ನವಾಡ : ರಾಹುಲ್ ಹಾಗೂ ತೇಜಸ್ವಿ ಯಾದವ್ ಜಂಟಿಯಾಗಿ ಪ್ರಧಾನಿ ಮೋದಿ ಹಾಗೂ ಬಿಹಾರದ ನಿತೀಶ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉದ್ಯೋಗ ಸೃಷ್ಟಿ ಮಾಡುವ ವಿಚಾರದಲ್ಲಿ ಬಿಹಾರ ಹಾಗೂ ಕೇಂದ್ರ ಸರ್ಕಾರಗಳು ವಿಫಲವಾಗಿವೆ ಎಂದು ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಅವರೇ ನೀವು ದೇಶವಾಸಿಗಳಿಗೆ ಸುಳ್ಳು ಹೇಳುವುದನ್ನು ಇನ್ನು ಮುಂದಾದರೂ ನಿಲ್ಲಿಸಿ. ಕಳೆದ ಚುನಾವಣೆಯಲ್ಲಿ ಬಿಹಾರದಲ್ಲಿ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದೀರಿ. ಆದರೆ, ಅಂಬಾನಿ ಹಾಗೂ ಅದಾನಿ ಬಳಗಕ್ಕಾಗಿ ಮೋದಿ ಕೆಲಸ ಮಾಡುತ್ತಿದ್ದಾರೆ ಎಂದು ರಾಹುಲ್ ಕಿಡಿಕಾರಿದ್ದಾರೆ.

ಕೇಂದ್ರದ ಕೃಷಿ ವಿಧೇಯಕಗಳನ್ನೂ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಬಿಹಾರದಲ್ಲಿ ಮಂಡಿ, ಎಪಿಎಂಸಿ ಬಂದ್ ಮಾಡಿಸಿದ ಬಳಿಕ ಇದೀಗ ಇಡೀ ದೇಶಕ್ಕೆ ಅನ್ವಯಿಸುತ್ತಿದ್ಧಾರೆ. ಈ ಮೂಲಕ ಲಕ್ಷಾಂತರ ಉದ್ಯೋಗಗಳನ್ನು ಕಡಿತ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಸುಳ್ಳುಗಳನ್ನೇ ಹೇಳುತ್ತಿದ್ದಾರೆ ಎಂದು ರಾಹುಲ್ ಹರಿಹಾಯ್ದಿದ್ದಾರೆ.

Leave a Reply

Your email address will not be published. Required fields are marked *

You May Also Like

ಚೀನಾ ಹಿಂದಿಕ್ಕಿ ಸಾಗುತ್ತಿದೆ ಭಾರತ!

ನವದೆಹಲಿ: ಮಹಾಮಾರಿ ಕೊರೊನಾ ಭಾರತದಲ್ಲಿ ತನ್ನ ಉಗ್ರ ಪ್ರತಾಪ ಮುಂದುವರೆಸಿದ್ದು, ದೇಶದಲ್ಲಿ 24 ಗಂಟೆಗಳಲ್ಲಿ 3,904…

ಕೇಂದ್ರ ಸಚಿವ ಕಿಶನ್ ರೆಡ್ಡಿ ಸಂತಾಪ

ವಿಶಾಖಪಟ್ಟಣ: ವಿಷಾನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಕೇಂದ್ರ ಸಚಿವ ಕಿಶನ್ ರೆಡ್ಡಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಸಂಸಾರದಲ್ಲಿ ಮೊಸರು ತಂದಿಟ್ಟ ಜಗಳ – ಪತಿಗೆ ಬರೋಬ್ಬರಿ 8 ವರ್ಷಗಳ ಶಿಕ್ಷೆ!

ಮುಂಬಯಿ : ಮೊಸರಿನಿಂದಾಗಿ ಶುರುವಾದ ಜಗಳದಲ್ಲಿ ಪತ್ನಿಯ ಕೊಂದ ಪತಿಗೆ ನ್ಯಾಯಾಲಯ 8 ವರ್ಷಗಳ ಶಿಕ್ಷೆ ವಿಧಿಸಿದೆ.

ಒಂದೇ ದಿನಕ್ಕೆ ರಾಜ್ಯದಲ್ಲಿ 50 ಪಾಸಿಟಿವ್

ಒಂದೇ ದಿನಕ್ಕೆ ರಾಜ್ಯದಲ್ಲಿ 50 ಪಾಸಿಟಿವ್ ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನದಲ್ಲಿ 50 ಪಾಸಿಟಿವ್ ಪ್ರಕರಣಗಳು…