ಅಬುಧಾಬಿ: ಭಾನುವಾರ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ತಂಡಕ್ಕೆ ಚೇತರಿಕೆ ನೀಡುವುದರ ಮೂಲಕ ಭರ್ಜರಿ ಆಟ ಪ್ರದರ್ಶಿಸಿದ್ದಾರೆ.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಮುಂಬಯಿ ಇಂಡಿಯನ್ಸ್ ತಂಡ ಆರಂಭದಲ್ಲಿ ಆಘಾತ ಅನುಭವಿಸಿತ್ತು. ಹಾರ್ದಿಕ್ ಪಾಂಡ್ಯ ಅವರ ಅಬ್ಬರದ ಬ್ಯಾಟಿಂಗ್‍ ನಿಂದ ಮುಂಬಯಿ 195 ರನ್ ಗಳಿಸಿದೆ. 

ಹಾರ್ದಿಕ್ ಪಾಂಡ್ಯ ಅವರು ಕೇವಲ 21 ಬೌಲ್ ಗೆ ಏಳು ಸಿಕ್ಸರ್ ಮತ್ತು ಎರಡು ಬೌಂಡರಿ ಸೇರಿದಂತೆ 60 ರನ್ ಸಿಡಿಸಿದ್ದಾರೆ. ಮೊದಲು ತಾಳ್ಮೆಯಿಂದ ಆಟವಾಡಿದ್ದ ಪಾಂಡ್ಯ ಆ ನಂತರ ಸಿಡಿದೆದ್ದಿದ್ದಾರೆ. ಪಾಂಡೆ ಮೊದಲ 9 ಬೌಲ್ ನಲ್ಲಿ ಕೇವಲ ಎಂಟು ರನ್ ಸಿಡಿಸಿದ್ದರು. ಆ ನಂತರ ಅವರ ಬ್ಯಾಟಿಂಗ್ ಮುಂದೆ ರಾಜಸ್ಥಾನ್ ಪರದಾಡಿತು. 

ಪಾಂಡ್ಯ ಕೊನೆಯ 12 ಬೌಲ್ ನಲ್ಲಿ ಭರ್ಜರಿ 52 ರನ್ ಸಿಡಿಸಿದರು. ಕೊನೆಯ ನಾಲ್ಕು ಓವರ್ ನಲ್ಲಿ ಭರ್ಜರಿಯಾಗಿ ಆಡಿದ ಪಾಂಡ್ಯ ತಂಡದ ಮೊತ್ತ ಏರಿಸಿದರು. 17ನೇ ಓವರ್ ನಲ್ಲಿ 17 ರನ್, 18ನೇ ಓವರ್ ನಲ್ಲಿ 27 ರನ್, 19ನೇ ಓವರ್ ಕೇವಲ ಮೂರು ರನ್, 20ನೇ ಓವರ್ ನಲ್ಲಿ 27 ರನ್ ಸಿಡಿಸಿದ್ದಾರೆ. ಕೊನೆಯ ನಾಲ್ಕು ಓವರ್ ನ 24 ಬೌಲ್ ನಲ್ಲಿ 74 ರನ್ ಸಿಡಿಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ಭರ್ಜರಿ ಫಾರ್ಮ್ ಗೆ ಮರಳಿದ ತಂಡದ ಸ್ಟಾರ್ ಆಟಗಾರರಿಗೆ ಗಿಫ್ಟ್ ನೀಡಿದ ಪ್ರೀತಿ ಜಿಂಟಾ!

ದುಬೈ : ಪ್ರಾರಂಭದಲ್ಲಿ ಸೋಲಿನಿಂದ ಕಂಗೆಟ್ಟಿದ್ದ ಪಂಜಾಬ್ ತಂಡ ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಭರ್ಜರಿ ಫಾರ್ಮ್ ಗೆ ಮರಳಿದೆ. ಅಲ್ಲದೇ, ಕಳೆದ ಮೂರು ಪಂದ್ಯಗಳನ್ನು ಗೆದ್ದು ಬೀಗಿದೆ. ಹೀಗಾಗಿ ತಂಡದ ಮಾಲಕರಾದ ಪ್ರೀತಿ ಜಿಂಟಾ ಅವರು ತಂಡದ ನಾಯಕ ಹಾಗೂ ಗೇಲ್ ಗೆ ಉಡುಗೊರೆ ನೀಡಿದ್ದಾರೆ.

ಗೆಲ್ಲಲು ಒಂದು ರನ್ ಬೇಕಿದ್ದರೂ ಕೊಹ್ಲಿ ಓಡಿದ್ದು ಎರಡು ರನ್…ಏಕೆ?

ಅಬುಧಾಬಿ : ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ಆರ್‌ ಸಿಬಿ ನಾಯಕ ವಿರಾಟ್‌ ಕೊಹ್ಲಿ ಅವರು ಗೆಲ್ಲಲು ಒಂದು ರನ್ ಬೇಕಿದ್ದರೂ 2 ರನ್ ಗಳನ್ನು ಓಡಿದ್ದಕ್ಕೆ ಜನರು ಬೇರೆ ಬೇರೆ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಐಪಿಎಲ್ ನಲ್ಲಿ ಮತ್ತೊಂದು ದಾಖಲೆಗೆ ಸಾಕ್ಷಿಯಾದ ಕನ್ನಡಿಗ!

ದುಬೈ : ಕಿಂಗ್ಸ್ ಇಲೆವೆನ್ ಪಂಜಾಬ್‌ ತಂಡದ ನಾಯಕ ಕೆ.ಎಲ್‌. ರಾಹುಲ್‌ ಅವರು ಭಾರತದ ಪರ ಮತ್ತೊಂದು ದಾಖಲೆ ಬರೆದಿದ್ದಾರೆ.

ಫೆ. 12 ರಂದು ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿ

ಮುಳಗುಂದ ಸಮೀಪದ ಹೊಸೂರ ಗ್ರಾಮದಲ್ಲಿ ಶ್ರೀ ಮಾರುತೇಶ್ವರ ಯಂಗ್ ಸ್ಟಾರ್ ವತಿಯಿಂದ ಪ್ರಥಮ ಬಾರಿಗೆ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿಗಳನ್ನ ಇದೇ ಫೆ. 12 ರಂದು ಮಹಾಂತೇಶಗೌಡ ಗೌಡರ ಅವರ ಹೊಲದಲ್ಲಿ ಸಿದ್ದಗೊಳಿಸಿದ ಮೈದಾನದಲ್ಲಿ ಏರ್ಪಡಿಸಲಾಗಿದೆ. ಎಂದು ಸಮಿತಿ ಸದಸ್ಯ ಬಸವರಾಜ ಬಂಡಿವಡ್ಡರ ತಿಳಿಸಿದರು.