ಲಕ್ನೋ : ರಾಜಕೀಯ ಮುಖಂಡರೊಬ್ಬರ ಪತ್ನಿ ಫೇಸ್‍ ಬುಕ್ ಗೆಳೆಯನ ಜೊತೆ ಓಡಿ ಹೋಗಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹ ನಗರದ ಕೊತವಾಲಿಯಲ್ಲಿ ನಡೆದಿದೆ.

ಆದರೆ, ಇನ್ನೊಂದೆಡೆ ಈ ಮಹಿಳೆಯ ಇಬ್ಬರು ಮಕ್ಕಳು ತಾಯಿಗಾಗಿ ಕಣ್ಣೀರು ಹಾಕುತ್ತಿದ್ದಾರೆ. ಮಹಿಳೆಯ ಪತಿ ಸ್ಥಳೀಯ ಪ್ರಭಾವಿ ಮುಖಂಡರಾಗಿದ್ದಾರೆ. ಸದ್ಯ ತಮ್ಮ ಪತ್ನಿಯ ಕುರಿತು ದೂರು ಸಲ್ಲಿಸಲು ಹಿಂದೇಟು ಹಾಕುತ್ತಿದ್ದು, ತಮ್ಮ ಬೆಂಬಲಿಗರು ಮತ್ತು ಕುಟುಂಬಸ್ಥರ ಸಹಾಯದಿಂದ ಪತ್ನಿಯನ್ನು ಹುಡುಕಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಈ ಮಹಿಳೆ ಸದಾ ಕಾಲಾ ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿರುತ್ತಿದ್ದರು. ವ್ಯಕ್ತಿಯೊಬ್ಬ ಇವರಿಗೆ ಫೇಸ್ ಬುಕ್ ಮೂಲಕ ಪರಿಚಯವಾಗಿದ್ದ. ಹೀಗಾಗಿ ಆತನ ಮೇಲೆಯೇ ಸದ್ಯ ಶಂಕೆ ವ್ಯಕ್ತಪಡಿಸಿದ್ದಾರೆ. 

ಮೊದಲಿಗೆ ಸಂಬಂಧಿಕರ ಮನೆ ಅಥವಾ ಊರಿಗೆ ತೆರಳಿರಬಹುದು ಎಂದು ಕುಟುಂಬಸ್ಥರು ಅಂದಾಜಿಸಿದ್ದರು. ಆದರೆ, ಎಲ್ಲ ಕಡೆ ವಿಚಾರಿಸಿದ ನಂತರ ಮಹಿಳೆ ಪತ್ತೆಯಾಗದಿದ್ದಾಗ ಫೇಸ್‍ ಬುಕ್ ಗೆಳೆಯನ ಜೊತೆ ಪಲಾಯನ ಮಾಡಿರುವ ಖಚಿತ ಸುಳಿವು ಸಿಕ್ಕಿದೆ.

Leave a Reply

Your email address will not be published. Required fields are marked *

You May Also Like

ಎಸ್.ಎಸ್.ಎಲ್ಸಿ ಪರೀಕ್ಷೆ ಕುರಿತು ಶಿಕ್ಷಣ ಸಚಿವರ ವಿರುದ್ಧ ದೂರು ದಾಖಲು!

ಬೆಂಗಳೂರು: ರಾಜ್ಯದಲ್ಲಿ ಜೂನ್‌ 25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಬಗ್ಗೆ ವೇಳಾಪಟ್ಟಿ ಕೂಡ ಬಿಡುಗಡೆಯಾಗಿತ್ತು. ಈಗಾಗಲೇ…

ಆಲಮಟ್ಟಿಯಲ್ಲಿ ಪುಟ್ಟ ಮಕ್ಕಳ ಸಸ್ಯ ಸಂಭ್ರಮ

ಗುಲಾಬಚಂದ ಜಾಧವಆಲಮಟ್ಟಿ: ಮೊಗ್ಗಿನ ಎಳೆ ಮನಗಳಲ್ಲಿ ಸಸ್ಯ ಸಂಭ್ರಮ ಮೊಳಗಿತ್ತು. ಅಮಿತೋತ್ಸಾಹದ ಅಲೆಯಲ್ಲಿ ಹಸಿರೀಕರಣದ ಕಾಯಕಕ್ಕೆ…

ತಾಲೂಕು ಕೇಂದ್ರಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

ಗದಗ ಜಿಲ್ಲೆಯ ತಾಲೂಕಾ ಕೇಂದ್ರಗಳಿಗೆ ಲೋಕಾಯುಕ್ತ ಅಧಿಕಾರಿಗಳು ಪ್ರತಿ ತಿಂಗಳು ಭೇಟಿ ನೀಡುವ ಕಾರ್ಯಕ್ರಮ ನಿಗದಿಪಡಿಸಲಾಗಿದೆ.

ಸಂಕ್ರಾಂತಿಯ ಪುಣ್ಯಸ್ನಾನ : ಇಬ್ಬರು ಯುವಕರು ನದಿ ಪಾಲು.

ರಾಯಚೂರು:ಮಕರ ಸಂಕ್ರಾಂತಿಯ ಪುಣ್ಯಸ್ನಾನ ಮಾಡುವುದಕ್ಕಾಗಿ ತೆರಳಿದ ರಾಯಚೂರಿನ ಇಬ್ಬರು ಯುವಕರು ಕೃಷ್ಣಾ ನದಿಯ ಪಾಲಾಗಿದ್ದಾರೆ.ಸಂಕ್ರಾಂತಿ ಪೀಡೆ…