ಮುಂಬಯಿ : ನಟಿ ಮಾಳವಿ ಮಲ್ಹೋತ್ರಾ ಅವರ ಮೇಲೆ ಚಾಕುವಿನಿಂದ ದಾಳಿ ಮಾಡಿರುವ ಘಟನೆ ನಡೆದಿದೆ.

ನಿರ್ಮಾಪಕ ಎಂದು ಹೇಳಿಕೊಂಡಿರುವ ಯೋಗೇಶ್ ಎಂಬ ಹೆಸರಿನ ವ್ಯಕ್ತಿ ನಟಿಯ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡಿರುವ ನಟಿಯನ್ನು ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಳವಿ ಹಾಗೂ ಯೋಗೇಶ್ ಫೇಸ್ ಬುಕ್ ನಲ್ಲಿ ಸ್ನೇಹಿತರಾಗಿದ್ದರು. ಯೋಗೇಶ್, ನಟಿಯ ಮುಂದೆ ಪ್ರೀತಿಯ ಪ್ರಸ್ತಾಪ ಇಟ್ಟಿದ್ದ. ಇದಕ್ಕೆ ನಟಿ ತಿರಸ್ಕರಿಸಿದ್ದರು. ಹೀಗಾಗಿಯೇ ಹಲ್ಲೆ ನಡೆಸಿರಬಹುದು ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ನಟಿ ಪ್ರಾಣಕ್ಕೆ ಯಾವುದೇ ತೊಂದರೆಯಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಯೋಗೇಶ್ ಮತ್ತು ಮಾಳವಿ ಮಧ್ಯೆ ಒಳ್ಳೆಯ ಸ್ನೇಹವಿತ್ತು ಎನ್ನಲಾಗಿದ್ದು, ಆದ್ರೆ ಯೋಗೇಶ್ ಒನ್ ಸೈಡ್ ಲವ್ ನಲ್ಲಿ ಇದ್ದ ಎಂದು ತಿಳಿದು ಬಂದಿದೆ.

ಚಾಕು ಹಾಕಿ ಸ್ಥಳದಿಂದ ಆರೋಪಿ ಯೋಗೇಶ್ ಪರಾರಿಯಾಗಿದ್ದಾನೆ ಎಂದು ಮಾಳವಿ ಮಲ್ಹೋತ್ರಾ ದೂರು ಸಲ್ಲಿಸಿದ್ದಾರೆ. ಕೊಲೆ ಯತ್ನದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸ್ಥಳೀಯ ಸಿಸಿಟಿವಿ ಫೂಟೇಜ್ ವಶಕ್ಕೆ ಪಡೆದು ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *

You May Also Like

ತನ್ನ ದಾಖಲೆ ತಾನೇ ಮುರಿದು ಆತಂಕ ಸೃಷ್ಟಿಸುತ್ತಿರುವ ಮಹಾಮಾರಿ

ಬೆಂಗಳೂರು : ದೇಶದಲ್ಲಿ ಕೊರೊನಾ ದಿನದಿಂದ ದಿನಕ್ಕೆ ತನ್ನ ದಾಖಲೆಯನ್ನೇ ಮುರಿದು ಸಾಗುತ್ತಿದೆ. ನಿನ್ನೆ ಒಂದೇ…

ಹೆಚ್ಚುವರಿ ಸೇನೆ ನಿಯೋಜಿಸಿದ: ಪಾಕ್ !

ನವದೆಹಲಿ : ವಾಸ್ತವಿಕ ಗಡಿ ರೇಖೆ(ಎಲ್ಎಸಿ)ಯಲ್ಲಿ ಹೆಚ್ಚುವರಿ ಸೇನೆ ನಿಯೋಜಿಸಿ ಚೀನಾ ಉಪಟಳ ನೀಡುತ್ತಿರುವ ಹಿನ್ನೆಲೆಯಲ್ಲಿಯೇ…

ಬ್ಯಾಂಕ್ ಗೆ 67 ಕೋಟಿ ವಂಚಿಸಿದ ಬಿಜೆಪಿ ಶಾಸಕ..!

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾಲ ಮಾಡಿ ರೂ.67 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣದಡಿ…

ಆಮ್ಲಜನಕ ಟ್ಯಾಂಕ್ ಸೋರಿಕೆ : 11 ಸಾವು

ಮಹರಾಷ್ಟçದ ನಾಸಿಕ್‌ನಲ್ಲಿ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಮ್ಲಜನಕ ಟ್ಯಾಂಕ್ ಸೋರಿಕೆಯಿಂದ 11 ಜನ ಸಾವನ್ನಪ್ಪಿದ್ದಾರೆ.