ಗದಗ: ನಗರದಲ್ಲಿ ಬಿಡಾಡಿ ದನಗಳ ಕಾಟ ಹೆಚ್ಚಾಗಿದೆ. ರಸ್ತೆಯ ಮಧ್ಯೆಯೇ ಪ್ರತಿ ದಿನ ಬಿಡಾಡಿ ದಿನಗಳ ಕಾದಾಟ ಸಾಮಾನ್ಯವಾಗಿ ಬಿಟ್ಟಿದೆ. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡುವಂತಾಗಿದೆ. ಇವುಗಳಿಂದಾಗಿ ಪ್ರತಿ ದಿನ ಒಂದಿಲ್ಲ ಒಂದು ಹಾನಿಯಾಗುತ್ತಿದೆ.

ಇಂದು ಕೂಡ ಬಿಡಾಡಿ ದನಗಳ ಕಾದಾಟ ನಗರದ ಹಳೆಯ ಡಿಸಿ ಕಚೇರಿ ಬಳಿ ನಡೆದಿದೆ. ಮದವೇರಿದ ಎರಡು ಬಿಡಾಡಿ ಗೂಳಿಗಳು, ತಲೆ ಡಿಕ್ಕಿ ಹೊಡೆಯುತ್ತ ಗುಟುರು ಹಾಕಿವೆ. ಇದನ್ನು ಕಂಡು ಅಲ್ಲಿದ್ದ ಜನ ಭಯದಿಂದ ಅಲ್ಲಿಯೇ ನಿಂತಿದ್ದರು. ವಾಹನ ಸವಾರರು ತಮ್ಮ ವಾಹನಗಳನ್ನು ಗೂಳಿ ಬರುತ್ತಿದ್ದಂತೆ ಹಿಂದೆ ಸರಿಯುತ್ತ ಭಯದಿಂದ ಸಾಗಿದ್ದಾರೆ.

ಹೀಗೆ ಒಂದು ಗೂಳಿ ಕಾಳಗ ಮಾಡಿ ಮಾಡಿ ಸುಸ್ತಾಗಿ ಫುಟ್ ಪಾತ್ ಮೇಲೆ ಬಂದು ನಿಂತಿದೆ. ಆಗ ಮತ್ತೊಂದು ಗೂಳಿ ಅದಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಫುಟ್ ಪಾತ್ ಬಳಿ ನಿಲ್ಲಿಸಿದ್ದ ಮೂರು ಬೈಕ್ ಗಳು ಜಖಂ ಆಗಿವೆ. ಇದರಿಂದಾಗಿ ವಾಹನ ಸವಾರರು ಜಿಲ್ಲಾಡಳಿತದ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಕೂಡಲೇ ಬಿಡಾಡಿ ದನಗಳ ಬಗ್ಗೆ ಕ್ರಮ ವಹಿಸಿ, ಜನರಿಗೆ ನೆಮ್ಮದಿ ಕಲ್ಪಿಸೇಕೆದು ಪ್ರಜ್ಞಾವಂತರು ಮನವಿ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ನೂರಾರು ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಉತ್ತರಪ್ರಭ ಸುದ್ದಿಕೋಲಾರ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಬೇಸತ್ತು ಇಂದು ಜೆಡಿಎಸ್ ಹಾಗೂ…

ಸದಾಶಿವ ಯೋಗ ವರದಿ ವಿಚಾರ ಕಟೀಲ್ ಹೇಳಿಕೆ ಹಿಂಪಡೆಯಲು ಒತ್ತಾಯ

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರಕಾರ ಬದ್ದವಾಗಿದೆ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಹೇಳಿರುವ ಹೇಳಿಕೆಯನ್ನು ಹಿಂದೆ ಪಡಿಯಬೇಕು ಇಲ್ಲವಾದರೆ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಬಂಜಾರ ಸಮಾಜದ ಯುವ ಮುಖಂಡ ರಮೇಶ ಲಮಾಣಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ.

ಗದಗ, ರೋಣ, ಮುಂಡರಗಿ, ತಾಲೂಕಿನ ಕೆಲವು ಕಡೆ ಕಂಟೇನ್ಮೆಂಟ್ ಘೋಷಣೆ

ಗದಗ: ಜಿಲ್ಲೆಯ ಕೆಲವು ತಾಲೂಕಿನ ಪ್ರದೇಶಗಳನ್ನು ಕಂಟೇನ್ಮೆಂಟ್ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಅದರ ವಿವರ ಈ…

ಮತ್ತೊಬ್ಬ ಸಚಿವರಿಗೆ ಕೊರೋನಾ ಸೋಂಕು..!

ವಸತಿ ಸಚಿವ ಜಿತೇಂದ್ರ ಅವ್ಹಾದ್ ಅವರ ನಂತರ ಮತ್ತೊಬ್ಬ ಸಚಿವರಿಗೆ ಕೊರೊನಾ ಸೋಂಕು ತಗುಲಿದೆ. ಕಾಂಗ್ರೆಸ್ ನಾಯಕ ಹಾಗೂ ಲೋಕೋಪಯೋಗಿ ಸಚಿವ ಅಶೋಕ್ ಚವ್ಹಾಣ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.