ಅಬುಧಾಬಿ: ಭಾನುವಾರ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ತಂಡಕ್ಕೆ ಚೇತರಿಕೆ ನೀಡುವುದರ ಮೂಲಕ ಭರ್ಜರಿ ಆಟ ಪ್ರದರ್ಶಿಸಿದ್ದಾರೆ.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಮುಂಬಯಿ ಇಂಡಿಯನ್ಸ್ ತಂಡ ಆರಂಭದಲ್ಲಿ ಆಘಾತ ಅನುಭವಿಸಿತ್ತು. ಹಾರ್ದಿಕ್ ಪಾಂಡ್ಯ ಅವರ ಅಬ್ಬರದ ಬ್ಯಾಟಿಂಗ್‍ ನಿಂದ ಮುಂಬಯಿ 195 ರನ್ ಗಳಿಸಿದೆ. 

ಹಾರ್ದಿಕ್ ಪಾಂಡ್ಯ ಅವರು ಕೇವಲ 21 ಬೌಲ್ ಗೆ ಏಳು ಸಿಕ್ಸರ್ ಮತ್ತು ಎರಡು ಬೌಂಡರಿ ಸೇರಿದಂತೆ 60 ರನ್ ಸಿಡಿಸಿದ್ದಾರೆ. ಮೊದಲು ತಾಳ್ಮೆಯಿಂದ ಆಟವಾಡಿದ್ದ ಪಾಂಡ್ಯ ಆ ನಂತರ ಸಿಡಿದೆದ್ದಿದ್ದಾರೆ. ಪಾಂಡೆ ಮೊದಲ 9 ಬೌಲ್ ನಲ್ಲಿ ಕೇವಲ ಎಂಟು ರನ್ ಸಿಡಿಸಿದ್ದರು. ಆ ನಂತರ ಅವರ ಬ್ಯಾಟಿಂಗ್ ಮುಂದೆ ರಾಜಸ್ಥಾನ್ ಪರದಾಡಿತು. 

ಪಾಂಡ್ಯ ಕೊನೆಯ 12 ಬೌಲ್ ನಲ್ಲಿ ಭರ್ಜರಿ 52 ರನ್ ಸಿಡಿಸಿದರು. ಕೊನೆಯ ನಾಲ್ಕು ಓವರ್ ನಲ್ಲಿ ಭರ್ಜರಿಯಾಗಿ ಆಡಿದ ಪಾಂಡ್ಯ ತಂಡದ ಮೊತ್ತ ಏರಿಸಿದರು. 17ನೇ ಓವರ್ ನಲ್ಲಿ 17 ರನ್, 18ನೇ ಓವರ್ ನಲ್ಲಿ 27 ರನ್, 19ನೇ ಓವರ್ ಕೇವಲ ಮೂರು ರನ್, 20ನೇ ಓವರ್ ನಲ್ಲಿ 27 ರನ್ ಸಿಡಿಸಿದ್ದಾರೆ. ಕೊನೆಯ ನಾಲ್ಕು ಓವರ್ ನ 24 ಬೌಲ್ ನಲ್ಲಿ 74 ರನ್ ಸಿಡಿಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ಗೇಮ್ಸ್ – ಗ್ರೌಂಡ್ ನಾಲೆಡ್ಜ್ ಮಕ್ಕಳಿಗೆ ಕೊಡಿ- ಎಂ.ವಿ.ಹಿರೇಮಠ

ಉತ್ತರಪ್ರಭ ಸುದ್ದಿ ಬಸವನ ಬಾಗೇವಾಡಿ: ಇಂದಿನ ಸ್ಪಧಾ೯ತ್ಮಕ ಯುಗದ ಆಟೋಟಗಳ್ಲಿ ಶಾಲಾ ಮಕ್ಕಳನ್ನು ಸಕ್ರಿಯವಾಗಿ ಭಾಗವಹಿಸುವಂತೆ…

ಫೆ. 12 ರಂದು ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿ

ಮುಳಗುಂದ ಸಮೀಪದ ಹೊಸೂರ ಗ್ರಾಮದಲ್ಲಿ ಶ್ರೀ ಮಾರುತೇಶ್ವರ ಯಂಗ್ ಸ್ಟಾರ್ ವತಿಯಿಂದ ಪ್ರಥಮ ಬಾರಿಗೆ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿಗಳನ್ನ ಇದೇ ಫೆ. 12 ರಂದು ಮಹಾಂತೇಶಗೌಡ ಗೌಡರ ಅವರ ಹೊಲದಲ್ಲಿ ಸಿದ್ದಗೊಳಿಸಿದ ಮೈದಾನದಲ್ಲಿ ಏರ್ಪಡಿಸಲಾಗಿದೆ. ಎಂದು ಸಮಿತಿ ಸದಸ್ಯ ಬಸವರಾಜ ಬಂಡಿವಡ್ಡರ ತಿಳಿಸಿದರು.

ಅಗಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಚಟುವಟಿಕೆ ಉದ್ಘಾಟನೆ

ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಪಟ್ಟಣದ ಶ್ರೀಮತಿ ಕಮಲಾ ಮತ್ತು ವೆಂಕಪ್ಪ ಎಂ ಅಗಡಿ ಇಂಜಿನಿಯರಿಂಗ್ ಕಾಲೇಜಿನ…

ಗದಗ ಶಟಲ್ ಬ್ಯಾಡ್ಮಿಂಟನ್ ಡಬಲ್ಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮುತ್ತುರಾಜ್ ಶಿರಹಟ್ಟಿ ಹಾಗೂ ಮಹಮ್ಮದ್ ಹುಜೇರ್

ಉತ್ತರಪ್ರಭಗದಗ: ಇಂದು ಜಿಲ್ಲೆಯಾದ್ಯಂತ ಶಟಲ ಬ್ಯಾಡ್ಮಿಂಟನ್ ಸ್ಪರ್ಧೆಯು ಕೆ.ಎಚ್.ಪಾಟೀಲ್ ಒಳಾಂಗಣ ಸ್ಟೇಡಿಯಂನಲ್ಲಿ ಏರ್ಪಡಿಸಲಾಗಿತ್ತು ಶಟಲ್ ಬ್ಯಾಡ್ಮಿಂಟನ…