ಶಿವನಿಗೆ ತಲೆಯ ನೈವೇದ್ಯ ಮಾಡಲು ಪ್ರಯತ್ನಿಸಿದ ವ್ಯಕ್ತಿ!

ಲಕ್ನೋ : ವ್ಯಕ್ತಿಯೊಬ್ಬ ಶಿವನಿಗೆ ತನ್ನೇ ತಲೆಯನ್ನೇ ಅರ್ಪಿಸಿರುವ ವಿಚಿತ್ರ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಈ ಘಟನೆ ಉತ್ತರಪ್ರದೇಶದ ಕುರಾರ ಪ್ರದೇಶದಲ್ಲಿ ನಡೆದಿದೆ. 49 ವರ್ಷದ ರುಕ್ಮಾನಿ ಮಿಶ್ರಾ ಎಂಬ ವ್ಯಕ್ತಿಯೇ ಶಿವನಿಗೆ ತನ್ನ ತಲೆಯನ್ನು ಅರ್ಪಿಸಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಶಿವನಿಗೆ ತನ್ನನ್ನು ತಾನೇ ಅರ್ಪಿಸಿಕೊಳ್ಳುವ ಸಲುವಾಗಿ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ.

ಈ ವ್ಯಕ್ತಿ ಶನಿವಾರ ರಾತ್ರಿ ಕೋಟೇಶ್ವರ ದೇವಸ್ಥಾನಕ್ಕೆ ತೆರಳಿ ಅಲ್ಲಿ ತನ್ನ ಕುತ್ತಿಗೆಯನ್ನು ಚೂರಿಯಿಂದ ಕೊಯ್ದುಕೊಂಡಿದ್ದಾರೆ. ಈ ವೇಳೆ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದ. ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಸದ್ಯ ಈ ವ್ಯಕ್ತಿಯ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Exit mobile version