ನವದೆಹಲಿ: 2002ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಪ್ರಧಾನಿ ಅವರು ಎಸ್ ಐಟಿ ವಿಚಾರಣೆ ಎದುರಿಸಿದ್ದರು. ಈ ಕುರಿತು ಕೇಳಿದ್ದ ಬರೋಬ್ಬರಿ 100 ಪ್ರಶ್ನೆಗಳಿಗೆ 9 ಗಂಟೆಗಳ ಕಾಲ ಉತ್ತರಿಸಿದ್ದಾರೆ. ಈ ಅವಧಿಯಲ್ಲಿ ಟೀ ಕೂಡ ಅವರು ಸೇವಿಸಿರಲಿಲ್ಲ ಎಂದು ತನಿಖೆಯ ತಂಡದಲ್ಲಿದ್ದ ಆರ್.ಕೆ. ರಾಘವನ್ ಹೇಳಿದ್ದಾರೆ. 

ಅವರು ತಮ್ಮ ಹೊಸ ಪುಸ್ತಕ ಎ ರೋಡ್ ವೆಲ್ ಟ್ರಾವಲ್ಡ್ ದಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಎಸ್ ಐಟಿ ಅವರು ವಿಚಾರಣೆಗೆ ಕರೆದಾಗ ಮೋದಿ ಅವರು ಗಾಂಧಿನಗರದಲ್ಲಿರುವ ಕಚೇರಿಗೆ ಬಂದಿದ್ದರು. ಬರುವಾಗ ಅವರೇ ಒಂದು ಬಾಟಲ್ ನೀರು ತಂದಿದ್ದರು ಎಂದು ತಿಳಿಸಿದ್ದಾರೆ. 

2002ರ ಗುಜರಾತ್ ಹತ್ಯಾಕಾಂಡದ ತನಿಖಾ ತಂಡಕ್ಕೆ ನೇಮಕಗೊಳ್ಳುವ ಮೊದಲು ರಾಘವನ್ ಸಿಬಿಐಯ ನೇತೃತ್ವವನ್ನು ಕೂಡ ವಹಿಸಿದ್ದರು. ಅವರು ದಕ್ಷಿಣ ಆಫ್ರಿಕಾ ಕ್ರಿಕೆಟ್ ಪಂದ್ಯಗಳ ಮ್ಯಾಚ್ ಫಿಕ್ಸಿಂಗ್, ಮೇವು ಹಗರಣ ಸೇರಿದಂತೆ ಅನೇಕ ವರ್ಷಗಳವರೆಗೆ ಹಲವು ಉನ್ನತ ಮಟ್ಟದ ತನಿಖೆ ನಡೆಸಿದ್ದಾರೆ. 

