ಅಬುಧಾಬಿ: ಭಾನುವಾರ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ತಂಡಕ್ಕೆ ಚೇತರಿಕೆ ನೀಡುವುದರ ಮೂಲಕ ಭರ್ಜರಿ ಆಟ ಪ್ರದರ್ಶಿಸಿದ್ದಾರೆ.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಮುಂಬಯಿ ಇಂಡಿಯನ್ಸ್ ತಂಡ ಆರಂಭದಲ್ಲಿ ಆಘಾತ ಅನುಭವಿಸಿತ್ತು. ಹಾರ್ದಿಕ್ ಪಾಂಡ್ಯ ಅವರ ಅಬ್ಬರದ ಬ್ಯಾಟಿಂಗ್‍ ನಿಂದ ಮುಂಬಯಿ 195 ರನ್ ಗಳಿಸಿದೆ. 

ಹಾರ್ದಿಕ್ ಪಾಂಡ್ಯ ಅವರು ಕೇವಲ 21 ಬೌಲ್ ಗೆ ಏಳು ಸಿಕ್ಸರ್ ಮತ್ತು ಎರಡು ಬೌಂಡರಿ ಸೇರಿದಂತೆ 60 ರನ್ ಸಿಡಿಸಿದ್ದಾರೆ. ಮೊದಲು ತಾಳ್ಮೆಯಿಂದ ಆಟವಾಡಿದ್ದ ಪಾಂಡ್ಯ ಆ ನಂತರ ಸಿಡಿದೆದ್ದಿದ್ದಾರೆ. ಪಾಂಡೆ ಮೊದಲ 9 ಬೌಲ್ ನಲ್ಲಿ ಕೇವಲ ಎಂಟು ರನ್ ಸಿಡಿಸಿದ್ದರು. ಆ ನಂತರ ಅವರ ಬ್ಯಾಟಿಂಗ್ ಮುಂದೆ ರಾಜಸ್ಥಾನ್ ಪರದಾಡಿತು. 

ಪಾಂಡ್ಯ ಕೊನೆಯ 12 ಬೌಲ್ ನಲ್ಲಿ ಭರ್ಜರಿ 52 ರನ್ ಸಿಡಿಸಿದರು. ಕೊನೆಯ ನಾಲ್ಕು ಓವರ್ ನಲ್ಲಿ ಭರ್ಜರಿಯಾಗಿ ಆಡಿದ ಪಾಂಡ್ಯ ತಂಡದ ಮೊತ್ತ ಏರಿಸಿದರು. 17ನೇ ಓವರ್ ನಲ್ಲಿ 17 ರನ್, 18ನೇ ಓವರ್ ನಲ್ಲಿ 27 ರನ್, 19ನೇ ಓವರ್ ಕೇವಲ ಮೂರು ರನ್, 20ನೇ ಓವರ್ ನಲ್ಲಿ 27 ರನ್ ಸಿಡಿಸಿದ್ದಾರೆ. ಕೊನೆಯ ನಾಲ್ಕು ಓವರ್ ನ 24 ಬೌಲ್ ನಲ್ಲಿ 74 ರನ್ ಸಿಡಿಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ಕ್ರೀಡೆಗಳಿಂದ ಆರೋಗ್ಯಕರ ಭಾವನೆ

ಉತ್ತರಪ್ರಭ ಸುದ್ದಿನಿಡಗುಂದಿ: ಹಲ ಬಗೆಯ ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವದರಿಂದ ನಮ್ಮ ಆರೋಗ್ಯ ರಕ್ಷಣೆ ಮಾಡಲು ಸಾಧ್ಯ…

ಅಸಾಧ್ಯ ಎಂಬುವುದು ಯಾವುದೂ ಇಲ್ಲ..! ಪಂಜಾಬ್ – ರಾಜಸ್ಥಾನ್ ಮ್ಯಾಚ್ ನೋಡಿದವರಿಗೆ ಹೀಗೆ ಅನಿಸಲೇಬೇಕು!

ಕ್ರಿಕೆಟ್ ಅಂಗಳದಲ್ಲಿ ಯಾವುದೂ ಅಸಾಧ್ಯವಲ್ಲ ಎಂಬುವುದಕ್ಕೆ ಸಾಕಷ್ಟು ಉದಾಹರಣೆಗಳು ಸಿಕ್ಕಿವೆ. ಈ ಹಿಂದೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿ ಸಂದರ್ಭದಲ್ಲಿ 400ಕ್ಕೂ ಅಧಿಕ ರನ್ ಟಾರ್ಗೆಟ್ ನೀಡಿದ್ದ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ದಕ್ಷಿಣ ಆಫ್ರಿಕಾ ಗೆದ್ದಂತೆ ಇಲ್ಲಿ ಪಂಜಾಬ್ ನ್ನು ಮಣಿಸಿ ರಾಜಸ್ಥಾನ್ ಗೆದ್ದು ಬೀಗಿದೆ.

ಚಿಕ್ಕ ವಯಸ್ಸಿನಲ್ಲಿಯೇ ಐಪಿಎಲ್ ನಲ್ಲಿ ಅಬ್ಬರಿಸಿದ ವೀರರು ಇವರು!

ದುಬೈ : ಐಪಿಎಲ್ ನ 6ನೇ ಪಂದ್ಯದ ಸಮಯದಲ್ಲಿ ಭಾರತದ ಯುವ ಆಟಗಾರ ಪೃಥ್ವಿ ಶಾ…

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಚೆನ್ನೈ ಪುಟಿದೇಳುವುದೇ?

ದುಬೈ : ಚೆನ್ನೈ ತಂಡಕ್ಕೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಪ್ಲೇ ಆಫ್‌ ಗೆ ಪ್ರವೇಶಿಸಲು ಈ ಪಂದ್ಯವೇ ಚೆನ್ನೈಗೆ ನಿರ್ಣಾಯಕ. ಈ ಪಂದ್ಯದಲ್ಲಿ ದೊಡ್ಡ ಅಂತರದಿಂದ ಗೆದ್ದರಷ್ಟೇ ಚೆನ್ನೈನ ಪ್ಲೇ ಆಫ್ ಕನಸು ಜೀವಂತವಾಗಿ ಉಳಿಯಲಿದೆ.