ಮೈಸೂರು : ವೋಟ್ ಹಾಕಿ ಉಳಿಸಿದರೆ ಮಾತ್ರ ಜನರನ್ನ ಬದುಕಿಸುತ್ತೀರಾ ಎಂದು ಪ್ರಶ್ನೆ ಮಾಡುವ ಮೂಲಕ ತಮ್ಮ ಪಕ್ಷದ ನಿರ್ಧಾರವನ್ನೇ ಬಿಜೆಪಿ ಶಾಸಕ ಎಚ್. ವಿಶ್ವನಾಥ್ ಪ್ರಶ್ನಿಸಿದ್ದಾರೆ.
ವೋಟ್ ಹಾಕಿ ಗೆಲ್ಲಿಸಿದರೆ ಮಾತ್ರ ಉಚಿತ ಲಸಿಕೆ ಕೊಡುತ್ತೀರಾ? ಆದರೆ, ಸೋಲಿಸಿದರೆ ಜನರನ್ನೇ ಸಾಯಿಸಿ ಬಿಡುತ್ತೀರಾ? ಎಂದು ಅವರು ಪ್ರಶ್ನಿಸಿದ್ದಾರೆ.
ಸದ್ಯ ಬಿಹಾರದಲ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿ ಪಕ್ಷವು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಇದರಲ್ಲಿ ಬಿಜೆಪಿ ಬಿಹಾರದಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ಉಚಿತ ಕೊರೊನಾ ಲಸಿಕೆ ನೀಡುವುದಾಗಿ ತಿಳಿಸಿದೆ. ಈ ಕುರಿತು ಸದ್ಯ ದೇಶಾದ್ಯಂತ ಭಾರಿ ಚರ್ಚೆಯಾಗುತ್ತಿದೆ.
ಈ ಕುರಿತು ಮಾತನಾಡಿರುವ ವಿಶ್ವನಾಥ್ ಅವರು, ಕೊರೊನಾ ವಿಚಾರ ರಾಜಕೀಯ ವಿಷಯವಾಗಿ ಅಥವಾ ಚರ್ಚೆಯಾಗಿ ಬಳಕೆ ಮಾಡಿಕೊಳ್ಳಬಾರದು. ವೋಟ್ ಹಾಕಿ ಗೆಲ್ಲಿಸಿದರೆ ಉಚಿತ ಲಸಿಕೆ ಕೊಡುತ್ತೀರಾ ಸರಿ. ಸೋಲಿಸಿಬಿಟ್ಟರೆ ಜನರನ್ನು ಸಾಯಿಸಿ ಬಿಡುತ್ತೀರಾ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ, ತಮ್ಮದೆ ಪಕ್ಷದ ಪ್ರಣಾಳಿಕೆ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.