ಲಕ್ನೋ : ವ್ಯಕ್ತಿಯೊಬ್ಬ ಶಿವನಿಗೆ ತನ್ನೇ ತಲೆಯನ್ನೇ ಅರ್ಪಿಸಿರುವ ವಿಚಿತ್ರ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಈ ಘಟನೆ ಉತ್ತರಪ್ರದೇಶದ ಕುರಾರ ಪ್ರದೇಶದಲ್ಲಿ ನಡೆದಿದೆ. 49 ವರ್ಷದ ರುಕ್ಮಾನಿ ಮಿಶ್ರಾ ಎಂಬ ವ್ಯಕ್ತಿಯೇ ಶಿವನಿಗೆ ತನ್ನ ತಲೆಯನ್ನು ಅರ್ಪಿಸಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಶಿವನಿಗೆ ತನ್ನನ್ನು ತಾನೇ ಅರ್ಪಿಸಿಕೊಳ್ಳುವ ಸಲುವಾಗಿ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ.

ಈ ವ್ಯಕ್ತಿ ಶನಿವಾರ ರಾತ್ರಿ ಕೋಟೇಶ್ವರ ದೇವಸ್ಥಾನಕ್ಕೆ ತೆರಳಿ ಅಲ್ಲಿ ತನ್ನ ಕುತ್ತಿಗೆಯನ್ನು ಚೂರಿಯಿಂದ ಕೊಯ್ದುಕೊಂಡಿದ್ದಾರೆ. ಈ ವೇಳೆ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದ. ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಸದ್ಯ ಈ ವ್ಯಕ್ತಿಯ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಬಿಹಾರ ಚುನಾವಣೆ – ಪ್ರಣಾಳಿಕೆ ಬಿಡುಗಡೆ ಮಾಡಿದ ಆರ್ ಜೆಡಿ!

ಪಾಟ್ನಾ : ಬಿಹಾರ ಚುನಾವಣೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಜನತಾ ದಳ ( ಆರ್ ಜೆಡಿ) ಶನಿವಾರ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬಿಹಾರದಲ್ಲಿನ ಲಕ್ಷಾಂತರ ಯುವಕರಿಗೆ ಉದ್ಯೋಗವಕಾಶ ಒದಗಿಸಲು ಬದ್ಧವಾಗಿರುವುದಾಗಿ ಪುನರ್ ಉಚ್ಛರಿಸಿದೆ.

ಬಿರೇನ್ ಸಿಂಗ್ ಮಣಿಪುರ ಸಿಎಂ ಆಗಿ ಅವಿರೋಧವಾಗಿ ಆಯ್ಕೆ

ಉತ್ತರಪ್ರಭ ಸುದ್ದಿಮಣಿಪುರ: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಣಿಪುರದ ಹಂಗಾಮಿ ಸಿಎಂ ಎನ್ ಬಿರೇನ್ ಸಿಂಗ್…

ಬಿಜೆಪಿ ನಾಯಕನ ಮುಖಕ್ಕೆ ಮಸಿ ಬಳಿದ ಶಿವಸೇನೆ ಕಾರ್ಯಕರ್ತರು!

ಮುಂಬಯಿ : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ವಿರುದ್ಧ ಟೀಕೆ ಮಾಡಿದ್ದಾರೆ ಎಂಬ ಕಾರಣಕ್ಕೆ ಬಿಜೆಪಿ ನಾಯಕನ ಮುಖಕ್ಕೆ ಶಿವಸೇನೆ ಕಾರ್ಯಕರ್ತರು ಮಸಿ ಬಳೆದಿರುವ ಘಟನೆ ನಡೆದಿದೆ.

ದಕ್ಷಿಣ ಆಫ್ರಿಕಾ ಕ್ರಿಕೇಟ್ ಆಟಗಾರನಿಗೆ ಕೊರೋನಾ ಪಾಸಿಟಿವ್..!

ದಕ್ಷಿಣ ಆಫ್ರಿಕಾದ ಕ್ರಿಕೆಟ್ ಆಟಗಾರನಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಈ ಮೂಲಕ ಕೊರೊನಾ ಪಾಸಿಟಿವ್ ಬಂದ ಮೂರನೇ ಕ್ರಿಕೆಟ್ ಆಟಗಾರ ಸೋಲೋ ಆಗಿದ್ದಾರೆ.