ದೇಶದ ಪ್ರತಿಯೊಬ್ಬ ನಾಗರಿಕನಿಗೂ ಉಚಿತ ಕೊರೊನಾ ಲಸಿಕೆ ಎಂದು ಹೇಳಿದ ಬಿಜೆಪಿ!

ನವದೆಹಲಿ: ದೇಶದ ಎಲ್ಲ ಜನರಿಗೂ ಉಚಿತ ಕೊರೊನಾ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಹೇಳಿ ಎಲ್ಲ ಟೀಕೆಗಳಿಗೂ ಸ್ಪಷ್ಟನೆ ನೀಡಿದ್ದಾರೆ.

ಚುನಾವಣೆಯಲ್ಲಿ ಗೆದ್ದರೆ, ಬಿಹಾರದ ಜನರಿಗೆ ಉಚಿತ ಕೊರೊನಾ ಲಸಿಕೆ ನೀಡುವುದಾಗಿ ಕಳೆದ ವಾರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಹೇಳಿದ್ದರು. ಈ ಹೇಳಿಕೆಯಿಂದ ದೇಶದಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದವು.

ಹಲವಾರು ನಾಯಕರು ಹಾಗೂ ರಾಜಕೀಯ ಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಿದ್ದವು.

ದೇಶದಲ್ಲಿ ಒಬ್ಬರಿಗೆ ಲಸಿಕೆ ನೀಡಲು ರೂ. 500 ಖರ್ಚು ಮಾಡಲಾಗುವುದು. ಹೀಗಾಗಿ ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಪ್ರತಾಪ್ ಚಂದ್ರ ಸಾರಂಗಿ ಹೇಳಿದ್ದಾರೆ.

ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲ ಜನರಿಗೆ ಉಚಿತ ಕೊರೊನಾ ಲಸಿಕೆ ನೀಡುವುದಾಗಿ ಘೋಷಿಸಿದ್ದಾರೆ. ಪ್ರತಿ ವ್ಯಕ್ತಿಗೆ ಲಸಿಕೆ ಹಾಕಲು ರೂ. 500 ವ್ಯಯಿಸಲಾಗುವುದು ಎಂದು ಹೇಳಿದ್ದಾರೆ.

Exit mobile version