ಮೈಸೂರು :  ತಾಯಿ ಚಾಮುಂಡೇಶ್ವರಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹರಿಕೆ ತೀರಿಸಿದ್ದಾರೆ.  

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು, ನಾಡ ಹಬ್ಬ ಯಶಸ್ವಿಯಾಗಲಿ ಎಂದು ಹರಕೆ ಹೊತ್ತಿದ್ದರು. ಹೀಗಾಗಿ ತಮ್ಮ ತಂದೆ, ತಾಯಿ ಹಾಗೂ ಮಗುವಿನೊಂದಿಗೆ ಚಾಮುಂಡಿಯ ಪಲ್ಲಕ್ಕಿ ರಥ ಎಳೆಯುವ ಮೂಲಕ ಹರಕೆ ತೀರಿಸಿದ್ದಾರೆ. ನಾಡ ಹಬ್ಬದ ಸಂದರ್ಭದಲ್ಲಿಯೇ ಅವರು ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದರು. ಹೀಗಾಗಿ ಇದು ಸುಸೂತ್ರವಾಗಿ ನಡೆಯಲಿ ಎಂಬ ಕಾರಣಕ್ಕೆ ಹರಕೆ ಹೊತ್ತಿದ್ದಾರೆ. 

ನವರಾತ್ರಿಯ 9ನೇ ದಿನ ಪಲ್ಲಕ್ಕಿ ರಥ ಎಳೆದು ಹರಕೆ ತೀರಿಸಿದ್ದಾರೆ. ದಸಾರದ ಪ್ರಮುಖ ಆಕರ್ಷಣೆ ಎಂದರೆ ದು ಜಂಬೂ ಸವಾರಿ. ದೇಶ – ವಿದೇಶದಿಂದ ಜನರು ಆಗಮಿಸಿ ಇದನ್ನು ಕಣ್ಣು ತುಂಬಿಕೊಳ್ಳುತ್ತಿದ್ದರು. ಆದರೆ, ಈ ವರ್ಷ ಕೊರೊನಾದ ಹಿನ್ನೆಲೆಯಲ್ಲಿ ಇದು ಸರಳವಾಗಿ ನಡೆದಿದೆ.

ಕೇವಲ 500 ಮೀಟರ್ ಗೆ ಮಾತ್ರ ಸೀಮಿತವಾಗುವಂತೆ ಸವಾರಿ ನಡೆಸಲಾಗಿತ್ತು. ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ನಂತರ, ಕುಂಭಲಗ್ನದಲ್ಲಿ ಸಿಎಂ ಯಡಿಯೂರಪ್ಪ ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ನಂದಿಧ್ವಜಕ್ಕೆ ಪೂಜೆ ನೆರವೇರಿಸಿದ್ದರು. ಹಬ್ಬ ಈ ಬಾರಿ ಕೇವಲ 23 ನಿಮಿಷಗಳಲ್ಲಿ ಪೂರ್ತಿಯಾಯಿತು. 

Leave a Reply

Your email address will not be published. Required fields are marked *

You May Also Like

ಆಹಾರ ಸಾಮಾಗ್ರಿಗಾಗಿ ಶೀಲ್ ಡೌನ್ ಪ್ರದೇಶದ ಜನರ ಧರಣಿ

ಹಾವೇರಿ: ಆಹಾರ ಸಾಮಗ್ರಿ ನೀಡುತ್ತಿಲ್ಲವೆಂದು ಸೀಲ್ ಡೌನ್ ಪ್ರದೇಶ ಜನರು ಧರಣಿ ನಡೆಸಿದ ಘಟನೆ ಹಾವೇರಿ…

ರೈತ ಕಷ್ಟಗಳನ್ನು ಮೆಟ್ಟಿ ನಿಲ್ಲಬೇಕು : ಕವಿತಾ ಮಿಶ್ರಾ

ಕೃಷಿ ಕ್ಷೇತ್ರ ನಶಿಸಿ ಹೊಗುತ್ತಿದೆ. ಇಂದು ರೈತರು ತಲೆ ಮೇಲೆ ಸಾಲ ಹೊತ್ತು ಬದುಕು ಎದುರಿಸುವುದು ಕಷ್ಟಸಾಧ್ಯವಾಗಿದೆ. ಇದರಿಂದಾಗಿ ಆರ್ಥಿಕ ಸಂಕಷ್ಟ ಎದುರಿಸಲಾಗದೇ ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾರೆ ಎಂದು ಕೃಷಿಕ ಮಹಿಳೆ ಕವಿತಾ ಮಿಶ್ರಾ ಹೇಳಿದರು.

ಗದಗಿನ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠ ಶಾಲೆಯ ಸಿ.ಬಿ.ಎಸ್.ಇ ಫಲಿತಾಂಶ ಶೇ.100 ಕ್ಕೆ 100 ರಷ್ಟು

ಗದಗ: ಸ್ಥಳೀಯ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾ ಪೀಠದ ಸಿ.ಬಿ.ಎಸ್.ಇ. ಶಾಲೆಗೆ ೨೦೨೧-೨೨ನೇ ಸಾಲಿನ ಸಿ.ಬಿ.ಎಸ್.ಇ…

ಮೀನು ಸಾರು ಮಾಡಿವಿ ಬಾ ಅಪ್ಪಾ, ಎನ್ನುವ ಕರುಳಿನ ಕೂಗಿಗೂ ಬಾರದೇ ಹೋದ ಅಪ್ಪ..!

ಕೂಲಿ ಕೆಲಸ ಮುಗಿಸಿ ಮನೆಗೆ ಬಂದ ಅಪ್ಪನನ್ನು ಕಂಡ ಮಕ್ಕಳು ಅಪ್ಪ, ಕೈಯಲ್ಲಿ ಹಿಡಿದುಕೊಂಡು ಬಂದ ಚೀಲವನ್ನೆ ಕಣ್ಣರಳಿಸಿ ನೋಡಿದ್ದಾರೆ. ಅಪ್ಪ ತಂದ ಮೀನು ಕಂಡು ಹಿರಿಹಿರಿ ಹಿಗ್ಗಿದ್ದಾರೆ. ಮಕ್ಳಾ ಮೀನು ಸಾರು ರೆಡಿ ಆಗ್ಲಿ ನಾನು ಸ್ವಲ್ಪ ಹೊರಗ್ ಹೋಗಿ ಬರ್ತಿನಿ ಅಂತ ಹೊರ ನಡೆದ ಅಪ್ಪ.