ಮೈಸೂರು : ವೋಟ್ ಹಾಕಿ ಉಳಿಸಿದರೆ ಮಾತ್ರ ಜನರನ್ನ ಬದುಕಿಸುತ್ತೀರಾ ಎಂದು ಪ್ರಶ್ನೆ ಮಾಡುವ ಮೂಲಕ ತಮ್ಮ ಪಕ್ಷದ ನಿರ್ಧಾರವನ್ನೇ ಬಿಜೆಪಿ ಶಾಸಕ ಎಚ್. ವಿಶ್ವನಾಥ್ ಪ್ರಶ್ನಿಸಿದ್ದಾರೆ.

ವೋಟ್ ಹಾಕಿ ಗೆಲ್ಲಿಸಿದರೆ ಮಾತ್ರ ಉಚಿತ ಲಸಿಕೆ ಕೊಡುತ್ತೀರಾ? ಆದರೆ, ಸೋಲಿಸಿದರೆ ಜನರನ್ನೇ ಸಾಯಿಸಿ ಬಿಡುತ್ತೀರಾ? ಎಂದು ಅವರು ಪ್ರಶ್ನಿಸಿದ್ದಾರೆ.

ಸದ್ಯ ಬಿಹಾರದಲ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿ ಪಕ್ಷವು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಇದರಲ್ಲಿ ಬಿಜೆಪಿ ಬಿಹಾರದಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ಉಚಿತ ಕೊರೊನಾ ಲಸಿಕೆ ನೀಡುವುದಾಗಿ ತಿಳಿಸಿದೆ. ಈ ಕುರಿತು ಸದ್ಯ ದೇಶಾದ್ಯಂತ ಭಾರಿ ಚರ್ಚೆಯಾಗುತ್ತಿದೆ. 

ಈ ಕುರಿತು ಮಾತನಾಡಿರುವ ವಿಶ್ವನಾಥ್ ಅವರು, ಕೊರೊನಾ ವಿಚಾರ ರಾಜಕೀಯ ವಿಷಯವಾಗಿ ಅಥವಾ ಚರ್ಚೆಯಾಗಿ ಬಳಕೆ ಮಾಡಿಕೊಳ್ಳಬಾರದು. ವೋಟ್ ಹಾಕಿ ಗೆಲ್ಲಿಸಿದರೆ ಉಚಿತ ಲಸಿಕೆ ಕೊಡುತ್ತೀರಾ ಸರಿ. ಸೋಲಿಸಿಬಿಟ್ಟರೆ ಜನರನ್ನು ಸಾಯಿಸಿ ಬಿಡುತ್ತೀರಾ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ, ತಮ್ಮದೆ ಪಕ್ಷದ ಪ್ರಣಾಳಿಕೆ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. 

Leave a Reply

Your email address will not be published. Required fields are marked *

You May Also Like

ಕರ್ನಾಟಕ ರಾಷ್ಟç ಸಮಿತಿಗೆ ವೀರನಗೌಡ ನೇಮಕ

ಕರ್ನಾಟಕ ರಾಷ್ಟç ಸಮಿತಿ ತಾಲೂಕ ಅಧ್ಯಕ್ಷರಾಗಿ ವೀರನಗೌಡ ಮುಗನೂರ ಅವರನ್ನು ನೇಮಕ ಮಾಡಲಾಗಿದೆ

ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿ ಅವರಿಗೆ ನೀಡಿದ ಸಲಹೆ ಏನು?

ಗ್ರೀನ್ ಝೋನ್‌ಗಳಲ್ಲಿಯೂ ಕೊರೊನಾ ಪ್ರಕರಣಗಳು ಕಂಡು ಬರುತ್ತಿದ್ದು, ಮೂರನೇ ಹಂತದ ಲಾಕ್‌ಡೌನ್‌ನಲ್ಲಿ ವಿಧಿಸಲಾಗಿರುವ ನಿಯಮಗಳೇ ಮೇ 17ರ ನಂತರವೂ ಮುಂದುವರಿಯಲಿ ಎಂದು ಸಿಎಂ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

1xbet вход: Актуальное Зеркало 1хбет Денга

Онлайн Казино 1xbet официальному Сайт Зеркало: Регистрация И Вход, Скачать 1хбет Что…

ನಗರ ಸಭೆ ಚುನಾವಣೆ: 4ನೇ ವಾರ್ಡಿನಲ್ಲಿ ಕಾಂಗ್ರೇಸ್   ಮತ್ತು 28ನೇ ವಾರ್ಡಿನಲ್ಲಿ ಬಿಜೆಪಿ

ಗದಗ ಬೇಟಗೇರಿ:ನಗರ ಸಭೆ 4 ಮತ್ತು  28 ನೇ ವಾರ್ಡನ ಮತ  ಎಣಿಕೆ ಮುಕ್ತಾಯ ,…