ಗದಗ: ನಗರದಲ್ಲಿ ಬಿಡಾಡಿ ದನಗಳ ಕಾಟ ಹೆಚ್ಚಾಗಿದೆ. ರಸ್ತೆಯ ಮಧ್ಯೆಯೇ ಪ್ರತಿ ದಿನ ಬಿಡಾಡಿ ದಿನಗಳ ಕಾದಾಟ ಸಾಮಾನ್ಯವಾಗಿ ಬಿಟ್ಟಿದೆ. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡುವಂತಾಗಿದೆ. ಇವುಗಳಿಂದಾಗಿ ಪ್ರತಿ ದಿನ ಒಂದಿಲ್ಲ ಒಂದು ಹಾನಿಯಾಗುತ್ತಿದೆ.

ಇಂದು ಕೂಡ ಬಿಡಾಡಿ ದನಗಳ ಕಾದಾಟ ನಗರದ ಹಳೆಯ ಡಿಸಿ ಕಚೇರಿ ಬಳಿ ನಡೆದಿದೆ. ಮದವೇರಿದ ಎರಡು ಬಿಡಾಡಿ ಗೂಳಿಗಳು, ತಲೆ ಡಿಕ್ಕಿ ಹೊಡೆಯುತ್ತ ಗುಟುರು ಹಾಕಿವೆ. ಇದನ್ನು ಕಂಡು ಅಲ್ಲಿದ್ದ ಜನ ಭಯದಿಂದ ಅಲ್ಲಿಯೇ ನಿಂತಿದ್ದರು. ವಾಹನ ಸವಾರರು ತಮ್ಮ ವಾಹನಗಳನ್ನು ಗೂಳಿ ಬರುತ್ತಿದ್ದಂತೆ ಹಿಂದೆ ಸರಿಯುತ್ತ ಭಯದಿಂದ ಸಾಗಿದ್ದಾರೆ.

ಹೀಗೆ ಒಂದು ಗೂಳಿ ಕಾಳಗ ಮಾಡಿ ಮಾಡಿ ಸುಸ್ತಾಗಿ ಫುಟ್ ಪಾತ್ ಮೇಲೆ ಬಂದು ನಿಂತಿದೆ. ಆಗ ಮತ್ತೊಂದು ಗೂಳಿ ಅದಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಫುಟ್ ಪಾತ್ ಬಳಿ ನಿಲ್ಲಿಸಿದ್ದ ಮೂರು ಬೈಕ್ ಗಳು ಜಖಂ ಆಗಿವೆ. ಇದರಿಂದಾಗಿ ವಾಹನ ಸವಾರರು ಜಿಲ್ಲಾಡಳಿತದ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಕೂಡಲೇ ಬಿಡಾಡಿ ದನಗಳ ಬಗ್ಗೆ ಕ್ರಮ ವಹಿಸಿ, ಜನರಿಗೆ ನೆಮ್ಮದಿ ಕಲ್ಪಿಸೇಕೆದು ಪ್ರಜ್ಞಾವಂತರು ಮನವಿ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಗಾಂಜಾ ಬೆಳೆ:ಒರ್ವನ ಬಂಧನ

ಪಟ್ಟಣದ ಯಲಿಶಿರೂರ ರಸ್ತೆಯ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಓರ್ವನನ್ನು ಪೋಲಿಸರು ಬಂಧಿಸಿದ್ದಾರೆ.

ನಗರಸಭೆ ಚುನಾವಣೆ :ವಾರ್ಡ ನಂ22ರ ಕಾಂಗ್ರೇಸ್ ಅಭ್ಯರ್ಥಿ ಪರ ಮಾಜಿ ಶಾಸಕ ಡಿ ಆರ್ ಪಾಟೀಲ ಗಂಗಿಮಡಿಯಲ್ಲಿ ಪ್ರಚಾರ

ಗದಗ:ನಗರಸಭೆ ಚುನಾವಣೆ ಡಿ. 20-12-2021 ರಂದು ವಾರ್ಡ್ ನಂ 22 ರ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾದ…

ಎಂಎಚ್ಎಂ ಶಾಲೆಯಲ್ಲಿ ಸ್ನೇಹ ಸಮ್ಮೇಳನ ಸಂಭ್ರಮ ಕನಾ೯ಟಕ ಗಾಂಧಿ ಹಡೇ೯ಕರ ಮಂಜಪ್ಪಗೆ ಭಾರತರತ್ನ ಪ್ರಶಸ್ತಿ ನೀಡಿ

ಚಿತ್ರವರದಿ : ಗುಲಾಬಚಂದ ಜಾಧವಆಲಮಟ್ಟಿ(ವಿಜಯಪುರ ಜಿಲ್ಲೆ) : ಉತ್ಕಟ ಕಾಯಕದ ತತ್ವ ಶಾಸ್ತ್ರ ಪರಿಪಾಲಿಸಿ ಶರಣ…

ಲಕ್ಷ್ಮೇಶ್ವರ: ಕೊರೊನಾ ವಾರಿಯರ್ಸ್ ಗೆ ಶಿಕ್ಷಕನ ಸೇವೆ

ವೀಕೆಂಡ್ ಕರ್ಫ್ಯೂಗೆ ಪಟ್ಟಣದಲ್ಲಿ ಜನತೆ ಸಾಥ್ ನೀಡಿದ್ದು ಜನರು ಇಲ್ಲದೇ ಬಸ್ಟ್ಯಾಂಡ್, ಬಾನು ಮಾರ್ಕೆಟ್ ಸೇರಿದಂತೆ ಅನೇಕ ಕಡೆಗಳಲ್ಲಿ ಬಿಕೋ ಎನ್ನುತ್ತಿದೆ.