ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುವತ್ತ ಹೆಜ್ಜೆ ಹಾಕಿದೆ. ಇಂದು ರಾಜ್ಯದಲ್ಲಿ 4,471 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, ಇಂದು 52 ಜನ ಕೊರೊನಾದಿಂದ ಸಾವನ್ನಪ್ಪಿದ್ದಾರೆ. 

ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 7,98,378ಕ್ಕೆ ಏರಿಕೆ ಕಂಡಿದೆ. ಅಲ್ಲದೇ, ರಾಜ್ಯದಲ್ಲಿ ಇನ್ನೂ 86,749 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ರಾಜ್ಯದಲ್ಲಿ ಕೊರೊನಾ 10,873 ಸೋಂಕಿತರನ್ನು ಮಹಾಮಾರಿ ಬಲಿ ಪಡೆದುಕೊಂಡಿದೆ. ಐಸಿಯುನಲ್ಲಿ 935 ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಸೋಂಕಿನ ಖಚಿತ ಪ್ರಮಾಣ ಶೇ. 3.97ರಷ್ಟಾಗಿದೆ. ಮೃತಪಟ್ಟವರ ಪ್ರಮಾಣ ಶೇ.1.16ರಷ್ಟಿದೆ. ಇಂದು ಒಟ್ಟು 1,12,545 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

ಇಂದು ಬಾಗಲಕೋಟೆ 57, ಬಳ್ಳಾರಿ 129, ಬೆಳಗಾವಿ 73, ಬೆಂಗಳೂರು ಗ್ರಾಮಾಂತರ 102, ಬೆಂಗಳೂರು ನಗರ 2,251, ಬೀದರ್ 7, ಚಾಮರಾಜನಗರ 34, ಚಿಕ್ಕಬಳ್ಳಾಪುರ 78, ಚಿಕ್ಕಮಗಳೂರು 85, ಚಿತ್ರದುರ್ಗ 84, ದಕ್ಷಿಣ ಕನ್ನಡ 136, ದಾವಣಗೆರೆ 52, ಧಾರವಾಡ 93, ಗದಗ 14, ಹಾಸನ 136, ಹಾವೇರಿ 30, ಕಲಬುರಗಿ 71, ಕೊಡಗು 33, ಕೋಲಾರ 45, ಕೊಪ್ಪಳ 49, ಮಂಡ್ಯ 163, ಮೈಸೂರು 173, ರಾಯಚೂರು 25, ರಾಮನಗರ 22, ಶಿವಮೊಗ್ಗ 79, ತುಮಕೂರು 232, ಉಡುಪಿ 81, ಉತ್ತರ ಕನ್ನಡ 48, ವಿಜಯಪುರ 62 ಮತ್ತು ಯಾದಗಿರಿಯಲ್ಲಿ 27 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

Leave a Reply

Your email address will not be published. Required fields are marked *

You May Also Like

ಪೋಲಿಸ್ ಸಬ್‌ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಇನ್ನೂಳಿದ ವೃಂದಗಳ ಪೊಲೀಸ್ ಸಬ್‌ಇನ್ಸ್ಪೆಕ್ಟರ್ (ಸಿವಿಲ್) (ಪುರುಷ, ಮಹಿಳೆ ಮತ್ತು ಸೇವೆಯಲ್ಲಿರುವವರು) ಒಟ್ಟು 545 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಎಂಇಎಸ್ ಗೆ ಖಡಕ್ ವಾರ್ನಿಂಗ್…ಬೆಳಗಾವಿಯಲ್ಲಿ ಹೈ ಅಲರ್ಟ್!

ಬೆಳಗಾವಿ : ರಾಜ್ಯದಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಇದಕ್ಕೆ ಬೆಳಗಾವಿ ಜಿಲ್ಲೆ ಕೂಡ ಹೊರತಾಗಿಲ್ಲ. ಆದರೆ, ಕನ್ನಡ ಹಬ್ಬ ಆಚರಿಸುವ ಬದಲಾಗಿ ಕರಾಳ ದಿನಾಚರಣೆ ಆಚರಿಸಲು ಮುಂದಾಗಿದ್ದ ಎಂಇಎಸ್‍ ಗೆ ಮುಖ ಭಂಗವಾಗಿದೆ.

ಗದಗನಲ್ಲಿ ಮತ್ತೆ ನಾಲ್ಕು ಕೊರೋನಾ ಪಾಸಿಟಿವ್

ಕೊರೋನಾ ಸೋಂಕು ಮುಕ್ತವಾಗಿದ್ದ ಗದಗ ಜಿಲ್ಲೆಯಲ್ಲಿ ಕಳೆದೆರಡು ದಿನಗಳ ಹಿಂದಷ್ಟೆ ಮೂರು ಕೊರೋನಾ ಪಾಸಿಟ್ ಕೇಸ್ ಪತ್ತೆಯಾಗಿದ್ದವು. ಇದರ ಬೆನ್ನಲ್ಲೆ ಇದೀಗ ಇಂದು ಮತ್ತೆ ನಾಲ್ಕು ಪಾಸಿಟಿವ್ ಕೇಸ್ ದೃಢಪಟ್ಟಿವೆ.

ಮೊಟ್ಟೆ ಭಾಗ್ಯ ವಿಸ್ತರಿಸಿ ಬಜೆಟ್ ನಲ್ಲಿ ಘೋಷಿಸಿ- ಸರಕಾರಕ್ಕೆ ಆಗ್ರಹ

ಆಲಮಟ್ಟಿ : 1 ರಿಂದ 10 ನೇ ತರಗತಿ ಮಕ್ಕಳಿಗೆ ನೀಡಲಾಗುತ್ತಿರುವ ಕ್ಷೀರ ಭಾಗ್ಯದ ಮಾದರಿಯಲ್ಲೇ…