ಮಸ್ಕಿ: ಸಮೀಪ ನೀಲಾನಗರದ ದುರ್ಗಾದೇವಿ ಜಾತ್ರೆಯನ್ನು ಸರಳವಾಗಿ ಆಚರಣೆ ಮಾಡಲಾಗುವುದು ಎಂದು ಬಂಜಾರ ಪೀಠಾಧಿಪತಿ ಕುಮಾರ ಮಹಾರಾಜ ತಿಳಿಸಿದರು.

ದಸರಾ ಹಬ್ಬದ ನಿಮಿತ್ಯ ಪ್ರತಿ ವರ್ಷ ಅದ್ದೂರಿಯಾಗಿ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಗುತಿತ್ತು, ಈ ಭಾರಿ ಕೊರೊನಾ ಹಿನ್ನೆಲೆಯಲ್ಲಿ ಅ.25ರಂದು ದೇವಿಯ ಮೂರ್ತಿಗೆ ಅಲಂಕರಿಸಿ ಪೂಜೆ ಪುರಸ್ಕಾರ ಅಭಿಷೇಕ ಮಾಡಲಾಗುವುದು.

ಯಾವುದೇ ವೇದಿಕೆ ಕಾರ್ಯಕ್ರಮ, ‌ಸಾಮಾಜಿಕ ನಾಟಕ ಇರುವುದಿಲ್ಲ. ಅಂದಿನ ದಿನ ದೇವಿಯ ದರ್ಶನ ಪಡೆಯಲು ಬರುವ ಭಕ್ತರು ಮುಖಕ್ಕೆ ಮಾಸ್ಕ್ ಹಾಕಿಕೊಳ್ಳಬೇಕು. ಸಾಮಾಜಿಕ ಅಂತರ ಕಾಪಾಡಿಕೊಂಡು ಜಾತ್ರೆ ಆಚರಣೆ ಮಾಡಬೇಕೆಂದು ಮನವಿ ಮಾಡಿದರು.

ರಾಯಚೂರು, ಯಾದಗಿರಿ ಜಿಲ್ಲೆಯಿಂದ ಬರುವ ಭಕ್ತರು ಜಾತ್ರೆ ಇಲ್ಲ ಎಂದು ಗೊಂದಲಕ್ಕೆ ಒಳಗಾಗಬಾರದು.‌ ದೇವಿಯ ಜಾತ್ರೆ ಸರಳವಾಗಿ ಆಚರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಜನ ಮೈಮರೆಯದೆ ಮಾರ್ಗಸೂಚಿ ಪಾಲಿಸಿ; ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು: ಮೇ 30-ಕೋವಿಡ್ ಪಾಸಿಟೀವ್ ಪ್ರಮಾಣ ಕಡಿಮೆಯಾಗಿದೆ ಎಂದು ಜನರು ಮೈಮರೆಯದೆ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಲಹೆ ಮಾಡಿದ್ದಾರೆ.

ಕರೋನಾ ಬಂದಿದೆ ಎಂದು ಹೇಳಲು ನಾಚಿಕೆ ಪಡಬೇಕಾಗಿಲ್ಲ: ಜಾಗೃತಿ ಬೇಕಷ್ಟೆ: ಬಿ.ಸಿ.ಪಾಟೀಲ್

ಕೊರೋನಾ ಸಾಂಕ್ರಾಮಿಕ ಸೋಂಕಾಗಿದ್ದು,ಕೊರೊನಾ ಸೋಂಕು ಬಂದಿದೆ ಎಂದು ಹೇಳಲು ಯಾರೂ ಮುಜುಗರಪಡುವುದಾಗಲೀ ನಾಚಿಕೆ ಪಡುವುದಾಗಲೀ ಮಾಡಬಾರದು ಎಂದಯ ಕೃಷಿ ಸಚಿವರೂ ಆಗಿರುವ ಹಿರೇಕೆರೂರು ಮತಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

ರಕ್ತದಾನ ಮಾಡಿ ಜೀವ ಉಳಿಸಿ

ಆರೋಗ್ಯವಂತ ಯುವಕ ಯುವತಿಯರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆಯಿಂದ ಬಳಲುವ ಅಮೂಲ್ಯ ಜೀವಗಳನ್ನು ಉಳಿಸಲು ಮುಂದಾಗಬೇಕೆಂದು ಐಎಂಎ ಬ್ಲಡ್ ಬ್ಯಾಂಕ್‌ನ ವೈದ್ಯಾಧಿಕಾರಿ ಆರ್.ಟಿ. ಪವಾಡಶೆಟ್ಟರ್ ಹೇಳಿದರು.

ಮಾಟ, ಮಂತ್ರದ ಹೆಸರಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಮದುವೆಯಾದ ಪಾಪಿ!

ಚಿತ್ರದುರ್ಗ : ಅಪ್ರಾಪ್ತ ಬಾಲಕಿಯನ್ನು ವಿವಸ್ತ್ರಗೊಳಿಸಿ, ಬೆದರಿಸಿ, ವಿವಾಹವಾದ ಕುರಿತು ಕೂಡ ಚೆಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.