ನವದೆಹಲಿ : ಸೈನಿಕರ ಹೆಸರಿನಲ್ಲಿ ದೀಪ ಹಚ್ಚಿ ಪೂಜೆ ಸಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ ಮನವಿ ಮಾಡಿದ್ದಾರೆ.

ಮನ್ ಕೀ ಬಾತ್ ನಲ್ಲಿ ದೇಶ ಉದ್ಧೇಶಿಸಿ ಮಾತನಾಡಿದ ಅವರು, ಸೈನಿಕರು ಹಾಗೂ ಭದ್ರತಾ ಪಡೆಗಳೊಂದಿಗೆ ಭಾರತವು ಯಾವಾಗಲೂ ಇರುತ್ತದೆ. ನಮ್ಮ ಯೋಧರು ದೇಶಕ್ಕಾಗಿ ತಮ್ಮ ಕುಟುಂಬಗಳನ್ನು ತೊರೆದು ದೇಶ ಸೇವೆ ಮಾಡುತ್ತಿರುತ್ತಾರೆ. ವಿದೇಶಗಳ ಬೆದರಿಕೆಗಳಿಂದ ದೇಶವನ್ನು ಕಾಯುವ ಮೂಲಕ ನಮ್ಮನ್ನು ರಕ್ಷಿಸುತ್ತಿದ್ದಾರೆ. ಹೀಗಾಗಿ ಅವರನ್ನು ನೆನೆದು ದೀಪ ಹಚ್ಚಿ ಬೆಳಗಿಸಿ ಎಂದು ಕರೆ ನೀಡಿದ್ದಾರೆ. 

ಈ ಸಂದರ್ಭದಲ್ಲಿ ಈದ್ ಹಾಗೂ ದೀಪಾವಳಿ ಸೇರಿದಂತೆ ಹಲವು ಹಬ್ಬಗಳು ಬರುತ್ತವೆ. ಇಂತಹ ಸಂದರ್ಭದಲ್ಲಿ ಹಬ್ಬದ ಹಂಗಿಲ್ಲದೆ ನಮ್ಮನ್ನು ರಕ್ಷಿಸುತ್ತಿರುವವರನ್ನು ನೆನೆಯುವುದು ಅನಿವಾರ್ಯವಾಗಿದೆ ಎಂದು ಮನವಿ ಮಾಡಿದ್ದಾರೆ. 

ಸಿಕ್ಕಿಂ ಹಾಗೂ ಅರುಣಾಚಲ ಪ್ರದೇಶ ಸೇರಿದಂತೆ ಚೀನಾದ ಸುಮಾರು 3,500 ಕಿ.ಮೀ ಉದ್ದದ ಗಡಿಯಲ್ಲಿ ಸೈನ್ಯ ಹಾಗೂ ಶಸ್ತ್ರಾಸ್ತ್ರಗಳನ್ನು ಗಮನಾರ್ಹ ರೀತಿಯಲ್ಲಿ ಬಲಪಡಿಸಲಾಗಿದೆ. ಲಡಾಖ್ನದಲ್ಲಿ ಉದ್ವಿಗ್ನತೆ ತಲೆದೋರಿದೆ. ಹಲವು ರೀತಿಯಲ್ಲಿ ಮಾತುಕತೆಗಳು ನಡೆದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಪ್ರತಿಯೊಬ್ಬರೂ ಸಂಯಮದಿಂದಲೇ ಹಬ್ಬ ಆಚರಿಸಬೇಕು. ವಸ್ತುಗಳನ್ನು ಕೊಳ್ಳುವಾಗ ದೇಶೀಯ ವಸ್ತುಗಳ ಬಗ್ಗೆ ಗಮನ ಹರಿಸಿ, ಸ್ಥಳೀಯ ವ್ಯಾಪಾರಿಗಳೊಂದಿಗೆ ವ್ಯವಹಾರ ಮಾಡುವುದನ್ನು ರೂಢಿ ಮಾಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. 

Leave a Reply

Your email address will not be published. Required fields are marked *

You May Also Like

ಉಪ ಚುನಾವಣೆ – ಹಲವೆಡೆ ಮುನ್ನಡೆ ಸಾಧಿಸುತ್ತಿರುವ ಬಿಜೆಪಿ!

ನವದೆಹಲಿ : ರಾಜರಾಜೇಶ್ವರಿ ನಗರ, ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಇನ್ನೇನು ಊರು ತಲುಪಬಹುದು ಎನ್ನುವಷ್ಟರಲ್ಲಿಯೇ 200 ಕಿ.ಮೀ ನಡೆದ ಮಹಿಳೆ ಸಾವು!

ಲಾಕ್ ಡೌನ್ ನಿಂದಾಗಿ ಹಲವರು ಊರು ತಲುಪಲು ಇನ್ನೂ ಹೆಣಗಾಡುತ್ತಿದ್ದಾರೆ. ಹೀಗೆ ಊರು ತಲುಪಲು ಕಾಲ್ನಡಿಗೆಯಲ್ಲಿಯೇ ತೆರಳಿದ್ದ ಮಹಿಳೆಯೊಬ್ಬರು ಬರೋಬ್ಬರಿ 200 ಕಿ.ಮೀ ನಡೆದು ಸಾವನ್ನಪ್ಪಿದ್ದಾರೆ.

ದೇಶದಲ್ಲಿ 59 ಲಕ್ಷದ ಗಡಿ ದಾಟಿದ ಮಹಾಮಾರಿ!

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 85,362 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ ದೇಶದಲ್ಲಿ 59 ಲಕ್ಷದ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ತನ್ನ ದಾಖಲೆ ತಾನೇ ಮುರಿದು ಆತಂಕ ಸೃಷ್ಟಿಸುತ್ತಿರುವ ಮಹಾಮಾರಿ

ಬೆಂಗಳೂರು : ದೇಶದಲ್ಲಿ ಕೊರೊನಾ ದಿನದಿಂದ ದಿನಕ್ಕೆ ತನ್ನ ದಾಖಲೆಯನ್ನೇ ಮುರಿದು ಸಾಗುತ್ತಿದೆ. ನಿನ್ನೆ ಒಂದೇ…