ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುವತ್ತ ಹೆಜ್ಜೆ ಹಾಕಿದೆ. ಇಂದು ರಾಜ್ಯದಲ್ಲಿ 4,471 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, ಇಂದು 52 ಜನ ಕೊರೊನಾದಿಂದ ಸಾವನ್ನಪ್ಪಿದ್ದಾರೆ. 

ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 7,98,378ಕ್ಕೆ ಏರಿಕೆ ಕಂಡಿದೆ. ಅಲ್ಲದೇ, ರಾಜ್ಯದಲ್ಲಿ ಇನ್ನೂ 86,749 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ರಾಜ್ಯದಲ್ಲಿ ಕೊರೊನಾ 10,873 ಸೋಂಕಿತರನ್ನು ಮಹಾಮಾರಿ ಬಲಿ ಪಡೆದುಕೊಂಡಿದೆ. ಐಸಿಯುನಲ್ಲಿ 935 ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಸೋಂಕಿನ ಖಚಿತ ಪ್ರಮಾಣ ಶೇ. 3.97ರಷ್ಟಾಗಿದೆ. ಮೃತಪಟ್ಟವರ ಪ್ರಮಾಣ ಶೇ.1.16ರಷ್ಟಿದೆ. ಇಂದು ಒಟ್ಟು 1,12,545 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

ಇಂದು ಬಾಗಲಕೋಟೆ 57, ಬಳ್ಳಾರಿ 129, ಬೆಳಗಾವಿ 73, ಬೆಂಗಳೂರು ಗ್ರಾಮಾಂತರ 102, ಬೆಂಗಳೂರು ನಗರ 2,251, ಬೀದರ್ 7, ಚಾಮರಾಜನಗರ 34, ಚಿಕ್ಕಬಳ್ಳಾಪುರ 78, ಚಿಕ್ಕಮಗಳೂರು 85, ಚಿತ್ರದುರ್ಗ 84, ದಕ್ಷಿಣ ಕನ್ನಡ 136, ದಾವಣಗೆರೆ 52, ಧಾರವಾಡ 93, ಗದಗ 14, ಹಾಸನ 136, ಹಾವೇರಿ 30, ಕಲಬುರಗಿ 71, ಕೊಡಗು 33, ಕೋಲಾರ 45, ಕೊಪ್ಪಳ 49, ಮಂಡ್ಯ 163, ಮೈಸೂರು 173, ರಾಯಚೂರು 25, ರಾಮನಗರ 22, ಶಿವಮೊಗ್ಗ 79, ತುಮಕೂರು 232, ಉಡುಪಿ 81, ಉತ್ತರ ಕನ್ನಡ 48, ವಿಜಯಪುರ 62 ಮತ್ತು ಯಾದಗಿರಿಯಲ್ಲಿ 27 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

Leave a Reply

Your email address will not be published. Required fields are marked *

You May Also Like

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರವಾಸ ಕಾರ್ಯಕ್ರಮ

ಉತ್ತರಪ್ರಭ ಸುದ್ದಿಗದಗ: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿಯವರು   ಫೆಬ್ರುವರಿ 12 ರಂದು…

ಜಿಲ್ಲಾದ್ಯಂತ ಶೇಕಡ 38.98 ಮತದಾನ: ಮದ್ಯಾಹ್ನ 1ಗಂಟೆವರೆಗಿನ ವಿವರ

ಗದಗ ಜಿಲ್ಲೆ ವಿಧಾನಸಭಾ ಚುನಾವಣೆ ಮತದಾನ ವಿವರ ಮಧ್ಯಾಹ್ನ 1=00 ಗಂಟೆಯವರೆಗೆ ಶೇಕಡಾವಾರು ಮತದಾನ ಇಂತಿದೆ.…

ನಾನು ಎಸ್ಕಾರ್ಟ್ ನಲ್ಲಿ ಓಡಾಡುವುದು ಕೆಲವರಿಗೆ ಬೇಸರ ತಂದಿರಬಹುದು: ಸಚಿವ ಡಾ. ನಾರಾಯಣಗೌಡ

ನಾನು ತಳಮಟ್ಟದಿಂದ ಬಂದವನು. ಯಾರ ಬಗ್ಗೆಯೂ ಲಘುವಾಗಿ ಮಾತಾಡಲ್ಲ. ನಾಗಮಂಗಲ ಶಾಸಕ ಸುರೇಶ್ ಗೌಡ ಅವರ ಬಗ್ಗೆ ನಾನು ಸಿಡಿ ವಿಚಾರ ಏನು ಹೇಳಿಲ್ಲ. ಅವರು ಏಕೆ ಹಾಗೆ ಮಾತಾಡಿದ್ರೊ ನನಗೆ ಗೊತ್ತಿಲ್ಲ.

ಗಂಗಾಮತ ಸಮಾಜದ ವಧು-ವರರ ಸಮಾವೇಶ

ನಿಜಶರಣ ಅಂಬಿಗರ ಚೌಡಯ್ಯನವರ ಸಮಾಜದಿಂದ ವಧು-ವರರ ಸಮಾವೇಶ ಜ.31 ರಂದು ಶ್ರೀ ತೋಂಟದ ಸಿದ್ಧಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಪೂಜ್ಯಶ್ರೀ ಷ.ಬ್ರ. ಫಕೀರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಜರುಗಲಿದೆ.