ನವದೆಹಲಿ : ಭಾರತೀಯ ಕ್ರಿಕೆಟ್ ನ ದಂತಕಥೆ ಕಪಿಲ್ ದೇವ್(61) ಅವರಿಗೆ ಹೃದಯಘಾತವಾಗಿದ್ದು, ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಪತ್ರಕರ್ತೆ ಟೀನಾ ಠಾಕೂರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಕಪಿಲ್ ದೇವ್ ಅವರು ಇಲ್ಲಯವರೆಗೂ ಆರೋಗ್ಯವಾಗಿಯೇ ಇದ್ದರು. ಅಲ್ಲದೇ, ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಕುರಿತು ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದರು.

ಭಾರತ ತಂಡದ ಪರ 131 ಟೆಸ್ಟ್ ಪಂದ್ಯಗಳನ್ನು ಆಡಿರುವ ಕಪಿಲ್ ದೇವ್, 5,248 ರನ್ ಗಳಿಸಿದ್ದು, 8 ಶತಕಗಳನ್ನು ಸಿಡಿಸಿದ್ದಾರೆ. 225 ಏಕದಿನ ಪಂದ್ಯಗಳಲ್ಲಿ 3,783 ರನ್ ಗಳಿಸಿದ್ದಾರೆ. ಅಲ್ಲದೇ ಟೆಸ್ಟ್ ನಲ್ಲಿ 434 ವಿಕೆಟ್, ಏಕದಿನ ಮಾದರಿ ಕ್ರಿಕೆಟ್ನೊಲ್ಲಿ 253 ವಿಕೆಟ್ ಪಡೆದಿದ್ದಾರೆ.

ಈ ಸುದ್ದಿ ತಿಳಿಯುತ್ತಿದ್ದಂತೆ ಕಪಿಲ್ ದೇವ್ ಅವರು ಗುಣಮುಖರಾಗಲಿ ಎಂದು ಹಲವು ಗಣ್ಯರು, ಅಭಿಮಾನಿಗಳು ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ನಿಡಗುಂದಿ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ
ಸದೃಢ ಮನಸ್ಸು ವಿಕಸನಕ್ಕೆ ಕ್ರೀಡೆಗಳು ಸಹಕಾರಿ- ಬಿ.ಟಿ.ಗೌಡರ

ಉತ್ತರಪ್ರಭ ಸುದ್ದಿ ನಿಡಗುಂದಿ: ಕ್ರೀಡೆಗಳಿಂದ ಸದೃಢ ದೇಹ,ಮನಸ್ಸು ಹೊಂದಬಹುದು. ಅವು ಶಾರೀರಿಕ ವಿಕಸನಕ್ಕೆ ಪ್ರೇರಕವಾಗಿವೆ ಎಂದು…

ಮತ್ತೊಮ್ಮೆ ಸೋಲಿನ ಸುಳಿಗೆ ಸಿಲುಕಿದ ಪ್ರೀತಿ ತಂಡ!

ಅಬುಧಾಬಿ : ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಪಂಜಾಬ್ ಗೆ ಮತ್ತೊಮ್ಮೆ ಅದೃಷ್ಟ ಕೈ ಕೊಟ್ಟಿದೆ.

ಬಳಬಟ್ಟಿ: ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ನಿಡಗುಂದಿ: ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಬೆಳಕಿಗೆ ತರುವಲ್ಲಿ ಗ್ರಾಮೀಣ ಕ್ರೀಡಾಕೂಟ ಸಹಕಾರಿ ಆಗಿದೆ ಎಂದು ಪಿಡಿಓ…

ಐಪಿಎಲ್ ನಲ್ಲಿ ಕೊಹ್ಲಿ, ಎಬಿಡಿಯನ್ನು ಕೈ ಬಿಡಬೇಕು ಎಂದಿರುವ ರಾಹುಲ್!

ಅಬುಧಾಬಿ : ಕೆ.ಎಲ್. ರಾಹುಲ್ ಅವರು ಮುಂದಿನ ಐಪಿಎಲ್ ನಲ್ಲಿ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಹಾಗೂ ಎಬಿಡಿ ವಿಲಿಯರ್ಸ್ ಅವರನ್ನು ಕೈ ಬಿಡಬೇಕು ಎಂದು ಹೇಳಿದ್ದಾರೆ.