ಬೆಂಗಳೂರು : ರಾಜ್ಯದಲ್ಲಿ ಇಂದು 4,439 ಜನರು ಸೋಂಕಿಗೆ ಒಳಗಾಗಿದ್ದಾರೆ. ಅಲ್ಲದೇ, ಇಂದು ಆಸ್ಪತ್ರೆಯಿಂದ 10,106 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅಲ್ಲದೇ, ಇಂದು 32 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. 

ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,02,817ಕ್ಕೆ ಏರಿಕೆ ಕಂಡಿದೆ. ಈ ಪೈಕಿ 7,10,843 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 81,050 ಸಕ್ರಿಯ ಪ್ರಕರಣಗಳಿವೆ. ನಿನ್ನೆ ಕೂಡ ರಾಜ್ಯದಲ್ಲಿ 4,471 ಜನರಲ್ಲಿ ಸೋಂಕು ಕಾಣಿಸಿಕೊಂಡಿತ್ತು. 

ಸೋಂಕಿಗೆ ರಾಜ್ಯದಲ್ಲಿ ಇಲ್ಲಿಯವರೆಗೆ 10,905 ಜನ ಸಾವನ್ನಪ್ಪಿದ್ದು, 939 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಇಂದು ಬೆಂಗಳೂರಿನಲ್ಲಿ 2,468, ಬೆಂಗಳೂರು ಗ್ರಾಮಾಂತರ 234, ತುಮಕೂರು 141, ಮೈಸೂರು 140, ದಕ್ಷಿಣ ಕನ್ನಡ 139 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರು ನಗರದಲ್ಲಿ 432, ಬಳ್ಳಾರಿ 61, ಹಾಸನ 44, ಚಾಮರಾಜನಗರದಲ್ಲಿ 38 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಉತ್ತರ ಕರ್ನಾಟಕ ಮಹಾಸಭಾದಿಂದ ಜಾಗೃತಿ ಅಭಿಯಾನ

ಹೋಬಳಿ ವ್ಯಾಪ್ತಿಯ ಶಿಂಗಟರಾಯನಕೇರಿ ತಾಂಡೆ, ಡೋಣಿ ತಾಂಡೆ ಗ್ರಾಮಗಳಲ್ಲಿ ಉತ್ತರ ಕರ್ನಾಟಕ ಮಹಾಸಭಾದಿಂದ ಬಗರ್ ಹುಕುಂ ಸಾಗುವಳಿದಾರರ ಹಕ್ಕಿಗಾಗಿ ಜಾಗೃತಿ ಅಭಿಯಾನ ನಡೆಸಲಾಯಿತು.

ಜೂನ್ 15 ರಿಂದ ಶೈಕ್ಷಣಿಕ ವರ್ಷ ಆರಂಭ

ಬೆಂಗಳೂರು: ಶಾಲೆಗಳಿಗೆ ರಜೆ ಮುಗಿದು ಇನ್ನೇನು ಶಾಲೆಗಳು ಆರಂಭವಾಗುವಷ್ಟರಲ್ಲಿ ಮತ್ತೆ ಸರ್ಕಾರ ಜೂನ್ 14 ರವರೆಗೆ ಬೇಸಿಗೆ ರಜೆ ವಿಸ್ತರಿಸಿದೆ. ಆದರೆ ಜೂನ್ 15 ರಿಂದ 8, 9, 10ನೆ ತರಗತಿಗಳಿಗೆ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಇನ್ನು,ಪ್ರಾಥಮಿಕ ಶಾಲೆಗಳ ಅವಧಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆದೇಶದ ಪ್ರತಿಯಲ್ಲಿ ತಿಳಿಸಲಾಗಿದೆ.