ಬೆಂಗಳೂರು : ಕೊರೊನಾ ಹೆಸರಿನಲ್ಲಿ ರೂ. 10 ಸಾವಿರ ಕೋಟಿಗಳಷ್ಟು ಬೃಹತ್ ಹಗರಣದಲ್ಲಿ ಬಿಜೆಪಿ ಸರ್ಕಾರ ಭಾಗಿಯಾಗಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಹೋಮ್ ಐಸೋಲೇಷನ್ ಇರುವವರಿಗೆ ಕಿಟ್ ನೀಡಲಾಗುವುದು ಎಂದು ಸುಳ್ಳು ಹೇಳಿದೆ. ಈ ವಿಷಯದಲ್ಲಿ ರೂ. 150 ಕೋಟಿ ಹಣ ದೋಚಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಆರೋಪಿಸಿದ್ದಾರೆ.
ಕಾಲ್ ಸೆಂಟರ್‌ಗಳ ಮೂಲಕ ಸೋಂಕಿತರಿಗೆ ಕರೆ ಮಾಡುವ ವಿಷಯದಲ್ಲಿ ರೂ. 50 ಕೋಟಿ ಹಣ ದೋಚಲಾಗಿದೆ.

ಕೊರೊನಾ ತೊಲಗಿಸಲು ಇಷ್ಟು ಖರ್ಚು ಮಾಡಿದರೂ ರಾಜ್ಯದಲ್ಲಿ ಮಾತ್ರ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕಾಣುತ್ತಿದೆ. 3ನೇ ಸ್ಥಾನದಲ್ಲಿದ್ದ ರಾಜ್ಯವು 2ನೇ ಸ್ಥಾನಕ್ಕೆ ಏರುತ್ತಲಿದೆ ಎಂದು ಆಮ್ ಆದ್ಮಿ ಪಕ್ಷ ವ್ಯಂಗ್ಯವಾಡುತ್ತಿದೆ.

ಕೊರೊನಾ ವಿಷಯದಲ್ಲಿ ದೆಹಲಿ ಮಾದರಿ ಅನುಸರಿಸಿ ಎಂದು ಸ್ವತಃ ಪ್ರಧಾನಿಗಳೇ ಎಲ್ಲ ರಾಜ್ಯಗಳಿಗೆ ಹೇಳಿದರೂ ನಮ್ಮ ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ವೈಯಕ್ತಿಕವಾಗಿ ನಾನೇ ನಮ್ಮ ರಾಜ್ಯದ ಆರೋಗ್ಯ ಮಂತ್ರಿಗಳಿಗೆ ಕರೆ ಮಾಡಿದರೂ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಾಶ್ಮೀರದಲ್ಲಿ ಮುಂದುವರೆದ ಪಾಕ್ ದಾಳಿ: ಸರಣಿ ಕದನ ವಿರಾಮ ಉಲ್ಲಂಘನೆ

ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನ ದಾಳಿಯನ್ನು ಮುಂದುವರೆಸಿದೆ. ನಿನ್ನೆ ಮುಂಜಾನೆ ರಾಜ್ಯದ ವಿವಿಧೆಡೆ ಆರಂಭವಾಗಿರುವ ಕದನವಿರಾಮ ಉಲ್ಲಂಘನೆ ಇಡೀ ರಾತ್ರಿ ಮುಂದುವರೆದಿತ್ತು.

ಗೂಗಲ್ ಫೋಟೋ ಬ್ಯಾಕ್ಅಪ್ ಸ್ಟೋರೇಜ್ ಗೆ ಇನ್ಮುಂದೆ ಹಣ ಪಾವತಿಸಬೇಕು

ಈಗಾಗಲೇ ಹಲವು ವರ್ಷಗಳಿಂದ ಮೊಬೈಲ್ ಗಳಲ್ಲಿ ಗೂಗಲ್ ಫೋಟೋಗಳು ಉಚಿತವಾಗಿ ಸಿಗುತ್ತಿದ್ದವು. ಆದರೆ ಇನ್ಮುಂದೆ ಹಾಗಿಲ್ಲ. ಫೋಟೋ ಬ್ಯಾಕ್ ಅಪ್ ಸ್ಟೋರೇಜ್ ಮಾಡಲು ಹಣ ಪಾವತಿಸುವಂತಾಗಿದೆ.

ಒಂದು ಮಶಿನ್ ಹೊತ್ತ ಟ್ರಕ್: ಮಹಾರಾಷ್ಟ್ರದಿಂದ ಕೇರಳ ತಲುಪಲು ಒಂದು ವರ್ಷ!

ಎಷ್ಟೊತ್ತೋ ಬರಾದು? ನಡಕೊಂಡ್ ಬರಾಕ್ ಹತ್ತೀಯನು?’ ಅಂತೀವಲ್ಲ ಹಂಗಾತಿದು. ಕೇರಳದಲ್ಲಿರುವ ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಬೃಹತ್ ಯಂತ್ರವೊಂದನ್ನು ಮಹಾರಾಷ್ಟ್ರದ ನಾಸಿಕ್ ನಲ್ಲಿ ತಯಾರಿಸಲಾಯಿತು. ಅದರ ತೂಕ, ಎತ್ತರ ಮತ್ತು ಅಗಲದ ಕಾರಣದಿಂದ ಅದನ್ನು ಕೇರಳಕ್ಕೆ ಸಾಗಿಸುವುದೇ ಇಂದು ದೊಡ್ಡ ಸವಾಲಾಗಿತ್ತು. ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಸೂಕ್ಷ್ಮ ಭಾಗಗಳನ್ನು ಒಳಗೊಂಡಿದ್ದರಿಂದ ಹುಷಾರಾಗಿ ಮತ್ತು ನಾಜೂಕಾಗಿ ಅದನ್ನು ಸಾಗಿಸಿ ತರಲಾಗಿದೆ.

‘2021ಕ್ಕೂ ಮುಂಚೆ ದೇಶದಲ್ಲಿ ಕೋರೊನಾ ಲಸಿಕೆ ಅಸಾಧ್ಯ’

ನವದೆಹಲಿ: ‘2021ರವರೆಗೂ ದೇಶದಲ್ಲಿ ಕೋವಿಡ್ ಲಸಿಕೆ ತಯಾರಿಸುವುದು ಅಸಾಧ್ಯ’ ಎಂದು ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ…