ಹುಬ್ಬಳ್ಳಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಚೀನಾ ವಿಚಾರದಲ್ಲಿ ಹಾಸ್ಯಾಸ್ಪದ ಹೇಳಿಕೆ ನೀಡುತ್ತಿದ್ದಾರೆ. ಹದಿನೈದು ನಿಮಿಷದಲ್ಲಿ ಚೀನಾದ ಸೈನಿಕರನ್ನು ಹೊರಹಾಕುವ ಹೇಳಿಕೆ ನೀಡುತ್ತಾರೆ ಇದು ಹಾಸ್ಯಾಸ್ಪದ ಹೇಳಿಕೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಂಗ್ಯವಾಡಿದರು.

ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅವರ ಪಕ್ಷದ ನಾಯಕರೇ ಅವರ ಹೇಳಿಕೆ ಕೇಳಿ ನಗುತ್ತಾರೆ, ಅಕ್ಸಯ್ ಚೀನಾ ಮೊದಲು ನಮ್ಮ ಬಾರ್ಡರ್ ಆಗಿರಲಿಲ್ಲ, ಕಾಂಗ್ರೆಸ್ ಆಡಳಿತದಲ್ಲಿ ರಾಜೀವ್ ಗಾಂಧಿ ಚೀನಾ ಜೊತೆ ಹಲವು ಒಪ್ಪಂದ ಮಾಡಿಕೊಂಡಿದ್ದರು.

ಕಾಂಗ್ರೆಸ್‌ಗೆ ಸಂವಿಧಾನದ ಮೂಲ ಆಶಯದ ಮೇಲೆ ನಂಬಿಕೆಯಿಲ್ಲ. ಕಾಂಗ್ರೆಸ್ ಸತತವಾಗಿ ಪ್ರಜಾಪ್ರಭುತ್ವದ ಅವಹೇಳನ ಮಾಡುವ ಪ್ರವೃತ್ತಿ ಮುಂದುವರೆಸಿಕೊAಡು ಬಂದಿದೆ. ಸಂಸತ್ ಅಧಿವೇಶನದಲ್ಲಿ ಡೆಪ್ಯೂಟಿ ಸ್ಪೀಕರ್ ಮೇಲೆ ಹಲ್ಲೆಮಾಡಿ ತಡೆಯುವ ಯತ್ನ ನಡೆಯಿತು. ಕಾಂಗ್ರೆಸ್ ದೀರ್ಘ ಕಾಲ ಆಡಳಿತ ನಡೆಸಿದವರು ಯಾವುದೇ ಬದಲಾವಣೆ ತರಲು ಆಗಲಿಲ್ಲ. ಕಾಂಗ್ರೆಸ್‌ಗೆ ಅಧಿಕಾರ ಇಲ್ಲದೆ ಬದುಕುವುದು ಗೊತ್ತಿಲ್ಲ ಎಂದು ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ: ಮೂಲ ಸೌಲಭ್ಯ ಕಲ್ಪಿಸಲು ಒತ್ತಾಯ

ಲಕ್ಷ್ಮೇಶ್ವರ: ಪಟ್ಟಣದ ಕರೇಗೋರಿ ಆಶ್ರಯ ಕಾಲೊನಿಗೆ ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ…

ದಿಂಗಾಲೇಶ್ವರ ಶ್ರೀಗಳ ಹೇಳಿಕೆ: ಅಭಿನವ ಡಾ.ಅನ್ನದಾನ ಮಹಾಸ್ವಾಮಿಗಳ ಮೇಲಿನ ಭಕ್ತರ ಪ್ರೀತಿಗೆ ಬೆಲೆ ಕಟ್ಟಲಾಗದು

ಉಪಕಾರ ಸ್ಮರಣಯೇ ಜನ್ಮದಿನವಾಗಿರುತ್ತದೆ. ಅಭಿನವ ಡಾ.ಅನ್ನದಾನ ಮಹಾಸ್ವಾಮಿಗಳ ಮೇಲಿನ ಭಕ್ತರ ಪ್ರೀತಿಗೆ ಬೆಲೆಯನ್ನು ಕಟ್ಟುವುದು ಅಸಾಧ್ಯವಾದ ಮಾತಾಗಿದೆ ಎಂದು ಬಾಲೇಹೊಸೂರಿನ ದಿಂಗಾಲೇಶ್ವರ ಸ್ವಾಮಿಗಳು ಹೇಳಿದರು.

ಮುಂಡರಗಿ ಜಿಎಚ್ಎಚ್ ಆಗ್ರೋ ಕೇಂದ್ರ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ

ಜಿಎಚ್ಎಚ್ ಆಗ್ರೋ ಕೇಂದ್ರದ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಕೇಂದ್ರ ಜಪ್ತಿ ಮಾಡಿದ ಘಟನೆ ಮುಂಡರಗಿ ಪಟ್ಟಣದಲ್ಲಿ ನಡೆದಿದೆ.

ಜಕ್ಕಲಿಯಲ್ಲಿ ಹೀಗೊಂದು ವಿಶಿಷ್ಟ ಹೋಳಿ ಹುಣ್ಣಿಮೆ ಆಚರಣೆ

ವಸಂತ ಋತುವಿನ ಫಾಲ್ಗುಣ ಮಾಸದ ಶುಕ್ಲ ಪಕ್ಷದ ಹುಣ್ಣುಮೆ ದಿನ ಹೋಳಿ ಹಬ್ಬವನ್ನು ಆಚರಿಸಲಾಗುತ್ತದೆ. ನಮ್ಮ ಹಿಂದೂ ಧರ್ಮದ ಪ್ರಕಾರ ಹೋಳಿ ಒಂದು ಮಹತ್ವಪೂರ್ಣ ಮಹಾಪರ್ವ ಎಂದು ಭಾವಿಸಲಾಗುತ್ತದೆ. ಸಾಂಪ್ರದಾಯಿಕವಾಗಿ ಈ ಹಬ್ಬವನ್ನು ಎರಡು ದಿನಗಳ ಕಾಲ ಆಚರಿಸಲಾಗುತ್ತದೆ. ಮಾ.29 ಸೋಮವಾರ ಹೋಳಿ ಹಬ್ಬವನ್ನು ಹಾಗೂ ಕಾಮ ದಹನವನ್ನು ಮಾ.28 ಆಚರಿಸಲಾಗುತ್ತದೆ.