ವಿಜಯಪುರ: ಪೋಷಕರ ಎದುರೇ ಯುವತಿ ಭೀಮಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಕರುಳು ಹಿಂಡುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಐಶ್ವರ್ಯ ಶ್ರೀಪಾಲ ಕಬ್ಬಿನ(20) ಎಂದು ಗುರುತಿಸಲಾಗಿದೆ. ಮೃತ ಯುವತಿ ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ನಿವಾಸಿಯಾಗಿದ್ದಾರೆ. ಐಶ್ವರ್ಯಾ ತನ್ನ ಕುಟುಂಬಸ್ಥರ ಜೊತೆ ಗಾಣಗಾಪುರ ದತ್ತಾತ್ರೆಯ ದೇವಸ್ಥಾನಕ್ಕೆ ತೆರಳುತ್ತಿದ್ದಳು. ಈ ಸಂದರ್ಭದಲ್ಲಿ ವಿಜಯಪುರದ ಆಲಮೇಲ ಮತ್ತು ಕಲಬುಗಿಯ ಅಫಜಲಪುರ ತಾಲೂಕು ನಡುವೆ ಭೀಮಾನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಬಳಿ ಬರುತ್ತಿದ್ದಂತೆಯೇ ವಾಹನ ನಿಲ್ಲಿಸಿದ್ದಾಳೆ.

ನಾಣ್ಯ ಎಸೆಯುವ ನೆಪದಲ್ಲಿ ನದಿಗೆ ಹಾರಿದ್ದಾಳೆ. ಕಣ್ಣಮುಂದೆಯೇ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಆದರೆ, ಯುವತಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

You May Also Like

ಗಣೇಶ ಸಂಭ್ರಮ- ಸಾಂಸ್ಕೃತಿಕ ಕಲರವ

ಉತ್ತರಪ್ರಭ ಸುದ್ದಿಆಲಮಟ್ಟಿ: ಇಲ್ಲಿನ ವಿವಿಧ ಬಡಾವಣೆಯಲ್ಲಿ ಗಣೇಶ ಉತ್ಸವ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಹಲ ಗಜಾನನ ಯುವಕ…

ಶೀಘ್ರ 16000 ಪೊಲೀಸ್ ಸಿಬ್ಬಂದಿ ನೇಮಕ: ಸಚಿವ ಬೊಮ್ಮಾಯಿ

ರಾಜ್ಯ ಪೊಲೀಸ್‌ ಇಲಾಖೆಗೆ ನೂತನ 16 ಸಾವಿರ ಪೊಲೀಸ್‌ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸ್ವಾಮೀಜಿಯನ್ನು ಮನಸೋ ಇಚ್ಛೆ ಥಳಿಸಿದ ಪೊಲೀಸ್ ಪೇದೆ!

ಸ್ವಾಮೀಜಿಯೊಬ್ಬರಿಗೆ ಪೊಲೀಸ್ ಪೇದೆ ಥಳಿಸಿರುವ ಘಟನೆ ಅಫಜಲ್ ಪುರ ತಾಲೂಕಿನ ಅರ್ಜುಣಗಿ ತಾಂಡಾ ಚೆಕ್ ಪೋಸ್ಟ್ ಬಳಿ ನಡೆದಿದೆ.