ಬೆಂಗಳೂರು : ಕೊರೊನಾ ಹೆಸರಿನಲ್ಲಿ ರೂ. 10 ಸಾವಿರ ಕೋಟಿಗಳಷ್ಟು ಬೃಹತ್ ಹಗರಣದಲ್ಲಿ ಬಿಜೆಪಿ ಸರ್ಕಾರ ಭಾಗಿಯಾಗಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಹೋಮ್ ಐಸೋಲೇಷನ್ ಇರುವವರಿಗೆ ಕಿಟ್ ನೀಡಲಾಗುವುದು ಎಂದು ಸುಳ್ಳು ಹೇಳಿದೆ. ಈ ವಿಷಯದಲ್ಲಿ ರೂ. 150 ಕೋಟಿ ಹಣ ದೋಚಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಆರೋಪಿಸಿದ್ದಾರೆ.
ಕಾಲ್ ಸೆಂಟರ್‌ಗಳ ಮೂಲಕ ಸೋಂಕಿತರಿಗೆ ಕರೆ ಮಾಡುವ ವಿಷಯದಲ್ಲಿ ರೂ. 50 ಕೋಟಿ ಹಣ ದೋಚಲಾಗಿದೆ.

ಕೊರೊನಾ ತೊಲಗಿಸಲು ಇಷ್ಟು ಖರ್ಚು ಮಾಡಿದರೂ ರಾಜ್ಯದಲ್ಲಿ ಮಾತ್ರ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕಾಣುತ್ತಿದೆ. 3ನೇ ಸ್ಥಾನದಲ್ಲಿದ್ದ ರಾಜ್ಯವು 2ನೇ ಸ್ಥಾನಕ್ಕೆ ಏರುತ್ತಲಿದೆ ಎಂದು ಆಮ್ ಆದ್ಮಿ ಪಕ್ಷ ವ್ಯಂಗ್ಯವಾಡುತ್ತಿದೆ.

ಕೊರೊನಾ ವಿಷಯದಲ್ಲಿ ದೆಹಲಿ ಮಾದರಿ ಅನುಸರಿಸಿ ಎಂದು ಸ್ವತಃ ಪ್ರಧಾನಿಗಳೇ ಎಲ್ಲ ರಾಜ್ಯಗಳಿಗೆ ಹೇಳಿದರೂ ನಮ್ಮ ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ವೈಯಕ್ತಿಕವಾಗಿ ನಾನೇ ನಮ್ಮ ರಾಜ್ಯದ ಆರೋಗ್ಯ ಮಂತ್ರಿಗಳಿಗೆ ಕರೆ ಮಾಡಿದರೂ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಸಿಕ್ಕ ಭರ್ಜರಿ ಗಿಫ್ಟ್!

ನವದೆಹಲಿ : ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಮತ್ತೊಂದು ಜವಾಬ್ದಾರಿ ನೀಡಿದೆ.

ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರನ್ನು ಕೆರಳಿಸಿದ ಮಹಾರಾಷ್ಟ್ರ ಸಚಿವ!

ಔರಂಗಾಬಾದ್ : ಗಡಿ ಹಾಗೂ ಭಾಷೆಯ ವಿಷಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡುವುದರ ಮೂಲಕ ಮಹಾರಾಷ್ಟ್ರದ ಸಚಿವ ಜಯಂತ್ ಪಾಟೀಲ್, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದಾರೆ.

ದೇಶದಲ್ಲಿ ಕೊರೊನಾ ಚೇತರಿಕೆ – ಕೇಂದ್ರ ಆರೋಗ್ಯ ಇಲಾಖೆ!

ದೇಶದಲ್ಲಿ ಕೊರೊನಾ ಚೇತರಿಕೆ ಕಾಣುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಫೆಬ್ರವರಿಯಲ್ಲಿ ಬ್ಯಾಂಕುಗಳ ಸೇವೆಯಲ್ಲಿ ವ್ಯತ್ಯಯ

ಮೊದಲೆಲ್ಲ ಬ್ಯಾಂಕ್ಗಳಿಗೆ ರಜೆ ಅಂದರೆ ತಲೆ ಕೆಟ್ಟು ಹೋಗ್ತಿತ್ತು. ಆದರೆ ಈಗ ಹಾಗಲ್ಲ ನೆಟ್ ಬ್ಯಾಂಕಿAಗ್ ಮೂಲಕ ಅವಶ್ಯಕ ವ್ಯವಹಾರಗಳನ್ನ ನಾವೇ ನಡೆಸಬಹುದಾಗಿದೆ. ಹಾಗಂತ ನಾವು ಬ್ಯಾಂಕ್ಗಳನ್ನೂ ನಿರ್ಲಕ್ಷ್ಯ ಮಾಡುವಂತೆಯೂ ಇಲ್ಲ. ಲಾಕರ್ ವ್ಯವಸ್ಥೆ, ಸಾಲದ ಬಗ್ಗೆ ಮಾಹಿತಿ ಹೀಗೆ ಮುಖ್ಯ ಕೆಲಸ ಆಗಬೇಕು ಅಂದರೆ ನಾವು ಬ್ಯಾಂಕ್ಗೆ ತೆರಳಲೇಬೇಕು.