ಹೊಗಳು ಭಟ್ಟರಿಂದ ದೂರವಿರುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಸಲಹೆ ನೀಡಿದ ವಿಶ್ವನಾಥ್!

Siddaramayya ex cm

ಬಿಜೆಪಿಯವರ ತರಿಕ ಕಚ್ಚಾಟದಿಂದ ಸರ್ಕಾರ ಬಿದ್ರೆ ಚುನಾವಣೆಗೆ ಸಿದ್ಧ: ಸಿದ್ದರಾಮಯ್ಯ

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಳ್ಳಿ ಹಕ್ಕಿ ಸಲಹೆ ನೀಡಿದೆ. ಅವರಿಗೆ ಪಕ್ಷದಲ್ಲಿ ಮನ್ನಣೆ ಸಿಗುತ್ತಿಲ್ಲ. ಅವರು ಹೊಗಳು ಭಟ್ಟರಿಂದ ದೂರ ಇರಬೇಕು ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಎಚ್ಚರಿಕೆ ನೀಡಿದ್ದಾರೆ.

ರಾಜ ಮಹಾರಾಜರು ಸೇರಿದಂತೆ ದೊಡ್ಡ ಮಹನೀಯಕರು ಕೂಡ ಹೊಗಳು ಭಟ್ಟರನ್ನು ನಂಬಿ ಅವನತಿಯ ಹಾದಿ ಹಿಡಿದಿದ್ದಾರೆ. ನಾನು ಸಿದ್ದರಾಮಯ್ಯ ಅವರಲ್ಲಿ ಈಗಲೂ ಮನವಿ ಮಾಡುತ್ತೇನೆ. ಅವರು ಹೊಗಳು ಭಟ್ಟರಿಂದ ದೂರ ಇರಬೇಕು ಎಂದು ಹೇಳಿದ್ದಾರೆ.

ಳಿನ್ ಕುಮಾರ್ ಕಟೀಲ್‍ ಅವರನ್ನು  ಕಾಡು ಮನುಷ್ಯ ಎಂಬ ಸಿದ್ದರಾಮಯ್ಯ ಅವರ  ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಕಾಡು ಮನುಷ್ಯ ಅಂದ್ರೆ ಅರಣ್ಯ ಸಂರಕ್ಷಕರಿಗೆ ಮಾಡುವ ಅಪಮಾನವಾಗಿದೆ. ಈಗ ಎಷ್ಟೋ ಜನ ನಾವು ಕಾಡು ಜನ ಅಂತ ಸರ್ಟಿಫಿಕೇಟ್ ತೆಗೆದುಕೊಳ್ಳುತ್ತಿದ್ದಾರೆ. ಪಕ್ಷದ ರಾಜ್ಯಧ್ಯಾಕ್ಷನನ್ನ ಕಾಡುಮನುಷ್ಯ ಎನ್ನುವುದು ಸರಿಯೇ  ಎಂದು ಪ್ರಶ್ನಿಸಿದ್ದಾರೆ. 

ನೀವು ನಮ್ಮ ಮೈಸೂರಿನವರು ಭಾಷೆಯ ಮೇಲೆ ಹಿಡಿತ ನಿಮಗೆ ಇರಲಿ. ರಾಜಕೀಯ ಮುತ್ಸುದ್ದಿಯಾಗಿ ಬಳಸಿರುವ ಮಾತುಗಳನ್ನು ಹಿಂಪಡೆಯಿರಿ ಎಂದು ಹೇಳಿದ್ದಾರೆ. 

Exit mobile version