ದುಬೈ : ಪಂಜಾಬ್ ವಿರುದ್ಧ ಸುಲಭವಾಗಿ ಗೆಲ್ಲಬೇಕಾದ ಪಂದ್ಯವನ್ನು ಹೈದ್ರಾಬಾದ್ ಕೈ ಚೆಲ್ಲಿದೆ. ಹೀಗಾಗಿ ಟೀಕೆಗಳು ವ್ಯಕ್ತವಾಗುತ್ತಿವೆ.

ಹೈದರಾಬಾದ್ ತಂಡವು ಪಂಜಾಬ್ ವಿರುದ್ಧ 12 ರನ್‌ ಗಳ ಸೋಲನುಭವಿಸಿ ಮುಖಭಂಗ ಅನುಭವಿಸಿದೆ. ಹೀಗಾಗಿ ಈ ಕುರಿತು ಮಾತನಾಡಿದ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್, ಈ ಸೋಲು ನಮಗೆ ತುಂಬಾ ನೋವುಂಟು ಮಾಡಿದೆ.  ಈ ಪಂದ್ಯವನ್ನು ಸುಲಭವಾಗಿ ಗೆಲ್ಲಬಹುದು ಎಂದು ಅಂದುಕೊಂಡಿದ್ದೇವು. ಆದರೆ, ಕೈ ಚೆಲ್ಲಿದೇವು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಿನ್ನೆ ನಡೆದ ಪಂದ್ಯದಲ್ಲಿ ಪಂಜಾಬ್ ತಂಡ, 20 ಓವರ್‌ ಗಳಲ್ಲಿ 7 ವಿಕೆಟ್ ಕಳೆದುಕೊಂಡು ಕೇವಲ 7 ವಿಕೆಟ್ ಕಳೆದುಕೊಂಡು 126 ರನ್ ಗಳಿಸಿತ್ತು. ಆದರೆ, ಈ ಸುಲಭದ ಮೊತ್ತ ಬೆನ್ನಟ್ಟಿದ ಹೈದರಾಬಾದ್, ಡೇವಿಡ್ ವಾರ್ನರ್ 35, ಜಾನಿ ಬೇರ್ಸ್ಟೋವ್ 19, ಮಿನೀಶ್ ಪಾಂಡೆ 15, ವಿಜಯ್ ಶಂಕರ್ 26 ರನ್‌ ನೊಂದಿಗೆ 19.5 ಓವರ್‌ ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು ಕೇವಲ 114 ರನ್ ಗಳಿಸಲು ಮಾತ್ರ ಯಶಸ್ವಿಯಾಯಿತು. 

ಉತ್ತಮ ಬೌಲಿಂಗ್ ದಾಳಿ ಮಾಡಿದ ಮೊಹಮ್ಮದ್ ಶಮಿ 1, ಅರ್ಷ್‌ದೀಪ್ ಸಿಂಗ್ 23ಕ್ಕೆ 3, ಮುರುಗನ್ ಅಶ್ವಿನ್ 1, ರವಿ ಬಿಷ್ಣೋಯ್ 1, ಕ್ರಿಸ್ ಜೋರ್ಡನ್ 13ಕ್ಕೆ 3 ವಿಕೆಟ್ ನ ಮಾರಕ ಬೌಲಿಂಗ್ ಗೆ ಹೈದರಾಬಾದ್ ಸೋಲೋಪ್ಪಿಕೊಂಡಿತು. 

Leave a Reply

Your email address will not be published. Required fields are marked *

You May Also Like

ಧೋನಿಗಿಂದು ಜನ್ಮದಿನ: ವಯಸ್ಸು ನಲವತ್ತು, ಹಂಗೇ ಇದೆ ಗೆಲ್ಲುವ ತಾಕತ್ತು

ನವದೆಹಲಿ: ಮ್ಯಾಚ್ ವಿನ್ನರ್ ಮಹೇಂದ್ರ ಸಿಂಗ್ ಧೋನಿ ಇಂದು ತಮ್ಮ 40ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.…

ಗವಾಸ್ಕರ್ ವಿರುದ್ಧ ಕೊಹ್ಲಿ ಹೆಂಡತಿಯ ಆಕ್ರೋಶ!

ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಮಾಜಿ ಕ್ರಿಕೆಟರ್ ಸುನಿಲ್ ಗವಾಸ್ಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಐಪಿಎಲ್ ನಲ್ಲಿ ಕೊಹ್ಲಿ, ಎಬಿಡಿಯನ್ನು ಕೈ ಬಿಡಬೇಕು ಎಂದಿರುವ ರಾಹುಲ್!

ಅಬುಧಾಬಿ : ಕೆ.ಎಲ್. ರಾಹುಲ್ ಅವರು ಮುಂದಿನ ಐಪಿಎಲ್ ನಲ್ಲಿ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಹಾಗೂ ಎಬಿಡಿ ವಿಲಿಯರ್ಸ್ ಅವರನ್ನು ಕೈ ಬಿಡಬೇಕು ಎಂದು ಹೇಳಿದ್ದಾರೆ.

ಕ್ರಿಕೆಟ್ ನಲ್ಲಿ ಧೋನಿ ಸ್ಥಾನದಲ್ಲಿ ಧೋನಿ ಮಾತ್ರ ಇದ್ದಾರೆ…ಬೇರೆ ಯಾರೂ ಇಲ್ಲ ಎಂದ ರಾಹುಲ್!

ನಾಲ್ಕು ಬಾರಿ ಚಾಂಪಿಯನ್ ಆಗಿರುವ ಮುಂಬಯಿ ಇಂಡಿಯನ್ಸ್ ತಂಡದ ವಿರುದ್ಧ ಎರಡು ಸೂಪರ್ ಓವರ್ ಆಡಿ ಭರ್ಜರಿಯಾಗಿ ಗೆದ್ದು ಬೀಗಿರುವ ಖುಷಿಯಲ್ಲಿರುವ ಪ್ರೀತಿಯ ಹುಡುಗರು, ಈಗ ಆತ್ಮವಿಶ್ವಾಸದಲ್ಲಿದ್ದಾರೆ.