ಬೆಳಗಾವಿ: ಹಳೆ ವೈಷಮ್ಯ ಹಿನ್ನೆಲೆ ಮಾರಕಾಸ್ತçಗಳಿಂದ ಕೊಚ್ಚಿ ರೌಡಿಯ ಬರ್ಬರ ಹತ್ಯೆ ಮಾಡಿದ ಘಟನೆ ಬೆಳಗಾವಿಯ ಗ್ಯಾಂಗ್ವಾಡಿಯಲ್ಲಿ ತಡರಾತ್ರಿ ನಡೆದಿದೆ.
ನಿನ್ನೆ ರಾತ್ರಿ 11 ಗಂಟೆಗೆ ಶೆಹಬಾಜ್ ಪಠಾಣ್ ಅಲಿಯಾಸ್ ಶೆಹಬಾಜ್ ರೌಡಿ ಬರ್ತ್ ಡೇ ಪಾರ್ಟಿ ಮುಗಿಸಿ ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಶೆಹಬಾಜ್ ಪಠಾಣ್ನ್ನು ಹತ್ಯೆ ಮಾಡಲಾಗಿದೆ.
ಈ ವೇಳೆ ಟಾಟಾ ಸುಮೋ ವಾಹನದಲ್ಲಿ ಬಂದು ಬೈಕ್ಗೆ ಡಿಕ್ಕಿ ಹೋಡೆದು ಬೈಕ್ನಿಂದ ಬಿದ್ದ ಶೆಹಬಾಜ್ನನ್ನು ಬೆನ್ನಟ್ಟಿದ್ದ ದುಷ್ಕರ್ಮಿಗಳು ಹತ್ಯೆ ಗೈದಿದ್ದಾರೆ.
ಈ ವೇಳೆ ನಿವೃತ್ತ ಡಿವೈಎಸ್ಪಿ ಮನೆಗೆ ನುಗ್ಗಿದ್ದ ಶೆಹಬಾಜ್ ಪಠಾಣ್, ನಿವೃತ್ತ ಡಿವೈಎಸ್ಪಿ ಸಮ್ಮುಖದಲ್ಲಿಯೇ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ.
ಕೈಯಲ್ಲಿ ಮಾರಕಾಸ್ತ ಹಿಡಿದು ಬೆನ್ನಟ್ಟುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೋಲಿಸರು ತೀವ್ರ ಶೋಧ ನೆಡೆಸಿದ್ದಾರೆ. ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.