ಬೆಂಗಳೂರು : ಈರುಳ್ಳಿ ಬೆಲೆ ಗಗನಕ್ಕೆ ಹೋಗಿದೆ. ಹೀಗಾಗಿ ಈರುಳ್ಳಿಯನ್ನು ಖರೀದಿಸಲು ಗ್ರಾಹಕರು ಹಿಂದೇಟು ಹಾಕುತ್ತಿದ್ದಾರೆ.

ಹೊಟೇಲ್, ಡಾಬಾ, ರೆಸ್ಟೋರೆಂಟ್ ಗಳು ಸೇರಿದಂತೆ ಆಹಾರ ಪದಾರ್ಥ ತಯಾರಿಕಾ ಉದ್ಯಮಗಳಲ್ಲಿ ಈರುಳ್ಳಿ ಬಳಕೆಯನ್ನು ಮಿತಿಗೊಳಿಸಲಾಗಿದೆ. ಇದರಿಂದಾಗಿ ಗ್ರಾಹಕರಿಗೆ ರುಚಿ ಇಲ್ಲದಂತಾಗಿದೆ.

ಕಳೆದ ವರ್ಷ ಡಿಸೆಂಬರ್‌ ನಲ್ಲಿ ಕೂಡ ಈರುಳ್ಳಿಯ ಬೆಲೆ ಇದೇ ರೀತಿ ಗಗನಕ್ಕೆ ಏರಿಕೆ ಕಂಡಿತ್ತು. ಆ ಸಂದರ್ಭದಲ್ಲಿ ಈರುಳ್ಳಿಯ ಬೇಲೆ ರೂ. 150-180 ಇತ್ತು. ಸದ್ಯ ಇದರ ಬೆಲೆ ರೂ. 100ರ ಆಸುಪಾಲಿಗೆ ಬಂದಿದೆ. ಆದರೆ, ಸದ್ಯ ಕೊರೊನಾ ಹಾವಳಿಯಿಂದ ಪ್ರತಿಯೊಬ್ಬರೂ ಆರ್ಥಿಕವಾಗಿ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಜನರು ಈರುಳ್ಳಿ ಸಹವಾಸ ಬೇಡ ಎನ್ನುತ್ತಿದ್ದಾರೆ.

ಸದ್ಯ ಮಾರುಕಟ್ಟೆಯಲ್ಲಿ ಈರುಳ್ಳಿಯ ಬೆಲೆ ಪ್ರತಿ ಕೆಜಿಗೆ ರೂ. 100ರಷ್ಟಾಗಿದೆ. ಅಲ್ಲದೇ, ಉತ್ತಮ ಗಡ್ಡೆಗಳು ಅದಕ್ಕೂ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿವೆ. ಹೀಗಾಗಿ ಗ್ರಾಹಕರು ಈರುಳ್ಳಿ ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ. ಈರುಳ್ಳಿ ದೋಸೆ, ಬೋಂಡ, ವಡೆಗಳಿಗೆ ಈರುಳ್ಳಿ ಬಳಕೆ ಕಡಿಮೆಯಾಗಿದೆ.

ದೇಶಕ್ಕೆ ಅವಶ್ಯವಿರುವ ಶೇ. 50ರಷ್ಟು ಈರುಳ್ಳಿ ಬೆಳೆಯನ್ನು ಮಹಾರಾಷ್ಟ್ರದಲ್ಲಿಯೇ ಬೆಳೆಯಲಾಗುತ್ತದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಾಗೂ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಈರುಳ್ಳಿ ನೆಲಕಚ್ಚಿದೆ. ಪರಿಣಾಮವಾಗಿ ಬೆಲೆ ಗಗನಕ್ಕೆ ಏರಿಕೆಯಾಗಿದ್ದು, ಇದರ ಉಪಯೋಗವೇ ಅರ್ಧದಷ್ಟಕ್ಕೆ ನಿಂತಿದೆ.

Leave a Reply

Your email address will not be published. Required fields are marked *

You May Also Like

ಆಸ್ಟ್ರಿಯಾ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಬರಗೂರರ 'ಅಮೃತಮತಿ' ಆಯ್ಕೆ

ಬೆಂಗಳೂರು: ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ನ ಪುಟ್ಟಣ್ಣ ನಿರ್ಮಿಸಿ, ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ‘ಅಮೃತಮತಿ’ ಕನ್ನಡ ಚಿತ್ರ…

ನಾಡಪ್ರಭು ವಿಮಾನ ನಿಲ್ದಾಣದ ಟರ್ಮಿನಲ್‌–2 ಉದ್ಘಾಟಿಸಿದ ಮೋದಿ

ಉತ್ತರಪ್ರಭ ಸುದ್ದಿ ಬೆಂಗಳೂರ: ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು…

ಆಂತರಿಕ ಕಚ್ಚಾಟದಿಂದ ಸರ್ಕಾರ ಬಿದ್ರೆ ಚುನಾವಣೆಗೆ ಸಿದ್ಧ: ಸಿದ್ದರಾಮಯ್ಯ

ಬಿಜೆಪಿಯ ಆಂತರಿಕ ವಿಚಾರಕ್ಕೆ ನಾವು ಹೋಗುವದಿಲ್ಲ. ಆದರೆ ತಾವೇ ಹೊಡೆದಾಡಿಕೊಂಡು ಸರ್ಕಾರ ಬಿದ್ದರೆ, ಚುನಾವಣೆ ಎದುರಿಸಲು ನಾವು ಸಿದ್ಧ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಲಾಕ್ ಡೌನ್ ಬಗ್ಗೆ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ಲಾಕ್ ಡೌನ್ ಬಗ್ಗೆ ಸರ್ಕಾರ ಈಗಾಗಲೇ ನೀಡಿರುವ ಮಾರ್ಗಸೂಚಿಗೆ ಕೆಲವೊಂದು ಅಂಶಗಳನ್ನು ಸೇರ್ಪಡಿಸಿ ರಾಜ್ಯ…