ಮಾಡುವುದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ರಾಜ್ಯದಲ್ಲಿಂದು 7330 ಕೊರೊನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 7330 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಒಟ್ಟು 271876 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.