ದುಬೈ : ಗೆಲ್ಲುವ ಫೇವರಿಟ್ ತಂಡವಾಗಿದ್ದ ಆರ್ ಸಿಬಿಯು ಚೆನ್ನೈ ತಂಡದ ವಿರುದ್ಧ ಹೀನಾಯ ಸೋಲು ಕಂಡಿದೆ. ಇದಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಈ ಬಾರಿ ಆರ್ ಸಿಬಿಗೆ ಗೋ ಗ್ರೀನ್ ಮಂತ್ರ ಯಶಸ್ಸು ನೀಡಲಿಲ್ಲ. ಹಸಿರು ಜೆರ್ಸಿ ತೊಟ್ಟಿ ಆಡಿದ ಪ್ರತಿಯೊಂದು ಪಂದ್ಯದಲ್ಲಿಯೂ ಆರ್ ಸಿಬಿ ಭರ್ಜರಿ ಜಯ ದಾಖಲಿಸಿತ್ತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಆರ್ ಸಿಬಿಗೆ ಬ್ಯಾಟ್ಸಮನ್ ಗಳ ವೈಫಲ್ಯ ತಲೆನೋವಾಯಿತು. ಪರಿಣಾಮ ತಂಡವು ಕೇವಲ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 145 ರನ್ ಮಾತ್ರ ಗಳಿಸಿತು.

ಗುರಿ ಬೆನ್ನಟ್ಟಿದ ಚೆನ್ನೈ ಪಡೆ 18.4 ಓವರ್ ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 150 ರನ್‌ ಸಿಡಿಸಿತು. ಈ ಗೆಲುವಿನೊಂದಿಗೆ ಪ್ಲೇ ಆಫ್ ಕನಿಸಿಗೆ ಚೆನ್ನೈ ತಂಡ ಜೀವ ನೀಡಿತು. ಪಂದ್ಯ ಮುಕ್ತಾಯದ ನಂತರ ಆರ್ ಸಿಬಿ ತಂಡದ ನಾಯಕ ವಿರಾಟ್ ಮಾತನಾಡಿ, ಸೋಲಿಗೆ ಬೌಲರ್‌ ಗಳ ಕೆಟ್ಟ ಪ್ರದರ್ಶನ ಕಾರಣವಾಯಿತು.

ಪಿಚ್‌ ವರ್ತಿಸಿದ ರೀತಿ ತದ್ವಿರುದ್ಧವಾಗಿತ್ತು. ಅಲ್ಲದೇ, ನೇರ ಹಾಗೂ ನಿಖರತೆಯ ಬೌಲಿಂಗ್ ದಾಳಿ ಕಾಣಿಸಲಿಲ್ಲ. ಬೌಂಡರಿ ಬಾರಿಸಲು ಅನುಕೂಲವಾಗುವ ಬೌಲ್ ಗಳನ್ನೇ ಹೆಚ್ಚಾಗಿ ಎಸೆಯಲಾಯಿತು. ಆದರೆ, ಎದುರಾಳಿ ತಂಡ ಹೆಚ್ಚು ನಿಖರವಾಗಿ ಬೌಲಿಂಗ್‌ ಮಾಡಿ ನಮ್ಮ ಸ್ಟಂಪ್ಸ್ ಗಳ ಮೇಲೆಯೇ ಗುರಿ ಇಟ್ಟಿತ್ತು ಎಂದು ಹೇಳಿದ್ದಾರೆ.

ರಾಯಲ್‌ ಚಾಲೆಂಜರ್ಸ್‌ ತಂಡವು 14 ಅಂಕಗಳೊಂದಿಗೆ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಮುಂಬಯಿ ಇಂಡಿಯನ್ಸ್ ಹಾಗೂ ದೆಹಲಿ ಕ್ಯಾಪಿಟಲ್ಸ್ ತಂಡಗಳೊಂದಿಗೆ ಸಮನಾದ ಅಂಕ ಸಾಧಿಸಿದೆ. ಹೀಗಾಗಿ ಮುಂದಿನ ಮೂರು ಪಂದ್ಯಗಳು ಆರ್ ಸಿಬಿಗೆ ನಿರ್ಣಾಯಕ ಅಂಕ ಗಳಿಗೆ 16ಕ್ಕೆ ಏರಿಕೆ ಕಂಡರೆ ಪ್ಲೇ ಆಫ್ ಸ್ಥಾನ ಖಾತ್ರಿಯಾಗಲಿದೆ.

Leave a Reply

Your email address will not be published. Required fields are marked *

You May Also Like

ಭರ್ಜರಿ ಫಾರ್ಮ್ ಗೆ ಮರಳಿದ ತಂಡದ ಸ್ಟಾರ್ ಆಟಗಾರರಿಗೆ ಗಿಫ್ಟ್ ನೀಡಿದ ಪ್ರೀತಿ ಜಿಂಟಾ!

ದುಬೈ : ಪ್ರಾರಂಭದಲ್ಲಿ ಸೋಲಿನಿಂದ ಕಂಗೆಟ್ಟಿದ್ದ ಪಂಜಾಬ್ ತಂಡ ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಭರ್ಜರಿ ಫಾರ್ಮ್ ಗೆ ಮರಳಿದೆ. ಅಲ್ಲದೇ, ಕಳೆದ ಮೂರು ಪಂದ್ಯಗಳನ್ನು ಗೆದ್ದು ಬೀಗಿದೆ. ಹೀಗಾಗಿ ತಂಡದ ಮಾಲಕರಾದ ಪ್ರೀತಿ ಜಿಂಟಾ ಅವರು ತಂಡದ ನಾಯಕ ಹಾಗೂ ಗೇಲ್ ಗೆ ಉಡುಗೊರೆ ನೀಡಿದ್ದಾರೆ.

ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಅಗತ್ಯ ಪ್ರೋ. P. S. ಅಣ್ಣಿಗೇರಿ

ನರಗುಂದ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಬೆಳೆಸಲು ಶ್ರೀ ಸಿದ್ದೇಶ್ವರ ಪ್ರಥಮ ದರ್ಜೆ ಕಾಲೇಜು ನರಗುಂದ ಕಾಲೇಜಿನಲ್ಲಿ…

ಕೆ. ಎಚ್. ಪಾಟೀಲ ಫುಟಬಾಲ್ ಲೀಗ್-2022 ಉದ್ಘಾಟನೆ

ಉತ್ತರಪ್ರಭ ಸುದ್ದಿ ಗದಗ: ಕರ್ನಾಟಕ ಸ್ಫೋರ್ಟ್ಸ್ ಆ್ಯಂಡ್ ಎಜ್ಯುಕೇಶನ್ ಅಕ್ಯಾಡೆಮಿ ಗದಗ ಇವರ ವತಿಯಿಂದ ಕೆ.…

ಸಾಲು ಮರದ ತಿಮ್ಮಕ್ಕನನ್ನು ನೆನೆದ ಬಜ್ಜಿ

ಭಾರತ ಕ್ರಿಕೆಟ್ ತಂಡದ ಆಟಗಾರ ಹರ್ಭಜನ್ ಸಿಂಗ್, ರಾಜ್ಯದ ಹೆಮ್ಮೆಯ ತಾಯಿಯನ್ನು ನೆನೆದು ಟ್ವೀಟ್ ಮಾಡಿದ್ದಾರೆ.ಸಾಲುಮರದ ತಿಮ್ಮಕ್ಕ ಅವರನ್ನು ಭಜ್ಜಿ ನೆನೆದು ಟ್ವೀಟ್ ಮಾಡಿದ್ದಾರೆ.