ಲಕ್ನೋ : ವ್ಯಕ್ತಿಯೊಬ್ಬ ಶಿವನಿಗೆ ತನ್ನೇ ತಲೆಯನ್ನೇ ಅರ್ಪಿಸಿರುವ ವಿಚಿತ್ರ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಈ ಘಟನೆ ಉತ್ತರಪ್ರದೇಶದ ಕುರಾರ ಪ್ರದೇಶದಲ್ಲಿ ನಡೆದಿದೆ. 49 ವರ್ಷದ ರುಕ್ಮಾನಿ ಮಿಶ್ರಾ ಎಂಬ ವ್ಯಕ್ತಿಯೇ ಶಿವನಿಗೆ ತನ್ನ ತಲೆಯನ್ನು ಅರ್ಪಿಸಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಶಿವನಿಗೆ ತನ್ನನ್ನು ತಾನೇ ಅರ್ಪಿಸಿಕೊಳ್ಳುವ ಸಲುವಾಗಿ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ.

ಈ ವ್ಯಕ್ತಿ ಶನಿವಾರ ರಾತ್ರಿ ಕೋಟೇಶ್ವರ ದೇವಸ್ಥಾನಕ್ಕೆ ತೆರಳಿ ಅಲ್ಲಿ ತನ್ನ ಕುತ್ತಿಗೆಯನ್ನು ಚೂರಿಯಿಂದ ಕೊಯ್ದುಕೊಂಡಿದ್ದಾರೆ. ಈ ವೇಳೆ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದ. ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಸದ್ಯ ಈ ವ್ಯಕ್ತಿಯ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಲಡಾಖ್‍ನಲ್ಲಿ ಪ್ರಧಾನಿ ಮೋದಿ ತೆರೆಯಿತೆ ಲಡಾಯಿಯ ಹಾದಿ?

ಜೂನ್ 15ರಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಸಂಘರ್ಷದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸಂಘರ್ಷ ವಲಯಗಳಾದ ಲಡಾಕ್ ಮತ್ತು ಲೇಹ್ ಪ್ರದೇಶಕ್ಕೆ ಇಂದು ಭೇಟಿ ನೀಡಿ, ದೇಶದ ಸೈನಿಕ ಪಡೆಗಳಿಗೆ ನೈತಿಕ ಸ್ಥೈರ್ಯ ತುಂಬಿದರು.

ಶಿಕ್ಷಕರಿಗೆ-ಪಾಲಕರಿಗೆ ದಂಗುಬಡಿಸಿದ ಈ ಪೋರಿ

ಕೋವಿಡ್ ಸೋಮಕಿನಿಂದ ಆನ್ಲೈನ್ ಕ್ಲಾಸ್ಗಳು ಹಾಗೂ ವರ್ಕ್ ಫ್ರಂ ಹೋಂಗೆ ಜನರು ಒಗ್ಗಿ ಹೋಗಿದ್ದಾರೆ. ಆದರೆ, ಇಲ್ಲೊಬ್ಬಳು ಬಾಲಕಿ ಶಿಕ್ಷಕರನ್ನು ಮತ್ತು ಪೋಷಕರನ್ನು ಮೂರ್ಖನ್ನಾಗಿ ಮಾಡಿದ್ದಾಳೆ.

ಶುಭ ಸುದ್ದಿ: ನಿಮ್ಮ ಮಗುವಿಗೆ ‘ಆಧಾರ್’ ಕಾರ್ಡ್ ಪಡೆಯಲು ಇಲ್ಲಿದೆ ಮಾಹಿತಿ

ದೇಶದಲ್ಲಿ ಜನಿಸಿದ ನವಜಾತ ಶಿಶುಗಳಿಗೆ ಆಧಾರ್ ಸೌಲಭ್ಯವನ್ನು ಒದಗಿಸಲಾಗಿದೆ.

ಬುಹದೊಡ್ಡ ಸೈಕಲ್ ತಯಾರಿಕಾ ಘಟಕ ಸ್ಥಗಿತ!

ಪ್ರತಿಷ್ಠಿತ ಸೈಕಲ್ ತಯಾರಿಕಾ ಕಂಪನಿ ವಿಶ್ವ ಬೈಸಿಕಲ್ ದಿನಾಚರಣೆಯ ದಿನದಂದೇ ಸ್ಥಗಿತಗೊಂಡಿದೆ.