ಜೈಪುರ : ಅಪ್ರಾಪ್ತ ಬಾಲಕಿಯರನ್ನು ದೇಹ ವ್ಯಾಪಾರಕ್ಕೆಂದು ಕರೆ ತಂದಿದ್ದ ತಂಡದ ಮೇಲೆ ಪೊಲೀಸರು ದಾಳಿ ನಡೆಸಿದ್ದು, 21 ಅಪ್ರಾಪ್ತೆಯರನ್ನು ರಕ್ಷಿಸಿದ್ದಾರೆ.
ಈ ಘಟನೆ ದೋಲ್ಪುರ ಜಿಲ್ಲೆಯ ಧೀಮರಿ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ಜಿಲ್ಲಾ ವರಿಷ್ಠಾಧಿಕಾರಿ ಅವರು ಮಹಿಳಾ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಕುರಿತು ಮಹಿಳಾ ಸಿಬ್ಬಂದಿ ಮಾರುವೇಷದಲ್ಲಿ ಗ್ರಾಮದ ಜನರೊಂದಿಗೆ ಮಾತನಾಡಿ ಹಲವು ಮಾಹಿತಿ ಪಡೆದುಕೊಳ್ಳುತ್ತಿರುವಾಗ ಈ ವಿಷಯ ಬಹಿರಂಗವಾಗಿತ್ತು. ಕೂಡಲೇ ಎಚ್ಚೆತ್ತುಕೊಂಡ ಎಸ್ಪಿ ಕೇಸರ್ ಸಿಂಗ್ ಅವರು ದಾಳಿ ನಡೆಸಿದ್ದರು.
ದಾಳಿಯಲ್ಲಿ 21 ಅಪ್ರಾಪ್ತೆಯರನ್ನು ರಕ್ಷಿಸಿದ್ದಾರೆ. ಎಲ್ಲರನ್ನು ರಿಮ್ಯಾಂಡ್ ಹೋಮ್ ನಲ್ಲಿ ಇರಿಸಲಾಗಿದ್ದು, ಸೋಮವಾರ ಬಾಲಕಿಯರನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಕೇಸರ್ ಸಿಂಗ್ ಹೇಳಿದ್ದಾರೆ.