ಭಗಲ್ ಪುರ : ರಾಷ್ಟ್ರದ ಹಿತಾಸಕ್ತಿ ಮನದಲ್ಲಿಟ್ಟು ಎನ್ ಡಿಎ ಕೆಲಸ ಮಾಡುತ್ತಿದ್ದರೆ ವಿಪಕ್ಷಗಳು ವಿರೋಧಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಹೀಗಾಗಿ ಬಿಹಾರದ ಪ್ರಗತಿಗಾಗಿ ಸೂಕ್ತ ಪಕ್ಷವನ್ನು ಆಯ್ಕೆ ಮಾಡಬೇಕು ಎಂದು ಜನರಿಗೆ ಮನವಿ ಮಾಡಿದ್ದಾರೆ. ಯಾವುದೇ ಒಂದು ಪಕ್ಷದ ಹೆಸರನ್ನು ಉಲ್ಲೇಖಿಸದ ಮೋದಿ, ಬಿಹಾರದ ಜನರು ವಿಪಕ್ಷಗಳಿಗೆ ಅವಕಾಶ ನೀಡಿದಾಗಲೆಲ್ಲಾ ದ್ರೋಹವನ್ನೇ ಎಸಗಿವೆ. ರಾಜ್ಯವನ್ನು  ಅಭಿವೃದ್ಧಿಪಡಿಸುವ ಬದಲು ಮತ್ತು ತಮ್ಮ ವೈಯಕ್ತಿಕ ಪ್ರಗತಿಗೆ, ಕುಟುಂಬ ಹಾಗೂ ಸಂಬಂಧಿಕರ ಅಭಿವೃದ್ಧಿಗೆ ಮಾತ್ರ ಅವರು ಆದ್ಯತೆ ನೀಡಿದ್ದಾರೆ. ಜನರ ಕಲ್ಯಾಣಕ್ಕಾಗಿ ಗಮನ ಹರಿಸಿಲ್ಲ ಎಂದು ಟೀಕಿಸಿದ್ದಾರೆ. 

ಸೂಕ್ತ ಪಕ್ಷವನ್ನು ಜನರು ಆಯ್ಕೆ ಮಾಡದಿದ್ದರೆ ಮತ್ತೊಮ್ಮೆ ಅಂತಹ ಶಕ್ತಿಗಳು ವಿಜೃಂಭಿಸಲು ನಾವೇ ಅವಕಾಶ ನೀಡಿದಂತಾಗುತ್ತದೆ. ಪ್ರಗತಿ ಮತ್ತು ಬಿಹಾರದ ಒಟ್ಟಾರೆ  ಅಭಿವೃದ್ಧಿಗಾಗಿ ಎನ್‍ ಡಿಎ ಅಭ್ಯರ್ಥಿ ಪರವಾಗಿ ಮತ ಚಲಾಯಿಸುವಂತೆ ಮನವಿ ಮಾಡಿದ್ದಾರೆ.

370ನೇ ವಿಧಿ ರದ್ದುಗೊಳ್ಳಲು ಎಲ್ಲರೂ ಕಾಯುತ್ತಿದ್ದರು. ಆದರೆ, ತಾವು ಅಧಿಕಾರಕ್ಕೆ ಬಂದರೆ ಕೇಂದ್ರ ಸರ್ಕಾರದ ನಿರ್ಧಾರವನ್ನು ರದ್ದುಪಡಿಸುವುದಾಗಿ ಪ್ರತಿಪಕ್ಷಗಳು ಹೇಳುತ್ತಿವೆ. ಇಂತಹ ಹೇಳಿಕೆಯನ್ನು ನೀಡಿದ ನಂತರ ಅವರಿಗೆ ಬಿಹಾರದಲ್ಲಿ ಮತ ಕೇಳುವ ಧೈರ್ಯವಿದೆಯೇ? ಇದು ಬಿಹಾರಕ್ಕೆ ಅವಮಾನವಲ್ಲವೇ? ಎಂದು ಪ್ರಶ್ನಿಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ನಾಳೆ ಕಾಂಗ್ರೆಸ್ ನಿಂದ ಶಿವಮೊಗ್ಗ ಚಲೋ ಆರಂಭ

ಕಾಂಗ್ರೆಸ್ ನಾಯಕರ ಮೇಲೆ ಬಿಜೆಪಿ ನೀಡುತ್ತಿರುವ ಕಿರುಕುಳವನ್ನು ಖಂಡಿಸಿ ಮಾ.13 ರಂದು ಮದ್ಯಾಹ್ನ 1ಕ್ಕೆ ಶಿವಮೊಗ್ಗ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ನಾಯಕ ಡಿ.ಕೆ ಶಿವಕುಮಾರ ಅವರು ತಮ್ಮ ಟ್ವಿಟರ್ ಮೂಲಕ ತಿಳಿಸಿದ್ದಾರೆ.

ನಡಕಟ್ಟಿನ ಕೂರಿಗೆ ಸಂಶೋಧನೆಗೆ ಪದ್ಮಶ್ರೀ ಪ್ರಶಸ್ತಿಯ ಗರಿ

ಧಾರವಾಡ: ಬಿತ್ತುವ ಕೂರಿಗೆ ತಜ್ಞ ಅಬ್ದುಲ್‌ ಖಾದರ್ ನಡಕಟ್ಟಿನ ಗೆ ಪದ್ಮಶ್ರೀ ಪ್ರಶಸ್ತಿಯ ಗರಿ ಹೌದು…

ಮುಂಚೂಣಿ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಲಸಿಕಾಕರಣ

ಗದಗ : ಜಿಲ್ಲೆಯಲ್ಲಿನ ಆರೋಗ್ಯ ಕಾರ್ಯಕರ್ತರ, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷದ ಮೇಲ್ಪಟ್ಟ ಸಹ…

ಬೇರೆ ರಾಜ್ಯ, ದೇಶಗಳಿಂದ ಆಗಮಿಸಿದ ಕನ್ನಡಿಗರು!

ಆಪರೇಷನ್ ವಂದೇ ಭಾರತ್ ಮೆಗಾ ಏರ್‌ಲಿಫ್ಟ್ ಮೂಲಕ ಬೇರೆ ಬೇರೆ ರಾಜ್ಯಗಳಿಂದ ಮತ್ತು ವಿದೇಶಗಳಿಂದ ಕನ್ನಡಿಗರು ಮರಳುತ್ತಿದ್ದು, ನಗರಕ್ಕೆ ಇಂದು 326 ಜನ ಕನ್ನಡಿಗರು ಆಗಮಿಸಿದ್ದಾರೆ.