ನವದೆಹಲಿ : ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ಅವರ ಕಾಲೆಳೆಯುವ ಕಾರ್ಯವನ್ನು ನೆಟ್ಟಿಗರು ಮಾಡುತ್ತಿದ್ದಾರೆ.    

ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ 41ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀನಾಯ ಸೋಲು ಕಂಡಿದೆ. ಮೊದಲು ಬ್ಯಾಟಿಂಗ್‌ ಮಾಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ, 20 ಓವರ್‌ ಗಳಲ್ಲಿ 9 ವಿಕೆಟ್ ಕಳೆದುಕೊಂಡು 114 ರನ್‌ ಗಳಿಸಿತ್ತು. ಆದರೆ, ಒಂದು ವಿಕೆಟ್ ಪಡೆಯುವಲ್ಲಿ ಕೂಡ ಚೆನ್ನೈ ವಿಫಲವಾಗಿತ್ತು. ಅಲ್ಲದೇ, ಭರ್ಜರಿ ಬ್ಯಾಟಿಂಗ್ ಮಾಡಿದ್ದ ಮುಂಬಯಿ ತಂಡ, ಇಶಾನ್‌ ಕಿಶಾನ್‌ (68) ಹಾಗೂ ಕ್ವಿಂಟನ್‌ ಡಿ ಕಾಕ್‌(46) ರನ್ ಗಳಿಗೆ ಭರ್ಜರಿಯಾಗಿ ಜಯ ಗಳಿಸಿ ಅಂಕ ಪಟ್ಟಿಯಲ್ಲಿ ಮೊದಲನೇ ಸ್ಥಾನಕ್ಕೆ ಏರಿದೆ. 

ಹೀಗಾಗಿ ಧೋನಿ ಅವರನ್ನು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ಐಪಿಎಲ್‌ ಇತಿಹಾಸದಲ್ಲಿಯೇ ದೊಡ್ಡ ಸೋಲು ಅನುಭವಿಸಿದ್ದಾರೆ ಎಂದು ನೆಟ್ಟಿಗರು ಟ್ರೋಲ್‌ ಮಾಡುತ್ತಿದ್ದಾರೆ. 

ಆದರೆ, ಚೆನ್ನೈ ಫ್ರಾಂಚೈಸಿ ಫ್ಲೇ ಆಫ್‌ ಹಾದಿ ಸಂಪೂರ್ಣವಾಗಿ ಬಂದ್ ಆಗಿದೆ. ಆಡಿದ 11 ಪಂದ್ಯಗಳಲ್ಲಿ ಕೇವಲ ಮೂರು ಪಂದ್ಯಗಳಲ್ಲಿ ಮಾತ್ರ ಜಯ ಗಳಿಸಿದೆ. 13 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಧೋನಿ ನಾಕೌಟ್‌ ಗೆ ಅರ್ಹತೆ ಪಡೆಯುವಲ್ಲಿ ವಿಫಲರಾಗಿದ್ದಾರೆ. 

ಮಾಡು ಇಲ್ಲವೆ ಮಡಿ ಪರಿಸ್ಥಿತಿಯಲ್ಲಿ ಆಡಿದ ಚೆನ್ನೈ ಸೂಪರ್‌ ಕಿಂಗ್ಸ್ ಐಪಿಎಲ್‌ ಇತಿಹಾಸದಲ್ಲಿಯೇ ಅತ್ಯಂತ ಕೆಟ್ಟ ಆರಂಭ ಪಡೆದಿದೆ. ದಾಖಲೆಯ ಗೆಲುವು ದಾಖಲಿಸಿರುವ ಮುಂಬಯಿ ತಂಡ, ಮೊದಲ ಸ್ಥಾನಕ್ಕ ಜಿಗಿಯಿತು. ಅಲ್ಲದೇ, 14 ಅಂಕಗಳನ್ನೇ ಪಡೆದಿರುವ ದೆಹಲಿ ಹಾಗೂ ಬೆಂಗಳೂರು ತಂಡ ಎರಡು ಹಾಗೂ ಮೂರನೇ ಸ್ಥಾನಕ್ಕೆ ಏರಿವೆ. 

Leave a Reply

Your email address will not be published. Required fields are marked *

You May Also Like

ಕನ್ನಡಿಗನಿಗೆ ಒಲಿದು ಬರಲಿದೆಯೇ ಧೋನಿ ಸ್ಥಾನ!

ಮಹೇಂದ್ರಸಿಂಗ್ ಧೋನಿ ಅವರು ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಭಾರತೀಯ ತಂಡದ ವಿಕೇಟ್ ಕೀಪಿಂಗ್ ಬಗ್ಗೆ ಚರ್ಚೆಗಳು ಶುರುವಾಗಿದೆ. ಇದಕ್ಕೆ ಹತ್ತಾರು ಹೆಸರುಗಳು ಮುನ್ನೆಲೆಗೆ ಬಂದು ಚರ್ಚೆಗೆ ಕಾರಣವಾಗುತ್ತಿವೆ.

ರಾಜ್ಯ ಮಟ್ಟದ ಶ್ರೀ ಸಂತ ಸೇವಾಲಾಲ್ ಕ್ರಿಕೆಟ್ ಕಪ್ ಪಂದ್ಯಾವಳಿ: ಹೂವಿನ ಹಡಗಲಿ ಕೆಸುಲ ವಾರಿಯರ್ಸ್ ತಂಡ ಆಯ್ಕೆ

ಹೂವಿನಹಡಗಲಿ: ಬೆಂಗಳೂರಿನಲ್ಲಿ ಶ್ರೀ ಸೇವಾಲಾಲ್ ಜಯಂತಿ ಪ್ರಯುಕ್ತ ದಿನಾಂಕ 04.02.2022 ರಿಂದ 06.02.2022 ರವರೆಗೆ ಟೂರ್ನಿ…

ಕೆ. ಎಚ್. ಪಾಟೀಲ ಫುಟಬಾಲ್ ಲೀಗ್-2022 ಉದ್ಘಾಟನೆ

ಉತ್ತರಪ್ರಭ ಸುದ್ದಿ ಗದಗ: ಕರ್ನಾಟಕ ಸ್ಫೋರ್ಟ್ಸ್ ಆ್ಯಂಡ್ ಎಜ್ಯುಕೇಶನ್ ಅಕ್ಯಾಡೆಮಿ ಗದಗ ಇವರ ವತಿಯಿಂದ ಕೆ.…

ಸಿಎಸ್ ಕೆ ಕ್ಯಾಪ್ಟನ್ ಸ್ಥಾನಕ್ಕೆ ಧೋನಿ ರಾಜೀನಾಮೆ

ಮುಂಬೈ: ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ ಕೆ) ತಂಡದ ನಾಯಕ…