ಬೇರೆಡೆ ವಿಚಾರಣೆ ನಡೆಸಿದರೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಖುದ್ದಾಗಿ ಅವರೇ ಎಸ್ ಐಟಿ ಕಚೇರಿಗೆ ಬರಬೇಕೆಂದು ಹೇಳಿ ಕಳುಹಿಸಲಾಗಿತ್ತು. ಅವರು ನಮ್ಮ ನಿಲುವನ್ನು ಅರ್ಥ ಮಾಡಿಕೊಂಡು ಉತ್ಸಾಹದಿಂದ ಗಾಂಧಿನಗರದಲ್ಲಿರುವ ಎಸ್ ಐಟಿ ಸರ್ಕಾರಿ ಕಚೇರಿಗೆ ಖುದ್ದಾಗಿ ವಿಚಾರಣೆ ಎದುರಿಸಿದ್ದರು. ಈ ವಿಚಾರಣೆಯನ್ನು ತಂಡದ ಸದಸ್ಯ ಅಶೋಕ್ ಮಲ್ಹೋತ್ರಾ ಅವರು ನಡೆಸಿದ್ದರು ಎಂದು ಮಾಜಿ ಪೊಲೀಸ್ ಅಧಿಕಾರಿ ರಾಘವನ್ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮೋದಿ ಅವರು ಯಾವೊಂದು ಪ್ರಶ್ನೆಗೂ ಉತ್ತರಿಸದೆ ಉಳಿಯಲಿಲ್ಲ. ಪ್ರತಿಕ್ರಿಯೆ ನೀಡುವಾಗ ತಾಳ್ಮೆಯಿಂದ, ಉತ್ಸಾಹದಿಂದಲೇ ವಿವರಿಸುತ್ತಿದ್ದರು. ಮಧ್ಯಾಹ್ನ ಊಟಕ್ಕೆ ವಿರಾಮ ನೀಡಬೇಕೆ ಎಂದು ಕೇಳಿದ್ದಾಗ ಬೇಡವೆಂದಿದ್ದರು. ಅವರೇ ಕುಡಿಯಲು ನೀರು ಬಾಟಲ್ ತಂದಿದ್ದರು. ಒಂದು ಕಪ್ ಚಹ ಕೂಡ ಕುಡಿಯಲಿಲ್ಲ. ಅಷ್ಟು ಶಕ್ತಿ, ಉತ್ಸಾಹ, ಏಕಾಗ್ರತೆ ಇರುವ ವ್ಯಕ್ತಿ ಅವರು ಎಂದು ಹೊಗಳಿದ್ದಾರೆ. 

Leave a Reply

Your email address will not be published. Required fields are marked *

You May Also Like

ಪೊಲೀಸರಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ!

ಒಡಿಶಾ : ಅಪ್ರಾಪ್ತ ಬಾಲಕಿಯ ಮೇಲೆ ಪೊಲೀಸ್ ಠಾಣೆಯ ಸಿಬ್ಬಂದಿಯೇ ಸಾಮೂಹಿಕ ಅತ್ಯಾಚಾರ ಮಾಡಿರುವ ಅಮಾನವೀಯ…

ರಾಷ್ಟಪತಿ ಭಾಷಣಕ್ಕೆ ಬಹಿಷ್ಕರಿಸಲು 16 ವಿಪಕ್ಷಗಳಿಂದ ನಿರ್ಧಾರ

ನಾಳೆಯಿಂದ ಅಧಿವೇಶನ ಸಂಸತ್‌ ಬಜೆಟ್‌ ಆರಂಭವಾಗಲಿದ್ದು, ಕೇಂದ್ರದ ನೂತನ ಕೃಷಿ ಮಸೂದೆಗಳನ್ನ ವಿರೋಧಿಸಿ ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಗುಲಾಂ ನಬಿ ಹೇಳಿದ್ದಾರೆ.

ಎಡಗೈ ಆಟಗಾರರು ನಿಜವಾಗಿಯೂ ಪ್ರತಿಭಾವಂತರೆ?

ಭಾರತ ತಂಡದ ಪ್ರತಿಭಾವಂತೆ ಹಾಗೂ ಸ್ಟೈಲಿಷ್ಟ್ ಆಟಗಾರ್ತಿ ಸ್ಮೃತಿ ಮಂಧನಾ ಅವರು ಶನಿವಾರ ತಮ್ಮ 24ನೇ ಹುಟ್ಟು ಹಬ್ಬದ ಸಂಭ್ರಮ ಆಚರಿಸಿಕೊಂಡಿದ್ದಾರೆ. ಅವರಿಗೆ ಖ್ಯಾತ ಆಟಗಾರರು ಹಾಗೂ ಅಭಿಮಾನಿ

ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಕುಡಿದ ಐವರ ಸಾವು – ಹಲವರು ಗಂಭೀರ

ತಿರುವನಂತಪುರಂ : ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಸೇವಿಸಿದ ಐವರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಾಂಜಿಕೋಡ್ನನಲ್ಲಿ ನಡೆದಿದೆ.