ವಿನಯ್ ಕುಲಕರ್ಣಿ, ಎಂ.ಬಿ.ಪಾಟೀಲ್ ಬಿಜೆಪಿ ಸೇರ್ಪಡೆ ವಿಚಾರ ಪಕ್ಷದಲ್ಲಿ ಚರ್ಚೆ ನಡೆದಿಲ್ಲ

prahllad joshi hubballi

ಚೀನಾ ವಿಚಾರ ರಾಹುಲ್ ಹೇಳಿಕೆ ಹಾಸ್ಯಾಸ್ಪದ : ಪ್ರಹ್ಲಾದ್ ಜೋಷಿ

ಹುಬ್ಬಳ್ಳಿ: ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಎಂ.ಬಿ ಪಾಟೀಲ್ ಬಿಜೆಪಿ ಸೇರ್ಪಡೆ ವಿಚಾರ ಕುರಿತು ನಮ್ಮ ಪಕ್ಷದಲ್ಲಿ ಈ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಜಗದೀಶ್ ಶೆಟ್ಟರ್ ಹಾಗೂ ನನ್ನ ಜೊತೆ ಯಾವುದೇ ನಾಯಕರು ಮಾತನಾಡಿಲ್ಲ. ನಮ್ಮ ಜೊತೆ ಚರ್ಚಿಸದೆ ಹೇಗೆ ಅವರನ್ನು ಪಕ್ಷಕ್ಕೆ ಕರೆದುಕೊಳ್ಳಲು ಸಾದ್ಯವೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದರು.

ನಾನು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮುಖಂಡ ಸಂತೋಷ ಜೊತೆಗೆ ಚರ್ಚಿಸಿದ್ದೇನೆ. ಈ ಬಗ್ಗೆ ಯಾವುದೇ ವಿಚಾರಗಳು ಚರ್ಚೆಗೆ ಬಂದಿಲ್ಲ. ಮಾಧ್ಯಮದಲ್ಲಿ ವರದಿ ಬಂದಿದ್ದು ಮಾತ್ರ ನನಗೆ ಗೊತ್ತು ಎಂದು ಹೇಳಿದರು.

Exit mobile version