ನವಾಡ : ರಾಹುಲ್ ಹಾಗೂ ತೇಜಸ್ವಿ ಯಾದವ್ ಜಂಟಿಯಾಗಿ ಪ್ರಧಾನಿ ಮೋದಿ ಹಾಗೂ ಬಿಹಾರದ ನಿತೀಶ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉದ್ಯೋಗ ಸೃಷ್ಟಿ ಮಾಡುವ ವಿಚಾರದಲ್ಲಿ ಬಿಹಾರ ಹಾಗೂ ಕೇಂದ್ರ ಸರ್ಕಾರಗಳು ವಿಫಲವಾಗಿವೆ ಎಂದು ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಅವರೇ ನೀವು ದೇಶವಾಸಿಗಳಿಗೆ ಸುಳ್ಳು ಹೇಳುವುದನ್ನು ಇನ್ನು ಮುಂದಾದರೂ ನಿಲ್ಲಿಸಿ. ಕಳೆದ ಚುನಾವಣೆಯಲ್ಲಿ ಬಿಹಾರದಲ್ಲಿ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದೀರಿ. ಆದರೆ, ಅಂಬಾನಿ ಹಾಗೂ ಅದಾನಿ ಬಳಗಕ್ಕಾಗಿ ಮೋದಿ ಕೆಲಸ ಮಾಡುತ್ತಿದ್ದಾರೆ ಎಂದು ರಾಹುಲ್ ಕಿಡಿಕಾರಿದ್ದಾರೆ.

ಕೇಂದ್ರದ ಕೃಷಿ ವಿಧೇಯಕಗಳನ್ನೂ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಬಿಹಾರದಲ್ಲಿ ಮಂಡಿ, ಎಪಿಎಂಸಿ ಬಂದ್ ಮಾಡಿಸಿದ ಬಳಿಕ ಇದೀಗ ಇಡೀ ದೇಶಕ್ಕೆ ಅನ್ವಯಿಸುತ್ತಿದ್ಧಾರೆ. ಈ ಮೂಲಕ ಲಕ್ಷಾಂತರ ಉದ್ಯೋಗಗಳನ್ನು ಕಡಿತ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಸುಳ್ಳುಗಳನ್ನೇ ಹೇಳುತ್ತಿದ್ದಾರೆ ಎಂದು ರಾಹುಲ್ ಹರಿಹಾಯ್ದಿದ್ದಾರೆ.

Leave a Reply

Your email address will not be published. Required fields are marked *

You May Also Like

ಲಡಾಖ್‍ನಲ್ಲಿ ಪ್ರಧಾನಿ ಮೋದಿ ತೆರೆಯಿತೆ ಲಡಾಯಿಯ ಹಾದಿ?

ಜೂನ್ 15ರಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಸಂಘರ್ಷದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸಂಘರ್ಷ ವಲಯಗಳಾದ ಲಡಾಕ್ ಮತ್ತು ಲೇಹ್ ಪ್ರದೇಶಕ್ಕೆ ಇಂದು ಭೇಟಿ ನೀಡಿ, ದೇಶದ ಸೈನಿಕ ಪಡೆಗಳಿಗೆ ನೈತಿಕ ಸ್ಥೈರ್ಯ ತುಂಬಿದರು.

ಗೆಳೆಯನಿಗಾಗಿ ಗಂಡನ ಮರ್ಮಾಂಗಕ್ಕೆ ಆಸಿಡ್ ಎರಚಿದ ಪಾಪಿ!

ಲಕ್ನೋ : ಗೆಳೆಯನಿಗಾಗಿ ಪತ್ನಿಯೊಬ್ಬರು ಗಂಡನ ಮರ್ಮಾಂಗಕ್ಕೆ ಆಸಿಡ್ ಹಾಕಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಮೀರತ್ ನ ಟಿ.ಪಿ. ನಗರದಲ್ಲಿ ನಡೆದಿದೆ. ಪತ್ನಿಯ ದಾಳಿಯಿಂದ ಮನನೊಂದ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಭಾಷಣ ನಿಲ್ಲಿಸಿ, ಕೆಲಸ ಮಾಡಿ: ಸಿದ್ದರಾಮಯ್ಯ

ಬೆಂಗಳೂರು: ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತಾಗಿದೆ @PMOIndia ಭಾಷಣಗಳು. ನಿಯಂತ್ರಣ ಮೀರಿ ಹರಡುತ್ತಿರುವ ಕೊರೊನಾ ಸೋಂಕಿನಿಂದ…

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ – ನಟಿಮಣಿಯರ ರಕ್ಷಣೆ!

ಮುಂಬಯಿ : ಹೈ ಟೆಕ್ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿದ್ದು, ಓರ್ವ ಸಿನಿಮಾ ನಟಿ ಸೇರಿದಂತೆ ಮೂವರು ಧಾರವಾಹಿ ನಟಿಯರನ್ನು ರಕ್ಷಿಸಲಾಗಿದೆ.