ದುಬೈ : ಚೆನ್ನೈ ತಂಡಕ್ಕೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಪ್ಲೇ ಆಫ್‌ ಗೆ ಪ್ರವೇಶಿಸಲು ಈ ಪಂದ್ಯವೇ ಚೆನ್ನೈಗೆ ನಿರ್ಣಾಯಕ. ಈ ಪಂದ್ಯದಲ್ಲಿ ದೊಡ್ಡ ಅಂತರದಿಂದ ಗೆದ್ದರಷ್ಟೇ ಚೆನ್ನೈನ ಪ್ಲೇ ಆಫ್ ಕನಸು ಜೀವಂತವಾಗಿ ಉಳಿಯಲಿದೆ.

ಇಂದು ನಡೆಯಲಿರುವ ಪಂದ್ಯದಲ್ಲಿ ಬೆಂಗಳೂರು ತಂಡ ಚೆನ್ನೈ ಎದುರಿಸಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸದ್ಯ ಅಂಕ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ತಾನು ಆಡಿದ 10 ಪಂದ್ಯಗಳಲ್ಲಿ 7 ಪಂದ್ಯಗಳನ್ನು ಗೆದ್ದು ಬೀಗಿದೆ.  ಆದರೆ, ಚೆನ್ನೈ ತಂಡ ಮಾತ್ರ ಕೊನೆಯ ಸ್ಥಾನದಲ್ಲಿದೆ. ತಾನು ಆಡಿದ 11 ಪಂದ್ಯಗಳಲ್ಲಿ 3 ಪಂದ್ಯ ಗೆದ್ದು ಹೀನಾಯ ಸ್ಥಿತಿಯಲ್ಲಿದೆ. 

ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗಗಳೆರಡರಲ್ಲಿಯೂ ಹಿನ್ನಡೆ ಅನುಭವಿಸುತ್ತಿರುವ ಚೆನ್ನೈ ಇಂದು ಟಾಸ್ ಗೆದ್ದರೆ ಫೀಲ್ಡಿಂಗ್ ಆಯ್ದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಇಂದು ನಡೆಯುತ್ತಿರುವ ಈ ಪಿಚ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡಕ್ಕೂ ನೆರವಾಗಬಲ್ಲದು. ಈ ಮೈದಾನದಲ್ಲಿ 160 ರನ್ ಗಳಿಸಿದರೂ ಗೆಲ್ಲುವ ಸಾಧ್ಯತೆ ದಟ್ಟ ಎನ್ನಬಹುದು. 

ಇಂದು ಚೆನ್ನೈ ತಂಡದಲ್ಲಿ ರುತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಅಂಬಾಟಿ ರಾಯುಡು, ಎನ್.ಜಗದೀಸನ್, ಎಂ.ಎಸ್.ಧೋನಿ (ಸಿ & ಡಬ್ಲ್ಯೂಕೆ), ರವೀಂದ್ರ ಜಡೇಜಾ, ಸ್ಯಾಮ್ ಕರನ್, ದೀಪಕ್ ಚಹರ್, ಶಾರ್ದೂಲ್ ಠಾಕೂರ್ / ಕೆಎಂ ಆಸಿಫ್, ಇಮ್ರಾನ್ ತಾಹಿರ್, ಜೋಶ್ ಹ್ಯಾಝಲ್ವುಡ್ / ಲುಂಗಿ ಎನ್‌ಗಿಡಿ / ಮಿಚೆಲ್ ಸ್ಯಾಂಟ್ನರ್ ಆಡುವ ಸಾಧ್ಯತೆ ಇದೆ.

ಅಲ್ಲದೇ, ಬೆಂಗಳೂರು ತಂಡದಲ್ಲಿ ಆ್ಯರನ್ ಫಿಂಚ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ (ಸಿ), ಎಬಿ ಡಿವಿಲಿಯರ್ಸ್ (ವಿಕೆ), ಗುರ್ಕೀರತ್ ಸಿಂಗ್ ಮಾನ್, ಕ್ರಿಸ್ ಮೋರಿಸ್, ವಾಷಿಂಗ್ಟನ್ ಸುಂದರ್, ಇಸುರು ಉದಾನ, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್ ಆಡುವ ಸಾಧ್ಯತೆ ಇದೆ. 

Leave a Reply

Your email address will not be published. Required fields are marked *

You May Also Like

ಆರಂಭಿಕ ಪಂದ್ಯಗಳಲ್ಲಿ ಕೊಹ್ಲಿ ವಿಫಲವಾಗಿದ್ದೇಕೆ?

ದುಬೈ : ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಆರಂಭಿಕ ವೈಫಲ್ಯ ಅನುಭವಿಸಿರುವ ಹಿಂದಿನ ಕಾರಣವನ್ನು ಕಿಂಗ್ ಕೊಹ್ಲಿ ಬಿಚ್ಚಿಟ್ಟಿದ್ದಾರೆ.

ಕೋಲ್ಕತ್ತಾ ನೈಟ್ ರೈಡರ್ಸ್ ಗೆ ಸುಲಭ ಮೊತ್ತದ ಗುರಿ ನೀಡಿದ ಹೈದರಾಬಾದ್!

ಶಾರ್ಜಾ : ಮನೀಶ್ ಪಾಂಡೆ ಅವರ ಅರ್ಧಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಕೋಲ್ಕತಾ…

ನಿಡಗುಂದಿ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ
ಸದೃಢ ಮನಸ್ಸು ವಿಕಸನಕ್ಕೆ ಕ್ರೀಡೆಗಳು ಸಹಕಾರಿ- ಬಿ.ಟಿ.ಗೌಡರ

ಉತ್ತರಪ್ರಭ ಸುದ್ದಿ ನಿಡಗುಂದಿ: ಕ್ರೀಡೆಗಳಿಂದ ಸದೃಢ ದೇಹ,ಮನಸ್ಸು ಹೊಂದಬಹುದು. ಅವು ಶಾರೀರಿಕ ವಿಕಸನಕ್ಕೆ ಪ್ರೇರಕವಾಗಿವೆ ಎಂದು…

ವಿರಾಟ್ ಕೊಹ್ಲಿ ಅನುಷ್ಕಾಗೆ ವಿಚ್ಛೇದನ ಕೊಡಬೇಕು ಎಂದವರಾರು? ಏಕೆ?

ಮುಂಬಯಿ: ಬಾಲಿವುಡ್ ಮತ್ತು ಕ್ರಿಕೆಟ್ ನಂಟು ತೀರಾ ಹಳೆಯದು. ಅದಕ್ಕೆ ಇತ್ತೀಚೆಗೆ ಮತ್ತೊಂದು ಕೊಂಡಿ ಬೆಸೆದವರು…