ಪಾಟ್ನಾ : ಸಿಎಂ ಯೋಗಿ ಆದಿತ್ಯನಾಥ್ ಅವರ ಭಾಷಣದ ವಿರುದ್ಧ ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. 

ಯಾರು, ಯಾವ ರಾಜ್ಯದಿಂದ, ಯಾವ ವಿಷಯದೊಂದಿಗೆ ಬರುತ್ತಾರೆ ಎಂಬುವುದು ನಮಗೆ ಮುಖ್ಯವಲ್ಲ. ನಿರುದ್ಯೋಗ, ಬಡತನ, ವಲಸೆಯಂತಸಹ ಸಮಸ್ಯೆಗಳು ಬಗೆಹರಿಯುವುದು ನಮಗೆ ಮುಖ್ಯ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಬಿಹಾರ ಚುನಾವಣೆಯಲ್ಲಿ ಕೇಂದ್ರ ಹಣಕಾಸು ಸಚಿವರು ಪ್ರಣಾಳಿಕೆ ಬಿಡುಗಡೆ ಮಾಡುತ್ತಾರೆ. ಇಲ್ಲಿಯವರೆಗೂ ಬಿಹಾರಕ್ಕೆ ಏಕೆ ವಿಶೇಷ ಸ್ಥಾನಮಾನ ಹಾಗೂ ಪ್ಯಾಕೇಜ್ ನ್ನು ಏಕೆ ನೀಡಲಿಲ್ಲ ಎಂಬುವುದರ ಬಗ್ಗೆ ನಿರ್ಮಲಾ ಸೀತಾರಾಮನ್ ಮಾತನಾಡಬೇಕು ಎಂದು ಒತ್ತಾಯಿಸಿದರು.

15 ವರ್ಷಗಳ ಕಾಲ ಆಡಳಿತ ನಡೆಸಿದ ನಂತರವೂ ಬಜೆಟ್‌ ನಲ್ಲಿನ ವಿನಾಯಿತಿಗಳು, ಅವುಗಳನ್ನು ಹೇಗೆ ಖರ್ಚು ಮಾಡಬೇಕೆಂಬುವುದು ಅವರಿಗೆ ತಿಳಿದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. 

ಬಿಹಾರದ ರೂ. 2,11,761 ಕೋಟಿ ಬಜೆಟ್ ನಲ್ಲಿ ಶೇ.40 ರಷ್ಟು ಹಣವನ್ನು ಎನ್ ಡಿಎ ಸರ್ಕಾರ ವೆಚ್ಚ ಮಾಡಿಲ್ಲ. ಸಾಲ, ಬೇಜವಾಬ್ದಾರಿತನ, ಭ್ರಷ್ಟಾಚಾರ, ಕಳಪೆ ನೀತಿಗಳು ಇದಕ್ಕೆ ಕಾರಣವಾಗಿದೆ. ವೆಚ್ಚ ಮಾಡದೆ ಇರುವ ಬೃಹತ್ ಹಣವನ್ನು ನಿತೀಶ್ ಕುಮಾರ್, ಸುಶೀಲ್ ಕುಮಾರ್ ಮೋದಿ ಅವರಂತೆಯೇ ಜಾತಿ ಮತ ಬ್ಯಾಂಕ್ ಸೃಷಿಸಲು ಬಳಸದೆ ನೂತನ ಅಭಿವೃದ್ಧಿ ಕೆಲಸಗಳಿಗಾಗಿ ಸುಲಭವಾಗಿ ನಾವು ಬಳಸುತ್ತೇವೆ ಎಂದರು.

Leave a Reply

Your email address will not be published. Required fields are marked *

You May Also Like

Pinup казино приветственный бонус, кэшбэк и продуманная система лояльности

Content Депозит и вывод выигрыша в Пин Ап Вход в аккаунт на…

3 ಕೃಷಿ ಕಾನೂನು ಹಿಂಪಡೆದ ಕೇಂದ್ರ ಸರ್ಕಾರ

ವದೆಹಲಿ: ದೇಶದ ಕೆಲ ಭಾಗಗಳಲ್ಲಿ ವಿವಾದ ಸೃಷ್ಟಿಸಿದ್ದ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.ಗುರುನಾನಕ್ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನುದ್ದೇಶಿಸಿ ಮಾತನಾಡಿದರು.

ಹರ್ತಿ ಗ್ರಾಮದಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

ಮುಳಗುಂದ: ತಾಲೂಕಿನ ಹರ್ತಿ ಗ್ರಾಮ ಪಂಚಾಯತಿಯ ಸಾರ್ವಜನಿಕ ಗ್ರಂಥಾಲಯದಲ್ಲಿ ಹೊಸದಾಗಿ ಅಳವಡಿಸಿದ ಡಿಜಿಟಲ್ ಗ್ರಂಥಾಲಯವನ್ನ ಜಿಲ್ಲಾ…