ಬೆಂಗಳೂರು : ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮೂರು ಪಕ್ಷಗಳ ನಾಯಕರ ಪರ – ವಿರೋಧ ಹೇಳಿಕೆಗಳು ತಾರಕಕ್ಕೆ ಏರುತ್ತಿವೆ.

ಸದ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎದುರಾಳಿ ನಮ್ಮ ಸಮನಾಗಿದ್ದರೆ, ಯುದ್ಧ ಸಾರಬಹುದು. ಆದರೆ, ಇಲ್ಲಿನ ಎದುರಾಳಿ ನಮ್ಮ ಸರಿಸಾಟಿ ಇಲ್ಲ. ಹೀಗಾಗಿ ಯುದ್ಧ ಮಾಡಲು ಆಗುತ್ತಿಲ್ಲ ಎಂದು ಹೇಳಿದ್ದಾರೆ.

ಅಲ್ಲದೇ, ಸದ್ಯ ಚುನಾವಣೆ ನಡೆಯುತ್ತಿರುವ ರಾಜರಾಜೇಶ್ವರಿ ನಗರ ಹಾಗೂ ಶಿರಾದಲ್ಲಿ ಕಾಂಗ್ರೆಸ್ ಜಯಗಳಿಸುವುದು ನಿಶ್ಚಿತ. ಈ ಸರ್ಕಾರ ಕೇವಲ ಆಸ್ವಾಸನೆಗಳನ್ನು ಮಾತ್ರ ನೀಡುತ್ತಿದೆ. ಕಳೆದ ವರ್ಷ ಪ್ರವಾಹ ಬಂದ ಸಂದರ್ಭದಲ್ಲಿ ರೂ. 35 ಸಾವಿರ ಕೋಟಿ ನಷ್ಟವಾಗಿದೆ ಎಂದಿದ್ದರು. ಕೇಂದ್ರ ಸರ್ಕಾರ ಕೇವಲ ರೂ. 1800 ಕೋಟಿ ನೀಡಿತ್ತು. ಸಿಎ ಅವರು ಮನೆ ಕಳೆದುಕೊಂಡವರಿಗೆ ರೂ. 5 ಲಕ್ಷ ಹಾಗೂ ಬಾಡಿಗೆ ಕಟ್ಟಲು ರೂ. 5 ಸಾವಿರ ಕೊಡುವುದಾಗಿ ಹೇಳಿದ್ದರು. ಆದರೆ, ಆ ಮೊತ್ತ ಇನ್ನೂ ಜನರನ್ನು ತಲುಪಿಲ್ಲ ಎಂದು ಆರೋಪಿಸಿದ್ದಾರೆ.

ಕೊರೊನಾ ಸಂದರ್ಭದಲ್ಲಿ ನಾವು ಈ ಕುರಿತು ಧ್ವನಿ ಎತ್ತಿದಾಗ ಒಂದಿಷ್ಟು ಜನರಿಗೆ ಹಣ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿತು. ಇದುವರೆಗೂ ಆ ಪರಿಹಾರ ರೈತರಿಗೆ, ಕಾರ್ಮಿಕರಿಗೆ, ಶ್ರಮಿಕರಿಗೆ ತಲುಪಿಲ್ಲ. ಈ ಸರ್ಕಾರ ಆಶ್ವಾಸನೆ ಘೋಷಣೆ ಮಾಡುತ್ತದೆಯೇ ಹೊರತು ಅದನ್ನು ಸಾಕಾರಗೊಳಿಸುವುದಿಲ್ಲ ಎಂದು ಕಿಡಿಕಾರಿದ್ದಾರೆ. 

ಈ ಸಂದರ್ಭದಲ್ಲಿ ಕುಂದಗೋಳ ಕ್ಷೇತ್ರದ ಮಾಜಿ ಶಾಸಕ ಹಾಗೂ ಜೆಡಿಎಸ್ ನಾಯಕ ಎಂ.ಎಸ್. ಅಕ್ಕಿ ಹಾಗೂ ಅವರ ಬೆಂಬಲಿಗರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಯಿತು. 

Leave a Reply

Your email address will not be published. Required fields are marked *

You May Also Like

ಅರಣ್ಯ ಇಲಾಖೆಯ ಕಿರುಕುಳಕ್ಕೆ ಮನನೊಂದು ಶಿಂಗಟರಾಯನಕೆರೆ ತಾಂಡಾದ ಮಹಿಳೆ ಸಾವು

ಗದಗ: ಬಗರಹೂಕುಮ ಸಾಗುವಳಿದಾರರಿಗೆ ಅರಣ್ಯ ಇಲಾಖೆ ಒಂದಲ್ಲಾ ಒಂದು ರೀತಿಯಲ್ಲಿ ಕಿರುಕುಳ ಕೊಡುತ್ತಾ ಬಂದಿದೆ.ಅದರಲ್ಲೂ ಮುಂಡರಗಿ…

ಚುನಾವಣೆ ಮುಂದೂಡಲು ಸರ್ಕಾರದ ಹುನ್ನಾರ: ತಾಪಂ ರದ್ದು ವಿಚಾರಕ್ಕೆ ಶಾಸಕ ಎಚ್.ಕೆ. ಪಾಟೀಲ ಕಿಡಿ

ರಾಜ್ಯ ಸರ್ಕಾರ ತಾಲೂಕು ಪಂಚಾಯತಿಯನ್ನು ರದ್ದು ಪಡಸಲು ಮುಂದಾಗಿದ್ದು, ಸAವಿಧಾನದಲ್ಲಿ ತಿದ್ದುಪಡಿಯಾಗಿದ್ದನ್ನು ರಾಜ್ಯ ಸರಕಾರ ರದ್ದು ಪಡಿಸೋಕೆ ಬರುವದಿಲ್ಲ. ಆದರೆ ಯಾವ ಆಧಾರದ ಮೇಲೆ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ ಎಂದು ಮಾಜಿ ಸಚಿವ, ಶಾಸಕ ಎಚ್.ಕೆ.ಪಾಟೀಲ್ ಪ್ರಶ್ನಿಸಿದರು.

ವಿಧಾನಪರಿಷತ್ ಚುನಾವಣೆ ಫಲಿತಾಂಶ ಮುಂದೂಡಿಕೆ!!

ಬೆಂಗಳೂರು : ವಿಧಾನಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ಅ. 28ರಂದು ಚುನಾವಣೆ ನಡೆದಿತ್ತು. ನ. 2ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಹೇಳಿತ್ತು. ಆದರೆ, ಸದ್ಯ ಈ ಸಮಯವನ್ನು ಬದಲಾಯಿಸಲಾಗಿದೆ.