ಬಿಹಾರ : ಯುಪಿಎ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಬಿಹಾರದಲ್ಲಿ ನಿತೀಶ್ ಕುಮಾರ್ ಸಿಎಂ ಆಗಿದ್ದರು. ಆದರೆ, ಅವರ ಪ್ರತಿಯೊಂದು ನಿರ್ಧಾರಗಳಿಗೆ ಕಾಂಗ್ರೆಸ್ ಅಡ್ಡಗಾಲು ಹಾಕಿತು. ಹೀಗಾಗಿ ರಾಜ್ಯ ಅಭಿವೃದ್ಧಿಯಿಂದ ಹಿಂದೆ ಉಳಿಯಬೇಕಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಲಾಲು ಪ್ರಸಾದ್ ಯಾದವ್ ಅವರ ಆರ್ ಜೆಡಿ ಆಡಳಿತ ನಡೆಸಿದ 15 ವರ್ಷಗಳ ಅವಧಿಯಲ್ಲಿ ಕೊಲೆ, ಸುಲಿಗೆ, ದೌರ್ಜನ್ಯಗಳು ಸೇರಿದಂತೆ ಹಲವು ಅಪರಾಧಗಳು ನಡೆದಿವೆ. ಬಿಹಾರ ರಾಜ್ಯವನ್ನು ಅಭಿವೃದ್ಧಿಪಡಿಸಲು ನಿತೀಶ್ ಕುಮಾರ್‌ಗೆ ಯುಪಿಎ ಸರ್ಕಾರ ಸಹಕಾರ ನೀಡಿಲ್ಲ. ಬದಲಾಗಿ ಎಲ್ಲಾ ಕೆಲಸಗಳಲ್ಲಿಯೂ ಅಡ್ಡಗಾಲು ಹಾಕುತ್ತ ಬಂದಿದೆ ಎಂದು ಆರೋಪಿಸಿದ್ದಾರೆ.

ನಿತೀಶ್ ಕುಮಾರ್ ಸರಿಯಾದ ಸಮಯಕ್ಕೆ ಬಲಿಷ್ಠ ಕಾರ್ಯ ಮಾಡದಿದ್ದರೆ, ಇಷ್ಟೊತ್ತಿಗೆ ರಾಜ್ಯದಲ್ಲಿ ಕೊರೊನಾ ಆತಂಕ ದೊಡ್ಡ ಮಟ್ಟದಲ್ಲಿ ಎದುರಾಗಿರುತ್ತಿತ್ತು. ಪ್ರಾಣಹಾನಿ, ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿದ್ದವು. ಎನ್ ಡಿಎ ಮೈತ್ರಿಕೂಟ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಬಿಹಾರ ಜನ ಅಪರಾಧ ಮತ್ತು ಭ್ರಷ್ಟಾಚಾರದಿಂದ ನಲುಗಿ ಹೋಗಿದ್ದರು. ಬಡವರಿಗೆ ಮೀಸಲಿಟ್ಟಿದ್ದ ಹಣ ಭ್ರಷ್ಟಾಚಾರಿಗಳ ಕೈಸೇರುತ್ತಿತ್ತು ಎಂದು ಆರೋಪಿಸಿದ್ದಾರೆ.

ಕೇಂದ್ರದಲ್ಲಿ ಯುಪಿಎ ಸರ್ಕಾರ ಆಡಳಿತದಲ್ಲಿದ್ದ ಸಂದರ್ಭದಲ್ಲಿ ಬಿಹಾರದಲ್ಲಿ ನಿತೀಶ್ ಕುಮಾರ್ ಸಿಎಂ ಆಗಿದ್ದರು. 1990ರಿಂದ 15 ವರ್ಷ ಆರ್‌ ಜೆಡಿ ಆಡಳಿತವಿತ್ತು. 2005ರಿಂದ ನಿತೀಶ್ ಕುಮಾರ್ ಬಿಹಾರದ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಪುದುಚೇರಿಯಲ್ಲಿ ನಾರಾಯಣ ಸ್ವಾಮಿ ಸರ್ಕಾರ ಪತನ!

ಬಹುಮತ ಸಾಬೀತು ಪಡಿಸಲು ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ನೇತೃತ್ವದ ಸರ್ಕಾರ ವಿಫಲಗೊಂಡ ಕಾರಣ ಸರ್ಕಾರ ಪತನಗೊಂಡಿದೆ.

ವಾಟ್ಸಾಪ್ ಬಳಕೆದಾರರಿಗೆ ಇನ್ಮೂಂದೆ ಹೆಚ್ಚಿನ ಬದ್ರತೆ

ವಾಟ್ಸ್ ಆಪ್ ವೆಬ್ ಮತ್ತು ಡೆಸ್ಕ್ ಟಾಪ್ ಹೊಸ ಮತ್ತು ಉತ್ತಮ ಭದ್ರತಾ ವೈಶಿಷ್ಟö್ಯಗಳೊಂದಿಗೆ ಅಪ್ ಡೇಟ್ ಆಗಲಿದೆ. ಹೊಸ ಅಪ್ ಡೇಟ್ ಪ್ರಕಾರ, ಬಳಕೆದಾರರು ಲಾಗಿನ್ ಆಗುವ ಮುನ್ನ ಡೆಸ್ಕ್ ಟಾಪ್ ಆಪ್‌ನಲ್ಲಿ ಫಿಂಗರ್ ಪ್ರಿಂಟ್ ಅಥವಾ ಫೇಸ್ ಐಡಿಯನ್ನು ದೃಢೀಕರಿಸಬೇಕಾಗುತ್ತದೆ. ಹೊಸದಾಗಿ ಪರಿಚಯಿಸಲಾದ ಈ ವೈಶಿಷ್ಟö್ಯವು ಖಾತೆಗೆ ಹೆಚ್ಚುವರಿ ರಕ್ಷಣೆ ಒದಗಿಸುತ್ತದೆ.

ಸ್ತ್ರೀ ಅವತಾರದಲ್ಲಿ ಮದುವೆ ಮನೆಗೆ ಭೇಟಿ ನೀಡಿದ ಪ್ರಿಯತಮ

ಭಾಡೋಧಿ ಜಿಲ್ಲೆಯ ವ್ಯಕ್ತಿಯೊಬ್ಬ ತನ್ನ ಹುಡುಗಿ ಬೇರೆಯವನೊಂದಿಗೆ ವಿವಾಹವಾಗುತ್ತಿದ್ದ ಸಂದರ್ಭದಲ್ಲಿ ಈತ ಸ್ತ್ರೀ ಅವತಾರದಲ್ಲಿ ತಯಾರಾಗಿ ಗರ್ಲ್ ಫ್ರೆಂಡ್​ ಮನೆಗೆ ಎಂಟ್ರಿ ಕೊಟ್ಟಿದ್ದಾನೆ.

16ನೇ ವಯಸ್ಸಿಗೆ ಟಿಕ್ ಟಾಕ್ ಸ್ಟಾರ್ ಈ ನಿರ್ಧಾರ ಕೈಗೊಂಡಿದ್ದೇಕೆ?

ನವದೆಹಲಿ : ಟಿಕ್ಟಾಲಕ್ ಸ್ಟಾರ್ ಸಿಯಾ ಕಕ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಹಲವು ಅನುಮಾನಗಳಿಗೆ ದಾರಿ…