ನವದೆಹಲಿ : ಭಾರತೀಯ ಕ್ರಿಕೆಟ್ ನ ದಂತಕಥೆ ಕಪಿಲ್ ದೇವ್(61) ಅವರಿಗೆ ಹೃದಯಘಾತವಾಗಿದ್ದು, ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಪತ್ರಕರ್ತೆ ಟೀನಾ ಠಾಕೂರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಕಪಿಲ್ ದೇವ್ ಅವರು ಇಲ್ಲಯವರೆಗೂ ಆರೋಗ್ಯವಾಗಿಯೇ ಇದ್ದರು. ಅಲ್ಲದೇ, ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಕುರಿತು ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದರು.

ಭಾರತ ತಂಡದ ಪರ 131 ಟೆಸ್ಟ್ ಪಂದ್ಯಗಳನ್ನು ಆಡಿರುವ ಕಪಿಲ್ ದೇವ್, 5,248 ರನ್ ಗಳಿಸಿದ್ದು, 8 ಶತಕಗಳನ್ನು ಸಿಡಿಸಿದ್ದಾರೆ. 225 ಏಕದಿನ ಪಂದ್ಯಗಳಲ್ಲಿ 3,783 ರನ್ ಗಳಿಸಿದ್ದಾರೆ. ಅಲ್ಲದೇ ಟೆಸ್ಟ್ ನಲ್ಲಿ 434 ವಿಕೆಟ್, ಏಕದಿನ ಮಾದರಿ ಕ್ರಿಕೆಟ್ನೊಲ್ಲಿ 253 ವಿಕೆಟ್ ಪಡೆದಿದ್ದಾರೆ.

ಈ ಸುದ್ದಿ ತಿಳಿಯುತ್ತಿದ್ದಂತೆ ಕಪಿಲ್ ದೇವ್ ಅವರು ಗುಣಮುಖರಾಗಲಿ ಎಂದು ಹಲವು ಗಣ್ಯರು, ಅಭಿಮಾನಿಗಳು ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ವಿವಾದ ಮೈಮೇಲೆ ಎಳೆದುಕೊಂಡ ಇಂಗ್ಲೆಂಡ್ ಆಟಗಾರ

ಮ್ಯಾಂಚೆಸ್ಟರ್ : ಕೊರೊನಾ ಅಬ್ಬರದ ಮಧ್ಯೆಯೂ ಇಂಗ್ಲೆಂಡ್ನರಲ್ಲಿ ಕ್ರಿಕೆಟ್ ಚಟುವಟಿಕೆಗಳು ಆರಂಭವಾಗಿವೆ. ಆದರೆ, ಆರಂಭದಲ್ಲಿಯೇ ಕಳಂಕವೊಂದು ಇದಕ್ಕೆ ಮೆತ್ತಿಕೊಂಡಿದೆ.

ಯುವರಾಜ್ ಸಿಂಗ್ ದಾಖಲೆ ಮುರಿಯುತ್ತಾರಂತೆ ರಾಹುಲ್!

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ ಯುವರಾಜ್ ಸಿಂಗ್ ಕೇವಲ 12 ಎಸೆತಗಳಲ್ಲಿ ಅರ್ಧ ಶತಕ ಸಿಡಿಸಿದ ದಾಖಲೆ ಹೊಂದಿದ್ದಾರೆ. ಸದ್ಯ ಅವರ ದಾಖಲೆಯನ್ನು ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಮುರಿಯುತ್ತೇನೆ ಎಂದು ಹೇಳಿದ್ದಾರೆ.

ಬಳಬಟ್ಟಿ: ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ನಿಡಗುಂದಿ: ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಬೆಳಕಿಗೆ ತರುವಲ್ಲಿ ಗ್ರಾಮೀಣ ಕ್ರೀಡಾಕೂಟ ಸಹಕಾರಿ ಆಗಿದೆ ಎಂದು ಪಿಡಿಓ…

ಸಿನಿಮಾದಲ್ಲಿ ಮೂಡಿ ಬರಲಿದೆ ಮುರಳೀಧರನ್ ಜೀವನ!

ವಿಶ್ವ ಬ್ಯಾಟಿಂಗ್ ದಿಗ್ಗಜರ ನಿದ್ದೆಗೆಡಿಸಿದ್ದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಅವರ ಬಯೋಪಿಕ್ ನಲ್ಲಿ ತಮಿಳು ನಟ ವಿಜಯ್ ಸೇತುಪತಿ ನಟಿಸಲಿದ್ದಾರೆ ಎಂದು ತಿಳಿದು ಬಂದಿದೆ.