ಗದಗ: ನಗರದಲ್ಲಿ ಬಿಡಾಡಿ ದನಗಳ ಕಾಟ ಹೆಚ್ಚಾಗಿದೆ. ರಸ್ತೆಯ ಮಧ್ಯೆಯೇ ಪ್ರತಿ ದಿನ ಬಿಡಾಡಿ ದಿನಗಳ ಕಾದಾಟ ಸಾಮಾನ್ಯವಾಗಿ ಬಿಟ್ಟಿದೆ. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡುವಂತಾಗಿದೆ. ಇವುಗಳಿಂದಾಗಿ ಪ್ರತಿ ದಿನ ಒಂದಿಲ್ಲ ಒಂದು ಹಾನಿಯಾಗುತ್ತಿದೆ.

ಇಂದು ಕೂಡ ಬಿಡಾಡಿ ದನಗಳ ಕಾದಾಟ ನಗರದ ಹಳೆಯ ಡಿಸಿ ಕಚೇರಿ ಬಳಿ ನಡೆದಿದೆ. ಮದವೇರಿದ ಎರಡು ಬಿಡಾಡಿ ಗೂಳಿಗಳು, ತಲೆ ಡಿಕ್ಕಿ ಹೊಡೆಯುತ್ತ ಗುಟುರು ಹಾಕಿವೆ. ಇದನ್ನು ಕಂಡು ಅಲ್ಲಿದ್ದ ಜನ ಭಯದಿಂದ ಅಲ್ಲಿಯೇ ನಿಂತಿದ್ದರು. ವಾಹನ ಸವಾರರು ತಮ್ಮ ವಾಹನಗಳನ್ನು ಗೂಳಿ ಬರುತ್ತಿದ್ದಂತೆ ಹಿಂದೆ ಸರಿಯುತ್ತ ಭಯದಿಂದ ಸಾಗಿದ್ದಾರೆ.

ಹೀಗೆ ಒಂದು ಗೂಳಿ ಕಾಳಗ ಮಾಡಿ ಮಾಡಿ ಸುಸ್ತಾಗಿ ಫುಟ್ ಪಾತ್ ಮೇಲೆ ಬಂದು ನಿಂತಿದೆ. ಆಗ ಮತ್ತೊಂದು ಗೂಳಿ ಅದಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಫುಟ್ ಪಾತ್ ಬಳಿ ನಿಲ್ಲಿಸಿದ್ದ ಮೂರು ಬೈಕ್ ಗಳು ಜಖಂ ಆಗಿವೆ. ಇದರಿಂದಾಗಿ ವಾಹನ ಸವಾರರು ಜಿಲ್ಲಾಡಳಿತದ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಕೂಡಲೇ ಬಿಡಾಡಿ ದನಗಳ ಬಗ್ಗೆ ಕ್ರಮ ವಹಿಸಿ, ಜನರಿಗೆ ನೆಮ್ಮದಿ ಕಲ್ಪಿಸೇಕೆದು ಪ್ರಜ್ಞಾವಂತರು ಮನವಿ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಾಜಿ ಸಿಎಂ ವಿರುದ್ಧ ಮತ್ತೊಮ್ಮೆ ಮುಗಿ ಬಿದ್ದ ಬಿಜೆಪಿ ನಾಯಕರು!

ಬೆಂಗಳೂರು : ಮೊದಲು ನೀವು ನಿಮ್ಮ ಪಕ್ಷದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಟಾಂಗ್ ನೀಡಿದ್ದಾರೆ.

ಸದ್ಯದಲ್ಲಿಯೇ ಆರ್ಥಿಕತೆಯಲ್ಲಿ ಭಾರತವನ್ನು ಹಿಂದಿಕ್ಕಲಿದೆಯಂತೆ ಬಾಂಗ್ಲಾದೇಶ!

ನವದೆಹಲಿ : ದೇಶದ ಜಿಡಿಪಿ ಕುರಿತು ಆತಂಕ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಮೋದಿ ವಿರುದ್ಧ ಗುಡುಗಿದ್ದಾರೆ.

ವೈದ್ಯಾಧಿಕಾರಿ ಆತ್ಮಹತ್ಯೆಗೆ ಕಾರಣರಾದವರನ್ನು ಶಿಕ್ಷಿಸಿ: ಡಿ.ಕೆ.ಶಿವಕುಮಾರ್

ಆತ್ಮಹತ್ಯೆ ಮಾಡಿಕೊಂಡಿರುವ ವೈದ್ಯಾಧಿಕಾರಿ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂಪಾಯಿ ದುಡ್ಡು ನೀಡುವುದರಿಂದ ಅವರಿಗೆ ನ್ಯಾಯ ಸಿಗುವುದಿಲ್ಲ. ಆತ್ಮಹತ್ಯೆಗೆ ಕಾರಣರಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒತ್ತಾಯಿಸಿದರು.

ಮೆಕ್ಕೆಜೋಳ ರೈತರಿಗೆ ಪರಿಹಾರ: ಇದರಲ್ಲಿ ಸಂಶಯ ಬೇಡ

ಕೊಪ್ಪಳ: ಸರ್ಕಾರ ಇಟ್ಟ ಹೆಜ್ಜೆ ಹಿಂದೆ ಇಡುವುದಿಲ್ಲ. ರೈತರನ್ನು ಎಂದಿಗೂ ಕೈಬಿಡುವುದಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೈತರ…