ಚಿಕ್ಕಬಳ್ಳಾಪುರ : ಬಿಜೆಪಿಯ ಹೈಕಮಾಂಡ್ ತಮ್ಮ ಅಭಿಪ್ರಾಯವನ್ನು ಯತ್ನಾಳ್ ಅವರ ಮೂಲಕ ಹೇಳಿಸುತ್ತಿದೆ ಎಂದು ಶಾಸಕ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನ ಶ್ರೀರಕ್ಷೆ ಇರುವುದರಿಂದಲೇ ಯತ್ನಾಳ್ ಈ ರೀತಿ ಮಾತನಾಡುತ್ತಿದ್ದಾರೆ. ಯತ್ನಾಳ್ ಅವರಿಗೆ ಇರುವ ಧೈರ್ಯ ಬಿಜೆಪಿಯ ಮತ್ತೊಬ್ಬ ನಾಯಕನಲ್ಲಿ ಇಲ್ಲ. ಹೀಗಾಗಿ ಅವರ ವಿರುದ್ಧ ಬಿಜೆಪಿ ನಾಯಕರು ಕ್ರಮ ಕೈಗೊಳ್ಳಲು ಆಗುತ್ತಿಲ್ಲ. ಈ ರೀತಿ ಬೇರೆ ಯಾರಾದರೂ ಮಾತನಾಡಿದರೆ ಪಕ್ಷದಿಂದ ಉಚ್ಛಾಟನೆ ಮಾಡುತ್ತಿದ್ದರು ಎಂದು ಹೇಳಿದ್ದಾರೆ.

ಉತ್ತರ ಕರ್ನಾಟಕದವರು 100 ಶಾಸಕರನ್ನು ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸುತ್ತಾರೆ. ಆದರೆ, ಉಳಿದ ಭಾಗದಲ್ಲಿ ಕೇವಲ 15 ಶಾಸಕರು ಬಿಜೆಪಿಯಿಂದ ಗೆದ್ದು ಅವರಲ್ಲೇ ಒಬ್ಬರು ಸಿಎಂ ಆಗುತ್ತಾರೆ. ಹೀಗಾಗಿ ಉತ್ತರ ಕರ್ನಾಟಕ ಭಾಗದ ವ್ಯಕ್ತಿಯನ್ನು ಸಿಎಂ ಮಾಡುವ ಅವಶ್ಯಕತೆ ಇದೆ ಎಂದು ಯತ್ನಾಳ್ ಹೇಳಿದ್ದರು.

ಯಾರ ಬೆಂಬಲವೂ ಇಲ್ಲದೆ ಸಿಎಂ ಬದಲವಾಣೆ ಕುರಿತು ಮಾತನಾಡಲು ಬರುವುದಿಲ್ಲ. ಯತ್ನಾಳ್ ಅವರಿಗೆ ಉತ್ತರ ಕರ್ನಾಟಕದವರನ್ನೇ ಸಿಎ ಮಾಡಲಾಗುತ್ತದೆ ಎಂದು ಹೇಳಿರಬಹುದು. ಹೀಗಾಗಿ ಅಷ್ಟು ಗಟ್ಟಿಯಾಗಿ ಸಿಎಂ ಬದಲಾವಣೆ ಕುರಿತು ಹೇಳಿತ್ತಿದ್ದಾರೆ. ಮುಂದೆ ಯತ್ನಾಳ್ ಅವರೇ ಸಿಎಂ ಅಗಬಹುದು ಎಂದು ಹೊರಟ್ಟಿ ಹೇಳಿದ್ದಾರೆ.

ಈ ಹೇಳಿಕೆ ವಿರೋಧಿಸಿದ ಸಚಿವ ಕೆ.ಎಸ್. ಈಶ್ವರಪ್ಪ, ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು. ಯತ್ನಾಳ್ ಉತ್ತರನ ಪೌರುಷನಂತೆ ಮೂರ್ಖತನದ ಹೇಳಿಕೆ ನೀಡಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದ್ದರು.

Leave a Reply

Your email address will not be published. Required fields are marked *

You May Also Like

ಹಾಸ್ಯನಟ ಮಿಮಿಕ್ರಿ ರಾಜಗೋಪಾಲ್ ಕಾಲವಶ

ಬೆಂಗಳೂರು: ಕನ್ನಡ, ತಮಿಳು ಮತ್ತಿತರ ಭಾಷೆಗಳ 650ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಾಸ್ಯ ನಟ ಮಿಮಿಕ್ರಿ…

ಯುವಜನ ಸಂಕಲ್ಪ ಯಾತ್ರೆಗೆ ಅದ್ದೂರಿ ಚಾಲನೆ ಯುವಜನತೆಯಲ್ಲಿ ಉಕ್ಕಿದ ದೇಶ ಭಕ್ತಿ. ಎಲ್ಲೆಲ್ಲೂ ತಿರಂಗಾ ಕಲರವ

ಉತ್ತರಪ್ರಭ ಸುದ್ದಿಆಲಮಟ್ಟಿ: ರಾಷ್ಟ್ರಧರ್ಮ ದೃಷ್ಟಾರ, ನೈಷ್ಟಿಕ ಬ್ರಮ್ಮಚಾರಿ, ಸಮಾಜಮುಖಿಯ ಅದಮ್ಯ ಚೇತನ, ಕನಾ೯ಟಕ ಗಾಂಧಿ ಹಡೇ೯ಕರ…

ಡಂಬಳ : ಪಶು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ

ಜಾನುವಾರುಗಳಿಗೆ ಚಿಕಿತ್ಸೆ ನೀಡುವುದಕ್ಕೆ ಪಶು ಆಸ್ಪತ್ರೆ ಇದ್ದರೂ ಕೂಡ ಜಾನುವಾರುಗಳಿಗೆ ಚಿಕಿತ್ಸೆ ಸಿಗದೇ ಜಾನುವಾರಗಳು ನರಳಾಡುವಂತಹ ಪರಸ್ಥಿತಿ ಎದುರಾಗಿದೆ.

ಬೆಂಗಳೂರಿನಲ್ಲಿ ದಂಪತಿಯ ಬರ್ಬರ ಹತ್ಯೆ

ನಗರದಲ್ಲಿ ದಂಪತಿಯ ಹತ್ಯೆ ನಡೆದಿದ್ದು, ಮಗನಿಂದಲೇ ನಡೆದಿದೆ ಎನ್ನಲಾಗಿದೆ. ಕೋಣನಕುಂಟೆ ಬಳಿಯ ಆರ್ ಬಿಐ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಗೋವಿಂದಪ್ಪ(65), ಶಾಂತಮ್ಮ(55) ಕೊಲೆಯಾದ ದುರ್ದೈವಿಗಳು. ಇವರನ್ನು ಟೆಕ್ಕಿಯಾಗಿರುವ ಮಗ ನವೀನ್ ಕೊಲೆಗೈದಿರಬಹುದು ಎಂಬ ಶಂಕಿಸಲಾಗಿದೆ.